AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಗೆ ಕೆಲಸ ನೀಡಿ ಎಂದಿದ್ದಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಗಂಡನಿಂದ ಲೈಂಗಿಕ ಕಿರುಕುಳ; ಮಹಿಳೆಯಿಂದ ದೂರು ದಾಖಲು

ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯತಿ ಸದಸ್ಯೆ ನೀಲವ್ವ ಎಂಬುವರ ಪತಿ ರಮೇಶ ಕಡಿಯವರ ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿ. ನೀಲವ್ವ ಹೆಸರಿಗೆ ಮೇಂಬರ್ ಅಷ್ಟೇ. ಅಲ್ಲಿ ನಡೆಯುವುದು ಗಂಡ ರಮೇಶ್ ದರ್ಬಾರ್. ಸದ್ಯ ನೊಂದ ಮಹಿಳೆ ಗದಗ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ

ಪತಿಗೆ ಕೆಲಸ ನೀಡಿ ಎಂದಿದ್ದಕ್ಕೆ ಗ್ರಾಮ ಪಂಚಾಯತಿ ಸದಸ್ಯೆ ಗಂಡನಿಂದ ಲೈಂಗಿಕ ಕಿರುಕುಳ; ಮಹಿಳೆಯಿಂದ ದೂರು ದಾಖಲು
ರಮೇಶ ಕಡಿಯವರ
Follow us
preethi shettigar
|

Updated on:May 21, 2021 | 3:47 PM

ಗದಗ: ಗ್ರಾಮ ಪಂಚಾಯತಿಯಲ್ಲಿ ಕೆಲಸದಲ್ಲಿದ್ದ ಗಂಡನನ್ನು ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಗದಗ ಜಿಲ್ಲೆಯ ಹುಯಿಲಗೋಳ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯತಿಯಲ್ಲಿ ಪಂಪ್​ ಆಪರೇಟರ್ ಆಗಿದ್ದ ವ್ಯಕ್ತಿಗೆ ಕಳೆದ ಹಲವು ದಿನಗಳಿಂದ ಆರೋಗ್ಯ ಸರಿ ಇರಲಿಲ್ಲ. ಹೀಗಾಗಿ ಎರಡು ತಿಂಗಳು ರಜೆ ಹಾಕಿದ್ದರು. ಆದರೆ ಇದನ್ನೇ ನೆಪ ಮಾಡಿಕೊಂಡ ಗ್ರಾಮ ಪಂಚಾಯತಿಯವರು ಆತನನ್ನು ಕೆಲಸದಿಂದ ತೆಗೆದಿದ್ದಾರೆ. ಹೀಗಾಗಿ ಪಂಪ್​ ಆಪರೇಟರ್ ಪತ್ನಿ ತನ್ನ ಗಂಡನನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಆದರೆ ಸಹಾಯ ಕೇಳಿದ ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ.

ಗದಗ ತಾಲೂಕಿನ ಹುಯಿಲಗೋಳ ಗ್ರಾಮ ಪಂಚಾಯತಿ ಸದಸ್ಯೆ ನೀಲವ್ವ ಎಂಬುವರ ಪತಿ ರಮೇಶ ಕಡಿಯವರ ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿ. ನೀಲವ್ವ ಹೆಸರಿಗೆ ಮೇಂಬರ್ ಅಷ್ಟೇ. ಅಲ್ಲಿ ನಡೆಯುವುದು ಗಂಡ ರಮೇಶ್ ದರ್ಬಾರ್. ಸದ್ಯ ಈ ರಮೇಶನ ವಿರುದ್ಧ ಪಂಪ್ ಆಪರೇಟರ್ ಹೆಂಡತಿಯನ್ನ ಮಂಚಕ್ಕೆ ಕರೆದ ಆರೋಪ ಕೇಳಿ ಬಂದಿದ್ದು, ನೊಂದ ಮಹಿಳೆ ಗದಗ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಿರುಕುಳಕ್ಕೆ ಒಳಗಾದ ರೇಣುಕಾ ಅವರ ಗಂಡ ಹನಮಂತಪ್ಪ ಗಂಗಪ್ಪನವರ್ ಕಳೆದ 18 ವರ್ಷದಿಂದ ಪಂಚಾಯತಿಯಲ್ಲಿ ಪಂಪ್ ಆಪರೇಟರ್ ಕೆಲಸ ಮಾಡುತ್ತಿದ್ದಾರೆ. ಎರಡು ತಿಂಗಳು ಹಿಂದೆ ಕೈ ಫ್ರ್ಯಾಕ್ಚರ್ ಆಯ್ತು ಎಂದು ರಜೆ ಮಾಡಿದ್ದರು. ಹೀಗಾಗಿ ಕೆಲಸಕ್ಕೆ ಬರಲಿಲ್ಲ ಎಂದು ನೆಪವೊಡ್ಡಿ ಮೇಂಬರ್ ಮೇಡಂ ಮತ್ತು ಅವರ ಗಂಡ ರಮೇಶ ಕೆಲಸಕ್ಕೆ ಬರಬೇಡ ಎಂದಿದ್ದಾರೆ. ಮನೆಯ ಪರಿಸ್ಥಿತಿಯೂ ಬಿಗಡಾಯಿಸ್ತಿತ್ತು, ಹೀಗಾಗಿ ಹನಮಂತಪ್ಪ ಹೆಂಡತಿ ರೇಣುಕಾ, ಪಂಚಾಯತಿ ಸದಸ್ಯರ ಬಳಿ ಕೆಲಸಕ್ಕೆ ಸೇರಿಸುವಂತೆ ಬೇಡಿಕೊಂಡಿದ್ದಾಳೆ‌. ರಮೇಶನಿಗೂ ಫೋನ್ ಮೂಲಕ ಸಹಾಯ ಕೇಳಿದ್ದಾರೆ. ರೇಣುಕಾ ಅಸಹಾಯಕತೆಯನ್ನ ಬಂಡವಾಳ ಮಾಡಿಕೊಂಡ ರಮೇಶ, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೀಗಾಗಿ ನೊಂದ ಕುಟುಂಬ ರಮೇಶನ ವಿರುದ್ಧ ಗದಗ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದೆ.

ಗಂಡನನ್ನು ಕೆಲಸಕ್ಕೆ ಸೇರಿಸಿ ಅಂದರೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಗದಗ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಅಸಹಾಯಕತೆಯನ್ನು ಬಂಡವಾಳ ಮಾಡಿಕೊಳ್ಳಲು ಹೊರಟ ಇಂತವರ ವಿರುದ್ಧ ಸದ್ಯ ಕಾನೂನುಕ್ರಮ ತೆಗೆದುಕೊಳ್ಳಬೇಕಾಗಿದೆ.

ಇದನ್ನೂ ಓದಿ:

ಸಹೋದ್ಯೋಗಿಯ 14ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ; ಐಪಿಎಸ್​ ಅಧಿಕಾರಿ ವಿರುದ್ಧ ಚಾರ್ಜ್​ಶೀಟ್​

ಮೈಸೂರಿನ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ, 50 ಸಾವಿರ ದಂಡ

Published On - 3:44 pm, Fri, 21 May 21

ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ