Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ

ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೆಲೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲೇರಿ ಗ್ರಾಮದ ಮುತ್ತಪ್ಪ ಖ್ಯಾಡದ, ಹೂವಪ್ಪ ಖ್ಯಾಡದ, ಹನಮಂತ ಖ್ಯಾಡದ ಎಂಬ ಸಹೋದರರಿಗೆ ಸೇರಿದ್ದ ಕಬ್ಬಿನ ತೋಟ ಸಂಪೂರ್ಣ ನಾಶವಾಗಿದೆ.

ಗದಗ: 10 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿ; ಅಧಿಕಾರಿಗಳ ವಿರುದ್ಧ ರೈತ ಕುಟುಂಬ ಆಕ್ರೋಶ
ಸುಟ್ಟು ಕರಕಲಾದ ಕಬ್ಬು
Follow us
TV9 Web
| Updated By: sandhya thejappa

Updated on:Nov 29, 2021 | 11:40 AM

ಗದಗ: ಆರ್ಥಿಕವಾಗಿ ಸಬಲವಾಗಬೇಕು ಅಂತ ರೈತರು ಕಬ್ಬು ಬೆಳೆಯ ಮೊರೆ ಹೋಗಿದ್ದರು. ತಮ್ಮ ಜಮೀನಿನ ಜೊತೆ ಪಕ್ಕದಲ್ಲಿದ್ದ ಬೇರೆಯವರ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು. ಕಬ್ಬು ಕೂಡ ಚೆನ್ನಾಗಿ ಬೆಳೆದಿತ್ತು. ಇನ್ನೊಂದು ತಿಂಗಳಲ್ಲಿ ಫ್ಯಾಕ್ಟರಿಗೆ ಕಳಿಸಬೇಕಿತ್ತು. ಆದರೆ ಅಷ್ಟರಲ್ಲೇ ಸುಮಾರು 10 ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಳೆ ಬೆಂಕಿಗಾಹುತಿಯಾಗಿದೆ. ವಿದ್ಯುತ್ ಅವಘಡದಿಂದ ರೈತರ ಕಣ್ಣೆದುರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೆಲೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಲೇರಿ ಗ್ರಾಮದ ಮುತ್ತಪ್ಪ ಖ್ಯಾಡದ, ಹೂವಪ್ಪ ಖ್ಯಾಡದ, ಹನಮಂತ ಖ್ಯಾಡದ ಎಂಬ ಸಹೋದರರಿಗೆ ಸೇರಿದ್ದ ಕಬ್ಬಿನ ತೋಟ ಸಂಪೂರ್ಣ ನಾಶವಾಗಿದೆ. 10 ಎಕರೆ ಪ್ರದೇಶದಲ್ಲಿ ಸಹೋದರರು ಕಬ್ಬು ಬೆಳೆದಿದ್ದರು. ಪ್ರತಿ ಎಕರೆಗೆ 40 ಸಾವಿರ ರೂಪಾಯಿ ಖರ್ಚು ಮಾಡಿ ಬೆಳೆದಿದ್ದರು. ಇನ್ನೂಂದು ತಿಂಗಳಲ್ಲಿ ಕಬ್ಬು ಕಟಾವು ಮಾಡಲಾಗುತ್ತಿತ್ತು. ಆದರೆ ಎಲ್ಲವೂ ಸುಟ್ಟು ಭಸ್ಮವಾಗಿದೆ.

ಪತ್ನಿ ಚಿನ್ನಾಭರಣ ಮಾರಿ ಕಬ್ಬು ಬೆಳೆದ ರೈತರು ಮುತ್ತಪ್ಪ ಖ್ಯಾಡ್ ಸಹೋದರರಿಗೆ 4 ಎಕರೆ ಜಮೀನಿದೆ. ಬೇರೆ ರೈತರ 6 ಎಕರೆ ಜಮೀನು ಲಾವಣಿ ಪಡೆದು ಒಟ್ಟು 10 ಎಕರೆಯಲ್ಲಿ ಕಬ್ಬು ಬೆಳೆದಿದ್ದಾರೆ. ಬೀಜ, ಗೊಬ್ಬರ ಸೇರಿ ಸುಮಾರು 8 ಲಕ್ಷ ಖರ್ಚು ಮಾಡಿದ್ದಾರೆ. ಪತ್ನಿ ಚಿನ್ನಾಭರಣ ಮಾರಾಟ ಮಾಡಿ ಕಬ್ಬು ಬೆಳೆದಿದ್ದಾರೆ. ಆಧಾಯದ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ.

ಅಂದುಕೊಂಡತೆ ನಡೆದಿದ್ದರೆ ತಿಂಗಳ ಬಳಿಕ 15 ಲಕ್ಷ ಲಾಭದ ನಿರೀಕ್ಷೆ ಇತ್ತು. ಎಲ್ಲವೂ ಹಾಳಾಗಿ ಹೊಯ್ತು. ಅಧಿಕಾರಿಗಳು ಯಾರೂ ಬಂದಿಲ್ಲ ಅಂತ ರೈತ ಕುಟುಂಬ ಕಿಡಿಕಾರಿದೆ.

ಬೆಂಕಿಗಾಹುತಿಯಾದ ಕಬ್ಬು

ಇದನ್ನೂ ಓದಿ

Parliament Winter Session ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲ; ಕಲಾಪ ಮಧ್ಯಾಹ್ನ 12 ಗಂಟೆವರೆಗೆ ಮುಂದೂಡಿದ ಸ್ಪೀಕರ್

‘ಹೀಗೆಲ್ಲ ಮಾಡಿದ್ರೆ ಪುನೀತ್​ಗೆ ದ್ರೋಹ ಮಾಡಿದಂತೆ ಆಗುತ್ತೆ’; ಅಪ್ಪು​ ಸಮಾಧಿ ಬಳಿ ರಾಘಣ್ಣ ಮಾತು

Published On - 11:37 am, Mon, 29 November 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!