AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಜಮಾನ’ನಿಗೆ ಅಭಿಮಾನಿಯಿಂದ ವಿಶೇಷ ಉಡುಗೊರೆ​: ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!

ಯುವಕ ಶಂಭು ಗಡಗಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ನಟ ದರ್ಶನ್​ರನ್ನು ಭೇಟಿಯಾಗಲು ರಸ್ತೆ ಬದಿಯಲ್ಲಿ ಕಾತುರದಿಂದ ಕಾಯುತ್ತಿದ್ದನು. ಇತ್ತ, ತನ್ನ ಅಭಿಮಾನಿಯನ್ನು ನೋಡಿದ ತಕ್ಷಣ ಕಾರನ್ನು ನಿಲ್ಲಿಸಿ ಶಂಭು ಕಡೆಗೆ ಬಂದ ಯಜಮಾನ ಆತನ ಉಡುಗೊರೆಯನ್ನು ಖುಷಿಯಿಂದ ಸ್ವೀಕಾರ ಮಾಡಿದ್ದಾರೆ.

‘ಯಜಮಾನ’ನಿಗೆ ಅಭಿಮಾನಿಯಿಂದ ವಿಶೇಷ ಉಡುಗೊರೆ​: ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!
ಪ್ರಾಣಿಪ್ರಿಯ D ಬಾಸ್​ಗೆ​ ಟಗರು ಗಿಫ್ಟ್ ಮಾಡಿದ ಫ್ಯಾನ್​!
KUSHAL V
|

Updated on:Mar 01, 2021 | 9:14 PM

Share

ಗದಗ: ಚಾಲೆಂಜಿಂಗ್ ಸ್ಟಾರ್ ದರ್ಶನ್​ಗೆ ಜಿಲ್ಲೆಯ ಅಭಿಮಾನಿಯೊಬ್ಬ ತಾನು ಸಾಕಿ ಬೆಳಿಸಿದ ಮೆಚ್ಚಿನ ಟಗರನ್ನು ಗಿಫ್ಟ್ ಆಗಿ ನೀಡಿದ್ದಾನೆ. ಜಿಲ್ಲೆಯ ಕಣವಿ ಹೊಸೂರಿನ ಯುವಕ ಶಂಭು ಗಡಗಿ ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ರಾಬರ್ಟ್‌ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ನಟ ದರ್ಶನ್​ರನ್ನು ಭೇಟಿಯಾಗಲು ರಸ್ತೆ ಬದಿಯಲ್ಲಿ ಕಾತುರದಿಂದ ಕಾಯುತ್ತಿದ್ದನು. ಇತ್ತ, ತನ್ನ ಅಭಿಮಾನಿಯನ್ನು ನೋಡಿದ ತಕ್ಷಣ ಕಾರನ್ನು ನಿಲ್ಲಿಸಿ ಶಂಭು ಕಡೆಗೆ ಬಂದ ಯಜಮಾನ ಆತನ ಉಡುಗೊರೆಯನ್ನು ಖುಷಿಯಿಂದ ಸ್ವೀಕಾರ ಮಾಡಿದ್ದಾರೆ.

ಅಂದ ಹಾಗೆ ಶಂಭು, ದರ್ಶನ್ ಅವರ ಅಪ್ಪಟ ಅಭಿಮಾನಿ. ಹಾಗಾಗಿ, ಸುಮಾರು ಎರಡೂವರೆ ವರ್ಷಗಳಿಂದ ತಾನು ಅತೀ ಪ್ರೀತಿಯಿಂದ ಸಾಕಿದ್ದ ಟಗರನ್ನು ದರ್ಶನ್​ಗೆ ಗಿಫ್ಟ್​ ಆಗಿ ಕೊಡುವುದರ ಮೂಲಕ ಅಭಿಮಾನ ಮೆರೆದಿದ್ದಾನೆ.

ಅಭಿಮಾನಿ ನೀಡಿದ ಟಗರನ್ನು ಸ್ವೀಕರಿಸಿದ ದಚ್ಚು ಸದ್ಯ ಟಗರನ್ನು ತೆಗೆದುಕೊಂಡು ಹೋಗೋಕಾಗಲ್ಲ. ಆದರೆ ನೀನು ಮೈಸೂರಿನಲ್ಲಿರುವ ನನ್ನ ಫಾರ್ಮ್ ಹೌಸ್​ಗೆ ಬಾ ಎಂದು ಆಹ್ವಾನ ನೀಡಿದ್ದಾರಂತೆ. ಜೊತೆಗೆ, ತಾವು ಒಂದು ವಾಹನ ಕಳಿಸುವುದಾಗಿ ತಿಳಿಸಿರುವ ಬಾಕ್ಸ್ ಆಫೀಸ್​ ಸುಲ್ತಾನ ವಾಹನದಲ್ಲಿ ಟಗರು ಮತ್ತು ನೀನು ಇಬ್ಬರು ಬನ್ನಿ ಅಂತಾ ಆತನ ಮೊಬೈಲ್ ನಂಬರ್​ನ ತೆಗೆದುಕೊಂಡು ಹೋಗಿದ್ದಾರೆ. ಸಿನಿಮಾದಲ್ಲಿ ಬ್ಯುಸಿ ಆಗಿರೋದ್ರಿಂದ ಸದ್ಯ ಟಗರನ್ನು ಫಾರ್ಮ ಹೌಸ್ ಗೆ ತೆಗೆದುಕೊಂಡು ಹೋಗೋಕೆ ಆಗಲ್ಲಾ. ಹಾಗಾಗಿ, ನೀನೆ ಬಾ ಅಂತ ತಿಳಿಸಿದ್ದಾರೆ ಎಂದು D ಬಾಸ್​ ಅಭಿಮಾನಿ ಶಂಭು ಖುಷಿಯಿಂದ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ: ‘ಸುದೀಪ್ ಅಂಕಲ್.. ದಯವಿಟ್ಟು ಮನಸ್ಸು ಮಾಡಿ ನನಗೆ ಬಿಗ್​ ಬಾಸ್ ಮನೆಗೆ ಹೋಗೋಕೆ ಅವಕಾಶ ಮಾಡಿಕೊಡಿ, ಪ್ಲೀಸ್​!’

Published On - 9:01 pm, Mon, 1 March 21

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ