AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಜಮಾನ’ನಿಗೆ ಅಭಿಮಾನಿಯಿಂದ ವಿಶೇಷ ಉಡುಗೊರೆ​: ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!

ಯುವಕ ಶಂಭು ಗಡಗಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ನಟ ದರ್ಶನ್​ರನ್ನು ಭೇಟಿಯಾಗಲು ರಸ್ತೆ ಬದಿಯಲ್ಲಿ ಕಾತುರದಿಂದ ಕಾಯುತ್ತಿದ್ದನು. ಇತ್ತ, ತನ್ನ ಅಭಿಮಾನಿಯನ್ನು ನೋಡಿದ ತಕ್ಷಣ ಕಾರನ್ನು ನಿಲ್ಲಿಸಿ ಶಂಭು ಕಡೆಗೆ ಬಂದ ಯಜಮಾನ ಆತನ ಉಡುಗೊರೆಯನ್ನು ಖುಷಿಯಿಂದ ಸ್ವೀಕಾರ ಮಾಡಿದ್ದಾರೆ.

‘ಯಜಮಾನ’ನಿಗೆ ಅಭಿಮಾನಿಯಿಂದ ವಿಶೇಷ ಉಡುಗೊರೆ​: ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!
ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!
KUSHAL V
|

Updated on:Mar 01, 2021 | 9:14 PM

Share

ಗದಗ: ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಜಿಲ್ಲೆಯ ಅಭಿಮಾನಿಯೊಬ್ಬ ತಾನು ಸಾಕಿ ಬೆಳಿಸಿದ ಮೆಚ್ಚಿನ ಟಗರನ್ನು ಗಿಫ್ಟ್ ಆಗಿ ನೀಡಿದ್ದಾನೆ. ಜಿಲ್ಲೆಯ ಕಣವಿ ಹೊಸೂರಿನ ಯುವಕ ಶಂಭು ಗಡಗಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ನಟ ದರ್ಶನ್​ರನ್ನು ಭೇಟಿಯಾಗಲು ರಸ್ತೆ ಬದಿಯಲ್ಲಿ ಕಾತುರದಿಂದ ಕಾಯುತ್ತಿದ್ದನು. ಇತ್ತ, ತನ್ನ ಅಭಿಮಾನಿಯನ್ನು ನೋಡಿದ ತಕ್ಷಣ ಕಾರನ್ನು ನಿಲ್ಲಿಸಿ ಶಂಭು ಕಡೆಗೆ ಬಂದ ಯಜಮಾನ ಆತನ ಉಡುಗೊರೆಯನ್ನು ಖುಷಿಯಿಂದ ಸ್ವೀಕಾರ ಮಾಡಿದ್ದಾರೆ.

ಅಂದ ಹಾಗೆ ಶಂಭು, ದರ್ಶನ್ ಅವರ ಅಪ್ಪಟ ಅಭಿಮಾನಿ. ಹಾಗಾಗಿ, ಸುಮಾರು ಎರಡೂವರೆ ವರ್ಷಗಳಿಂದ ತಾನು ಅತೀ ಪ್ರೀತಿಯಿಂದ ಸಾಕಿದ್ದ ಟಗರನ್ನು ದರ್ಶನ್​ಗೆ ಗಿಫ್ಟ್​ ಆಗಿ ಕೊಡುವುದರ ಮೂಲಕ ಅಭಿಮಾನ ಮೆರೆದಿದ್ದಾನೆ.

ಅಭಿಮಾನಿ ನೀಡಿದ ಟಗರನ್ನು ಸ್ವೀಕರಿಸಿದ ದಚ್ಚು ಸದ್ಯ ಟಗರನ್ನು ತೆಗೆದುಕೊಂಡು ಹೋಗೋಕಾಗಲ್ಲ. ಆದರೆ ನೀನು ಮೈಸೂರಿನಲ್ಲಿರುವ ನನ್ನ ಫಾರ್ಮ್ ಹೌಸ್​ಗೆ ಬಾ ಎಂದು ಆಹ್ವಾನ ನೀಡಿದ್ದಾರಂತೆ. ಜೊತೆಗೆ, ತಾವು ಒಂದು ವಾಹನ ಕಳಿಸುವುದಾಗಿ ತಿಳಿಸಿರುವ ಬಾಕ್ಸ್ ಆಫೀಸ್​ ಸುಲ್ತಾನ ವಾಹನದಲ್ಲಿ ಟಗರು ಮತ್ತು ನೀನು ಇಬ್ಬರು ಬನ್ನಿ ಅಂತಾ ಆತನ ಮೊಬೈಲ್ ನಂಬರ್​ನ ತೆಗೆದುಕೊಂಡು ಹೋಗಿದ್ದಾರೆ. ಸಿನಿಮಾದಲ್ಲಿ ಬ್ಯುಸಿ ಆಗಿರೋದ್ರಿಂದ ಸದ್ಯ ಟಗರನ್ನು ಫಾರ್ಮ ಹೌಸ್ ಗೆ ತೆಗೆದುಕೊಂಡು ಹೋಗೋಕೆ ಆಗಲ್ಲಾ. ಹಾಗಾಗಿ, ನೀನೆ ಬಾ ಅಂತ ತಿಳಿಸಿದ್ದಾರೆ ಎಂದು D ಬಾಸ್​ ಅಭಿಮಾನಿ ಶಂಭು ಖುಷಿಯಿಂದ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 9:01 pm, Mon, 1 March 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ