AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ಫ್ಯಾನ್ಸ್ ಸಾವು ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ, ಅಭಿಮಾನಿಗಳ ಮನೆಗಳಿಗೆ ಯಶ್​ ಭೇಟಿ?

ಹುಟ್ಟು ಹಬ್ಬದ ಪ್ರಯುಕ್ತ ನಟ ಯಶ್ ಅವರ ಕಟೌಟ್​​​​​ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ ಅಭಿಮಾನಿಗಳು ಮೃತಪಟ್ಟಿದ್ದರು. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.

ಯಶ್ ಫ್ಯಾನ್ಸ್ ಸಾವು ಪ್ರಕರಣ: ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ, ಅಭಿಮಾನಿಗಳ ಮನೆಗಳಿಗೆ ಯಶ್​ ಭೇಟಿ?
ಯಶ್​ ಅಭಿಮಾನಿಗಳ ಸಾವು
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 08, 2024 | 2:00 PM

ಬೆಂಗಳೂರು/ಗದಗ, ಜನವರಿ 08: ಹುಟ್ಟು ಹಬ್ಬದ ಪ್ರಯುಕ್ತ ನಟ ಯಶ್ (Yash) ಅವರ ಕಟೌಟ್​​​​​ ಕಟ್ಟುವಾಗ ವಿದ್ಯುತ್ ಸ್ಪರ್ಶಿಸಿ (Electric Shock) ಅಭಿಮಾನಿಗಳು ಮೃತಪಟ್ಟಿದ್ದರು. ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ಘೋಷಿಸಿದೆ ಎಂದು ಗದಗ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ (HK Patil) ತಿಳಿಸಿದರು. ಇನ್ನು ಮೃತಪಟ್ಟ ಅಭಿಮಾನಿಗಳ ಮನೆಗೆ ಇಂದು (ಜ.08) ಸಂಜೆ 4 ಗಂಟೆಗೆ ನಟ ಯಶ್​ ಭೇಟಿ ನೀಡಲಿದ್ದಾರೆ ಎಂದು ಟಿವಿ9 ಡಿಜಿಟಲ್​ಗೆ ಯಶ್​ ಆಪ್ತ ಮೂಲಗಳು ತಿಳಿಸಿವೆ.

ನಟ ಯಶ್ ವಿಶೇಷ ವಿಮಾನದ ಮೂಲಕ ಮಧ್ಯಾಹ್ನ ಮೂರು ಗಂಟೆಗೆ ಹುಬ್ಬಳ್ಳಿಗೆ ಬರುವ ಸಾಧ್ಯತೆ ಇದೆ. ಇಲ್ಲಿಂದ ಸಂಜೆ ನಾಲ್ಕು ಗಂಟೆಗೆ ರಸ್ತೆ ಮಾರ್ಗವಾಗಿ ಸೂರಣಗಿಗೆ ಹೋಗಲಿದ್ದಾರೆ.

ಏನಿದು ಘಟನೆ

ಇಂದು ರಾಕಿಂಗ್ ಸ್ಟಾರ್ ಯಶ್ ಬರ್ತ್​ಡೇ. ಹೀಗಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಯಶ್ ಬರ್ತ್​ಡೇ ಬ್ಯಾನರ್​ ನಿಲ್ಲಿಸುವಾಗ ವಿದ್ಯುತ್ ಪ್ರವಹಿಸಿ ಮೂವರು ಯಶ್ ಅಭಿಮಾನಿಗಳು ಮೃತಪಟ್ಟಿದ್ದರು. ಹನಮಂತ ಹರಿಜನ (21), ಮುರಳಿ ನಡವಿನಮನಿ (20), ನವೀನ್ ಗಾಜಿ (19) ಮೃತ ದುರ್ದೈವಿಗಳು. ಮಂಜುನಾಥ್ ಹರಿಜನ, ಪ್ರಕಾಶ ಮ್ಯಾಗೇರಿ, ದೀಪಕ ಹರಿಜನ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಇದನ್ನೂ ಓದಿ: ಯಶ್ ಹುಟ್ಟುಹಬ್ಬಕ್ಕಾಗಿ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಬಲಿಯಾದ ಯುವಕರ ಸಾವಿಗೆ ಯಾರು ಜವಾಬ್ದಾರರು?

ಯಶ್ ಬರ್ತ್​ಡೇ ಆಚರಿಸಲು ಇವರು ಸಿದ್ಧತೆ ಮಾಡಿಕೊಂಡಿದ್ದರು. ನೀಲಗಿರಿ ತೋಪಿಗೆ ಬ್ಯಾನರ್ ಕಟ್ಟಿ ಮೇಲೆತ್ತುವಾಗ ವಿದ್ಯುತ್ ತಗುಲಿದೆ. ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಬೇಕು, ಪಟ್ಟು ಹಿಡಿದ ಅಭಿಮಾನಿಗಳು

ಸೂರಣಗಿ ಗ್ರಾಮಕ್ಕೆ ನಟ ಯಶ್ ಬರಬೇಕೆಂದು ಎಂಬ ಆಗ್ರಹ ಕೇಳಿ ಬಂದಿದೆ. ‘ಯಶ್ ನಮ್ಮೂರಿಗೆ ಬರಬೇಕು. ಬಂದು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು’ ಎಂದು ಮೃತ ಯುವಕರ ಗೆಳೆಯ ಪ್ರಕಾಶ ಮ್ಯಾಗೇರಿ ಆಗ್ರಹಿಸಿದ್ದಾರೆ. ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಗಾಯಾಳುಗಳ ಜೊತೆ ಮಾತನಾಡಿದ್ದಾರೆ. ಮೃತರ ಕುಟುಂಬಗಳಿಗೆ ಅವರು ಸಾಂತ್ವನ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:43 pm, Mon, 8 January 24

ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ