AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ-ಬೆಟಗೇರಿ ನಗರದಲ್ಲಿ ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ನಡುಕ

ನೂರಾರು ಕೋಟಿ ರೂ. ಮೌಲ್ಯದ ನಗರಸಭೆ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲಾಗಿದೆ. ನಗರಸಭೆ ಹಿಂದಿನ ಪ್ರಭಾರಿ ಪೌರಾಯುಕ್ತ ಪ್ರಶಾಂತ್​ ವರಗಪ್ಪನವರ್​ ಎಂಬುವವರ ದೂರು ಆಧರಿಸಿ ಗದಗ ನಗರ ಸಭೆಯ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ಸದಸ್ಯರಾದ ಅನಿಲ್ ಅಬ್ಬಿಗೇರಿ, ಗೂಳಪ್ಪ ಮುಷಿಗೇರಿ ವಿರುದ್ಧ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. 

ಗದಗ-ಬೆಟಗೇರಿ ನಗರದಲ್ಲಿ ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ನಡುಕ
ಗದಗ-ಬೆಟಗೇರಿ ನಗರಸಭೆ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on:Aug 16, 2024 | 9:06 AM

ಗದಗ, ಆಗಸ್ಟ್​ 16: ಕರ್ನಾಟಕದಲ್ಲಿ ಮುಡಾ ಹಗರಣ ಮತ್ತು ವಾಲ್ಮೀಕ ಹಗರಣಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಈ ಮಧ್ಯೆ ಗದಗ-ಬೆಟಗೇರಿ (Gadag-Betageri) ಅವಳಿ ನಗರದಲ್ಲಿ ನಗರಸಭೆ ಆಸ್ತಿ ಹಗರಣ ಭಾರಿ ಸಂಚಲನ ಮೂಡಿಸಿದೆ. ಹೀಗಾಗಿ ಮಾಜಿ ಅಧ್ಯಕ್ಷೆ, ಸದಸ್ಯರು, ಲೀಜ್​ ದಾರರಿಗೆ ನಡುಕು‌ ಶುರುವಾದಂತಾಗಿದೆ. ಬಿಜೆಪಿ (bjp) ಆಡಳಿತದ ವಿರುದ್ಧ ಅವಳಿ ನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲು

ನೂರಾರು ಕೋಟಿ ರೂ. ಮೌಲ್ಯದ ನಗರಸಭೆ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲಾಗಿದೆ. ನಗರಸಭೆ ಹಿಂದಿನ ಪ್ರಭಾರಿ ಪೌರಾಯುಕ್ತ ಪ್ರಶಾಂತ್​ ವರಗಪ್ಪನವರ್​ ಎಂಬುವವರ ದೂರು ಆಧರಿಸಿ ಗದಗ ನಗರ ಸಭೆಯ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ಸದಸ್ಯರಾದ ಅನಿಲ್ ಅಬ್ಬಿಗೇರಿ, ಗೂಳಪ್ಪ ಮುಷಿಗೇರಿ ವಿರುದ್ಧ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಹಳ್ಳಹಿಡಿದ ಜಲ ಜೀವನ್​ ಯೋಜನೆ: ನೀರು ಬರುವ ಮೊದಲೇ ತುಕ್ಕು ಹಿಡಿದ ಪೈಪ್​ಗಳು

ನೂರಾರು ಕೋಟಿ ರೂ. ಮೌಲ್ಯದ 35 ಎಕರೆ ಆಸ್ತಿ ಕಬಳಿಸುವ ದುರುದ್ದೇಶದಿಂದ ಲೀಜ್ ನೀಡಲು ನಕಲಿ ಠರಾವು ಸೃಷ್ಟಿಸಿ, ಪೌರಾಯುಕ್ತರ ನಕಲಿ ಸಹಿ ಮಾಡಿ ಮಂಜೂರು ಮಾಡಲಾಗಿದೆ. ಎ1 ಖಾಸಗಿ ವ್ಯಕ್ತಿ ವಿಜಯಲಕ್ಷ್ಮಿ ಶಿಗ್ಲಿಮಠ ಹಾಗೂ ಎ2 ಸೆಕ್ರೆಟರಿ ದಿ ಕಾಟನ್ ಮಾರ್ಕೆಟ್ ವರ್ಕ್ ಓವನರ್ಸ್ ಹಾಗೂ​ ಅಸೋಸಿಯೇಟ್ಸ್ ವಿರುದ್ಧವೂ ಪ್ರಶಾಂತ್​ ದೂರು ದಾಖಲಿಸಿದ್ದಾರೆ. ಎ2 ಸೆಕ್ರೆಟರಿ ದಿ ಕಾಟನ್ ಮಾರ್ಕೆಟ್ ವರ್ಕ್ ಓವನರ್ಸ್ ಹಾಗೂ ಅಸೋಸಿಯೇಟ್ಸ್​ಗೆ 35 ಎಕರೆ ಲೀಜ್ ನೀಡಲು ನಕಲಿ ಠರಾವು ಸೃಷ್ಟಿ ಮಾಡಲಾಗಿದೆ.

2023ರ ಅಕ್ಟೋಬರ್​​ 26ರಂದು ನಗರಸಭೆಗೆ ಎ2 ಪತ್ರ ನೀಡಿದ್ದಾರೆ. 2024ರ ಫೆಬ್ರವರಿ 9ರಂದು ನಗರಸಭೆ ಸಾಮಾನ್ಯ ಸಭೆ ನಡೆದಿದೆ. ಸಭೆಯಲ್ಲಿ ಠರಾವು ನಂ. 378 ಪಾಸಾಗಿದೆ. ಎಲ್ಲ ಆಸ್ತಿ ಅನುಭೋಗದಾರರಿಗೆ ಲೀಜ್ ನೀಡಲಾಗಿದೆಂದು ನಕಲಿ ಠರಾವು ಸೃಷ್ಟಿ ಮಾಡಲಾಗಿದೆ.

ಇದನ್ನೂ ಓದಿ: ಗದಗ: ಶಾಲಾ ಮಕ್ಕಳ ಕೂದಲು ಕಟ್ ಮಾಡಿದ ಶಿಕ್ಷಕನಿಗೆ ಬಿತ್ತು ಪೋಷಕರಿಂದ ಧರ್ಮದೇಟು!

2024ರ ಜುಲೈ 22ರಂದು ಲೀಜ್ ನೀಡಿದೆ ಅಂತ ನಕಲಿ ಪತ್ರ ಸೃಷ್ಟಿಸಿ ನಗರಸಭೆ ಆಯುಕ್ತರ ನಕಲಿ ಸಹಿ ಮಾಡಲಾಗಿದೆ. ಈ ಮೂಲಕ ನಗರಸಭೆ, ಸರ್ಕಾರಕ್ಕೆ ಮಾಡಲಾಗುತ್ತಿರುವ ಅಪರಾಧ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೂಚಕರಾಗಿ ಬಿಜೆಪಿ ಸದಸ್ಯರಾದ ಅನಿಲ ಅಬ್ಬಿಗೇರಿ, ಗೂಳಪ್ಪರಿಂದ ಸಹಿ ಕೂಡ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:05 am, Fri, 16 August 24

ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ