AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸಕ್ಕೆ ತಂದ ಬಸ್ ಸೀಜ್, ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ: ನಿನ್ನೆಯಿಂದಲೇ ಆರ್​​ಟಿಓ ಕಚೇರಿಯಲ್ಲಿ ಠಿಕಾಣಿ

ಬಸ್ ಡಾಕ್ಯುಮೆಂಟ್ಸ್ ಸರಿಯಾಗಿಲ್ಲದ ಕಾರಣ ಮಕ್ಕಳು, ಮಹಿಳೆಯರು ಸೇರಿದಂತೆ 49 ಆಂಧ್ರಪ್ರದೇಶ ಪ್ರವಾಸಿಗರು ಪರದಾಡಿರುವಂತಹ ಘಟನೆ ಗದಗನಲ್ಲಿ ಕಂಡುಬಂದಿದೆ. ಹೈದರಾಬಾದ್​​ನಿಂದ ರಾಯಚೂರು ಮಾರ್ಗವಾಗಿ ಗದಗ ನಗರಕ್ಕೆ ಎಂಟ್ರಿಯಾಗಿದ್ದ ಬಸ್​ ಅನ್ನು ಹೆದ್ದಾರಿಯಲ್ಲೇ ಗದಗ ಆರ್​ಟಿಒ ಅಧಿಕಾರಿಗಳು ಸೀಜ್ ಮಾಡಿದ್ದರು. ಹೀಗಾಗಿ ಆರ್​ಟಿಓ ಕಚೇರಿಯಲ್ಲಿ ಆಂಧ್ರ ಪ್ರವಾಸಿಗರು ವಾಸ್ತವ್ಯ ಹೂಡಿದ್ದಾರೆ.

ಪ್ರವಾಸಕ್ಕೆ ತಂದ ಬಸ್ ಸೀಜ್, ಗದಗದಲ್ಲಿ ಆಂಧ್ರ ಪ್ರವಾಸಿಗರ ಪರದಾಟ: ನಿನ್ನೆಯಿಂದಲೇ ಆರ್​​ಟಿಓ ಕಚೇರಿಯಲ್ಲಿ ಠಿಕಾಣಿ
ಪ್ರವಾಸಕ್ಕೆ ತಂದ ಬಸ್ ಸೀಜ್, ಗದಗನಲ್ಲಿ ಆಂಧ್ರ ಪ್ರವಾಸಿಗರ ಪರದಾಟ: ನಿನ್ನೆಯಿಂದಲೇ ಆರ್​​ಟಿಓ ಕಚೇರಿಯಲ್ಲಿ ಠಿಕಾಣಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Digi Tech Desk|

Updated on:May 22, 2024 | 5:12 PM

Share

ಗದಗ, ಮೇ 22: ಅವರೆಲ್ಲರೂ ಬೇಸಿಗೆ ರಜೆಯಲ್ಲಿ ಮಜಾ ಮಾಡಲು ಪ್ರವಾಸ ಕೈಗೊಂಡಿದ್ದರು. ಅಂತರರಾಜ್ಯ ಪ್ರವಾಸ ಮಾಡುವ ವೇಳೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಬಾಡಿಗೆ ಪಡೆದಿದ್ದ ಬಸ್ (bus) ಡಾಕ್ಯುಮೆಂಟ್ಸ್​​ ನಕಲಿರುವುದರಿಂದ ಆಂಧ್ರ (Andhra) ಪ್ರದೇಶದ ಪ್ರವಾಸಿಗರು ರಾಜ್ಯದಲ್ಲಿ ವಿಲವಿಲ ಅಂತಿದ್ದಾರೆ.‌ ಆಂಧ್ರ ಸಿಎಂ ಜಗನ್ ಕ್ಷೇತ್ರದ ಜನರು ಇಡೀ ರಾತ್ರಿ ಆರ್​​ಟಿಓ ಕಚೇರಿಯಲ್ಲಿ ಕಾಲ ಕಳೆದಿದ್ದು, ಮಕ್ಕಳು, ಮಹಿಳೆಯರು ಸೇರಿದಂತೆ 49 ಪ್ರವಾಸಿಗರು ಗೋಳಾಡಿರುವಂತಹ ಘಟನೆ ನಡೆದಿದೆ.

ಆಂಧ್ರ ಪ್ರದೇಶದ ಕಡಪಾ ಜಿಲ್ಲೆಯ ಪುಲಿವೆಂದುಲಾ ಮೂಲದ 49 ಜನರು ಆಂಧ್ರ, ಕರ್ನಾಟಕ, ಗೋವಾ ಪ್ರವಾಸ ಕೈಕೊಂಡಿದ್ದರು. ಸ್ಥಳೀಯವಾಗಿ ವೆಂಕಟಲಕ್ಷ್ಮೀನಾಯಾರಣ ಅನ್ನೋರ ಬಳಿ ಇದ್ದ AP03 TE8520 ನಂಬರಿನ ಬಸ್ ಬುಕ್ ಮಾಡಲಾಗಿತ್ತು. ಒಟ್ಟು 1 ಲಕ್ಷ 70 ಸಾವಿರ ರೂಪಾಯಿಗೆ ಪ್ರವಾಸ ಮಾಡಿಸೋದಾಗಿ ಬಸ್ ಮಾಲೀಕ ಒಪ್ಪಿಕೊಂಡಿದ್ದರು. ಮುಂಗಡವಾಗಿ 70 ಸಾವಿರ ರೂ. ಪಡೆದು ಹೈದ್ರಾಬಾದ್ ಪ್ರವಾಸ ಮಾಡಿಸಿ ಕರ್ನಾಟಕ ಮಾರ್ಗವಾಗಿ ಗೋವಾಕ್ಕೆ ಹೊರಟಿದ್ದರು.

ಆರ್​ಟಿಓ ಕಚೇರಿಯಲ್ಲಿ ವಾಸ್ತವ್ಯ ಹೂಡಿದ 49 ಪ್ರವಾಸಿಗರು

ಗದಗ ನಗರ ಎಂಟ್ರಿಯಾಗ್ತಿದ್ದಂತೆ ಆರ್​ಟಿಒ ಅಧಿಕಾರಿಗಳ ಕಣ್ಣಿಗೆ ಆಂಧ್ರ ಪಾಸಿಂಗ್ ಬಸ್ ಪರಿಶೀಲನೆ ನಡೆಸಿದ್ದಾರೆ. ತಪಾಸಣೆ ಮಾಡಿದಾಗ ಚೆಸ್ಸಿ ನಂಬರ್ ಟ್ಯಾಂಪರ್ ಮಾಡಿರೋದು ಗೊತ್ತಾಗಿದೆ. ಸೀದಾ ಕಚೇರಿಗೆ ಬಸ್ ಕರೆಸಿ, ಇಂಜಿನ್ ನಂಬರ್ ಪರಿಶೀಲಿಸಲಾಗಿದೆ. ಇಂಜಿನ್ ನಂಬರ್ ಕೂಡ ತಿರುಚಿರೋದು ಬೆಳಕಿಗೆ ಬಂದಿದೆ. ಹೀಗಾಗಿ ಅನುಮಾನಗೊಂಡು ಬಸ್ ಸೀಜ್ ಮಾಡಲಾಗಿದೆ.‌ ಹೀಗಾಗಿ ಮಕ್ಕಳು ‌ಮಹಿಳೆಯರು ಸೇರಿದಂತೆ 49 ಪ್ರವಾಸಿಗರು ರಾತ್ರಿಯಿಂದ ಆರ್​ಟಿಓ ಕಚೇರಿಯಲ್ಲಿ ವಾಸ್ತವ್ಯ ಹೊಡೆದಿದ್ದಾರೆ. ಬಸ್​ನ ಅಸಲಿಯತ್ತು ಗೋತ್ತಾಗುತ್ತಿದ್ದಂತೆ ಪ್ರವಾಸಿಗಳು ಚಾಲಕ, ಬಸ್ ಮಾಲೀಕರ ವಿರುದ್ಧ ಕಿಡಿಕಾರಿದ್ದಾರೆ. ಬಸ್ ಚಾಲಕ ಕೂಡ ಇಂಜೀನ್ ಬೇರೆ, ಬಸ್ ಬೇರೆ ಅನ್ನೋದು ಒಪ್ಪಿಕೊಂಡು ತಗ್ಲಾಕಿಕೊಂಡಿದ್ದಾನೆ.

ಇದನ್ನೂ ಓದಿ: ಸರ್ಕಾರದಲ್ಲಿ ಹಣವಿಲ್ಲ ಅಂತಾ ಕೆಲಸ ನೀಡದ ಪಿಡಿಓ: ಬೆಳ್ಳಂಬೆಳಗ್ಗೆ ರೊಚ್ಚಿಗೆದ್ದ ಜನ್ರಿಂದ ಪ್ರತಿಭಟನೆ, ಆಕ್ರೋಶ

ಹೈದರಾಬಾದ್​ನಿಂದ ರಾಜ್ಯಕ್ಕೆ ಎಂಟ್ರಿ ನೀಡಿ, ಗದಗ ಜಿಲ್ಲೆಯ ಮಾರ್ಗವಾಗಿ ಗೋವಾಕ್ಕೆ ಹೋಗ್ತಾಯಿದ್ರು. ಆದ್ರೆ ಗೋವಾ ಬೀಚ್ ನಲ್ಲಿ ಎಂಜಾಯ್ ಮಾಡ್ಬೇಕಾದ ಪ್ರವಾಸಿಗರು ಗದಗ‌ನಲ್ಲಿ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 49 ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೀರು, ಶೌಚಾಲಯ ವ್ಯವಸ್ಥೆ ಇಲ್ಲದೆ ರಾತ್ರಿಯಿಡೀ ಆರ್​ಟಿಓ ಕಚೇರಿ ಮುಂಭಾಗದಲ್ಲಿ ವಾಸ್ತವ್ಯ ಹೂಡಿದ್ದಾರೆ. ಅಲ್ಲೇ ಅಡುಗೆ ಮಾಡಿ ಊಟ ಮಾಡಿದ್ದಾರೆ.

ಆರ್​ಟಿಒ ಲಕ್ಷ್ಮೀಕಾಂತ ಹೇಳಿದ್ದಿಷ್ಟು 

ಇನ್ನೂ ಕರ್ನಾಟಕ ಮೋಟಾರ್ ವೈಹಿಕಲ್ ಟ್ಯಾಕ್ಸೇಷನ್ ಆ್ಯಕ್ಟ್ ಅಡಿ ಬಸ್ ಸೀಜ್ ಮಾಡಲಾಗಿದೆ. ಬಸ್ ಸೇಫ್ಟಿ ಹಿನ್ನೆಲೆ ಸಂಚಾರ ಮಾಡಲು ಯೋಗ್ಯವಾಗಿಲ್ಲ. ಒಂದ್ವೇಳೆ ಬಸ್ ಆ್ಯಕ್ಸಿಡೆಂಟ್ ಆದಲ್ಲಿ ಬಸ್ ಪತ್ತೆಗೆ ಕಷ್ಟವಾಗಲಿದೆ. ಅಲ್ದೆ, ಚಸ್ಸಿ ನಂಬರ್ ಬದಲು ಮಾಡಿರೋದ್ರಿಂದ ಒಂದೇ ನಂಬರಿನ ಎರಡು ಬಸ್ ಓಡಾಡ್ತಿರೋ ಸಾಧ್ಯತೆಗಳಿವೆ. ಹೀಗಾಗಿ ಪರಿಶೀಲನೆ ಮಾಡಿ, ಕರ್ನಾಟಕ ಮೋಟಾರ್ ವೈಹಿಕಲ್ ಟ್ಯಾಕ್ಸೇಷನ್ ಆ್ಯಕ್ಟ್ ಅಡಿ ಬಸ್ ಸೀಜ್ ಮಾಡಲಾಗಿದೆ ಎಂದು ಆರ್​ಟಿಒ ಲಕ್ಷ್ಮೀಕಾಂತ ಹೇಳಿದ್ದಾರೆ.

ಇನ್ನೂ ಭಾಷೆ ಬಾರದೇ ವೇದನೆ ಹೇಳಿಕೊಳ್ಳಲಾಗದೇ ಮೂಕ ಪರದಾಟ ನಡೆಸಿರೋ ಪ್ರಯಾಣಿಕರಿಗೆ ಅಧಿಕಾರಿಗಳು ಪರ್ಯಾಯ ವ್ಯವಸ್ಥೆ ಮಾಡಿಕೊಡೋದಕ್ಕೂ ಮುಂದಾಗಿದ್ದಾರೆ. ಆದರೆ ಈಗಾಗ್ಲೆ ಹಣ ಪಾವತಿಸಿರೋ ಪ್ರಯಾಣಿಕರು ಮತ್ತೆ ಹಣ ಕೊಟ್ಟು ಮರಳಿ ಹೋಗೋದಕ್ಕೆ ಒಪ್ಪಿಲ್ಲ. ಇದೇ ವಿಚಾರವಾಗಿ ಬಸ್ ಡ್ರೈವರ್ ಹಾಗೂ ಪ್ರಯಾಣಿಕರ ಮಧ್ಯೆ ಜಟಾಪಟಿ ನಡೆದಿದೆ.

ಇದನ್ನೂ ಓದಿ: ನೀರಿಲ್ಲದೆ ವಿದ್ಯಾರ್ಥಿಗಳ ಪರದಾಟ, ಯಾವ ಸಮಸ್ಯೆ ಇಲ್ಲವೆನ್ನುತ್ತಿರು ಜಿಮ್ಸ್: ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಯಲಾಯ್ತು ಅಸಲಿಯತ್ತು

ಈ ಮಧ್ಯ ಮಹಿಳೆಯರು, ಮಕ್ಕಳು ಆರ್​ಟಿಒ ಕಚೇರಿ ಅಂಗಳದಲ್ಲೇ ಅಡುಗೆ ಮಾಡಿ ಊಟ ಮಾಡಿಕೊಳ್ತಿದ್ದಾರೆ. ಬಸ್ ಡಾಕ್ಯುಮೆಂಟ್ ಪರಿಶೀಲನೆ ಮಾಡದೇ ಬಂದ ತಪ್ಪಿಗೆ ಕಚೇರಿಯಲ್ಲೇ ಪರದಾಡುವಂತಾಗಿದೆ. ಇನಾದ್ರು ಪ್ರವಾಸ ಮಾಡುವಾಗ ಎಚ್ಚರಿಕೆಯಿಂದ ಇರಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:36 pm, Wed, 22 May 24

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?