AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ-ಬೆಟಗೇರಿ ನಗರದಲ್ಲಿ ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ನಡುಕ

ನೂರಾರು ಕೋಟಿ ರೂ. ಮೌಲ್ಯದ ನಗರಸಭೆ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲಾಗಿದೆ. ನಗರಸಭೆ ಹಿಂದಿನ ಪ್ರಭಾರಿ ಪೌರಾಯುಕ್ತ ಪ್ರಶಾಂತ್​ ವರಗಪ್ಪನವರ್​ ಎಂಬುವವರ ದೂರು ಆಧರಿಸಿ ಗದಗ ನಗರ ಸಭೆಯ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ಸದಸ್ಯರಾದ ಅನಿಲ್ ಅಬ್ಬಿಗೇರಿ, ಗೂಳಪ್ಪ ಮುಷಿಗೇರಿ ವಿರುದ್ಧ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. 

ಗದಗ-ಬೆಟಗೇರಿ ನಗರದಲ್ಲಿ ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ನಡುಕ
ಗದಗ-ಬೆಟಗೇರಿ ನಗರಸಭೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 16, 2024 | 9:06 AM

Share

ಗದಗ, ಆಗಸ್ಟ್​ 16: ಕರ್ನಾಟಕದಲ್ಲಿ ಮುಡಾ ಹಗರಣ ಮತ್ತು ವಾಲ್ಮೀಕ ಹಗರಣಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ. ಈ ಮಧ್ಯೆ ಗದಗ-ಬೆಟಗೇರಿ (Gadag-Betageri) ಅವಳಿ ನಗರದಲ್ಲಿ ನಗರಸಭೆ ಆಸ್ತಿ ಹಗರಣ ಭಾರಿ ಸಂಚಲನ ಮೂಡಿಸಿದೆ. ಹೀಗಾಗಿ ಮಾಜಿ ಅಧ್ಯಕ್ಷೆ, ಸದಸ್ಯರು, ಲೀಜ್​ ದಾರರಿಗೆ ನಡುಕು‌ ಶುರುವಾದಂತಾಗಿದೆ. ಬಿಜೆಪಿ (bjp) ಆಡಳಿತದ ವಿರುದ್ಧ ಅವಳಿ ನಗರದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲು

ನೂರಾರು ಕೋಟಿ ರೂ. ಮೌಲ್ಯದ ನಗರಸಭೆ ಆಸ್ತಿ ಲೂಟಿಗೆ ರೂಪಿಸಿದ್ದ ಸಂಚು ಬಯಲಾಗಿದೆ. ನಗರಸಭೆ ಹಿಂದಿನ ಪ್ರಭಾರಿ ಪೌರಾಯುಕ್ತ ಪ್ರಶಾಂತ್​ ವರಗಪ್ಪನವರ್​ ಎಂಬುವವರ ದೂರು ಆಧರಿಸಿ ಗದಗ ನಗರ ಸಭೆಯ ಮಾಜಿ ಅಧ್ಯಕ್ಷೆ ಮತ್ತು ಬಿಜೆಪಿ ಸದಸ್ಯರಾದ ಅನಿಲ್ ಅಬ್ಬಿಗೇರಿ, ಗೂಳಪ್ಪ ಮುಷಿಗೇರಿ ವಿರುದ್ಧ ಬಡಾವಣೆ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ಗದಗ ಜಿಲ್ಲೆಯಲ್ಲಿ ಹಳ್ಳಹಿಡಿದ ಜಲ ಜೀವನ್​ ಯೋಜನೆ: ನೀರು ಬರುವ ಮೊದಲೇ ತುಕ್ಕು ಹಿಡಿದ ಪೈಪ್​ಗಳು

ನೂರಾರು ಕೋಟಿ ರೂ. ಮೌಲ್ಯದ 35 ಎಕರೆ ಆಸ್ತಿ ಕಬಳಿಸುವ ದುರುದ್ದೇಶದಿಂದ ಲೀಜ್ ನೀಡಲು ನಕಲಿ ಠರಾವು ಸೃಷ್ಟಿಸಿ, ಪೌರಾಯುಕ್ತರ ನಕಲಿ ಸಹಿ ಮಾಡಿ ಮಂಜೂರು ಮಾಡಲಾಗಿದೆ. ಎ1 ಖಾಸಗಿ ವ್ಯಕ್ತಿ ವಿಜಯಲಕ್ಷ್ಮಿ ಶಿಗ್ಲಿಮಠ ಹಾಗೂ ಎ2 ಸೆಕ್ರೆಟರಿ ದಿ ಕಾಟನ್ ಮಾರ್ಕೆಟ್ ವರ್ಕ್ ಓವನರ್ಸ್ ಹಾಗೂ​ ಅಸೋಸಿಯೇಟ್ಸ್ ವಿರುದ್ಧವೂ ಪ್ರಶಾಂತ್​ ದೂರು ದಾಖಲಿಸಿದ್ದಾರೆ. ಎ2 ಸೆಕ್ರೆಟರಿ ದಿ ಕಾಟನ್ ಮಾರ್ಕೆಟ್ ವರ್ಕ್ ಓವನರ್ಸ್ ಹಾಗೂ ಅಸೋಸಿಯೇಟ್ಸ್​ಗೆ 35 ಎಕರೆ ಲೀಜ್ ನೀಡಲು ನಕಲಿ ಠರಾವು ಸೃಷ್ಟಿ ಮಾಡಲಾಗಿದೆ.

2023ರ ಅಕ್ಟೋಬರ್​​ 26ರಂದು ನಗರಸಭೆಗೆ ಎ2 ಪತ್ರ ನೀಡಿದ್ದಾರೆ. 2024ರ ಫೆಬ್ರವರಿ 9ರಂದು ನಗರಸಭೆ ಸಾಮಾನ್ಯ ಸಭೆ ನಡೆದಿದೆ. ಸಭೆಯಲ್ಲಿ ಠರಾವು ನಂ. 378 ಪಾಸಾಗಿದೆ. ಎಲ್ಲ ಆಸ್ತಿ ಅನುಭೋಗದಾರರಿಗೆ ಲೀಜ್ ನೀಡಲಾಗಿದೆಂದು ನಕಲಿ ಠರಾವು ಸೃಷ್ಟಿ ಮಾಡಲಾಗಿದೆ.

ಇದನ್ನೂ ಓದಿ: ಗದಗ: ಶಾಲಾ ಮಕ್ಕಳ ಕೂದಲು ಕಟ್ ಮಾಡಿದ ಶಿಕ್ಷಕನಿಗೆ ಬಿತ್ತು ಪೋಷಕರಿಂದ ಧರ್ಮದೇಟು!

2024ರ ಜುಲೈ 22ರಂದು ಲೀಜ್ ನೀಡಿದೆ ಅಂತ ನಕಲಿ ಪತ್ರ ಸೃಷ್ಟಿಸಿ ನಗರಸಭೆ ಆಯುಕ್ತರ ನಕಲಿ ಸಹಿ ಮಾಡಲಾಗಿದೆ. ಈ ಮೂಲಕ ನಗರಸಭೆ, ಸರ್ಕಾರಕ್ಕೆ ಮಾಡಲಾಗುತ್ತಿರುವ ಅಪರಾಧ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೂಚಕರಾಗಿ ಬಿಜೆಪಿ ಸದಸ್ಯರಾದ ಅನಿಲ ಅಬ್ಬಿಗೇರಿ, ಗೂಳಪ್ಪರಿಂದ ಸಹಿ ಕೂಡ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:05 am, Fri, 16 August 24

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್
ಬ್ಲೌಸ್ ಹಿಂದೆ ಮೂಡಿತು ‘ಈ ಸಲ ಕಪ್ ನಮ್ದೇ’ ಡಿಸೈನ್
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ