AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಕ್ಕಳ ಮದುವೆಗಾಗಿ ಮಾಡಿಸಿಟ್ಟಿದ್ದ ಚಿನ್ನಾಭರಣ ಕೊಳ್ಳೆ ಹೊಡೆದ ಖದೀಮರು!

ಗದಗ: ಅವರು ಮೊಮ್ಮಕ್ಕಳ ಮದುವೆಗೆ ಅಂತ ಕಷ್ಟಪಟ್ಟು ಗೋವಾದಲ್ಲಿ ದುಡಿದು ಕೂಡಿಟ್ಟ ಹಣದಲ್ಲಿ ಅಷ್ಟೋ ಇಷ್ಟೋ ಚಿನ್ನ ಖರೀದಿಸಿದ್ರು. ಆದ್ರೆ ಆ ಮನೆ ಯಜಮಾನಿ ಗೋವಾಕ್ಕೆ ಹೋಗಿದ್ದೇ ತಡ. ಖತರ್ನಾಕ್‌ಗಳು ಭರ್ಜರಿ ಸ್ಕೇಚ್ ಹಾಕಿದ್ರು. ಗೋವಾದಿಂದ ಬಂದು ನೋಡಿದ್ರೆ ಮನೆ ಫುಲ್ ಖಾಲಿ ಖಾಲಿಯಾಗಿತ್ತು. ಮನೆಯಲ್ಲಿ ಇಟ್ಟಿರೋದನ್ನೆಲ್ಲಾ ಗುಡಿಸಿ ಗುಂಡಾಂತರ ಮಾಡಿದ್ದಾರೆ. ನಯಾಪೈಸೆ ಕೂಡ ಬಿಡದಂಗೆ ಕೊಳ್ಳೆ ಹೊಡೆದಿದ್ದಾರೆ. ದರೋಡೆಕೋರರ ಅಟ್ಟಹಾಸಕ್ಕೆ ಎಲ್ರೂ ನಡುಗಿ ಹೋಗಿದ್ದಾರೆ. ಮನೆಯಲ್ಲಿಟ್ಟಿದ್ದ ಚಿನ್ನಾಭರಣ. ಹಣ ಕಳೆದ್ಕೊಂಡು ದಂಗು ಬಡಿದು ಕೂತಿದ್ದಾರೆ. ತಾಂಡಾ […]

ಮೊಮ್ಮಕ್ಕಳ ಮದುವೆಗಾಗಿ ಮಾಡಿಸಿಟ್ಟಿದ್ದ ಚಿನ್ನಾಭರಣ ಕೊಳ್ಳೆ ಹೊಡೆದ ಖದೀಮರು!
ಸಾಧು ಶ್ರೀನಾಥ್​
|

Updated on: Jan 10, 2020 | 7:53 PM

Share

ಗದಗ: ಅವರು ಮೊಮ್ಮಕ್ಕಳ ಮದುವೆಗೆ ಅಂತ ಕಷ್ಟಪಟ್ಟು ಗೋವಾದಲ್ಲಿ ದುಡಿದು ಕೂಡಿಟ್ಟ ಹಣದಲ್ಲಿ ಅಷ್ಟೋ ಇಷ್ಟೋ ಚಿನ್ನ ಖರೀದಿಸಿದ್ರು. ಆದ್ರೆ ಆ ಮನೆ ಯಜಮಾನಿ ಗೋವಾಕ್ಕೆ ಹೋಗಿದ್ದೇ ತಡ. ಖತರ್ನಾಕ್‌ಗಳು ಭರ್ಜರಿ ಸ್ಕೇಚ್ ಹಾಕಿದ್ರು. ಗೋವಾದಿಂದ ಬಂದು ನೋಡಿದ್ರೆ ಮನೆ ಫುಲ್ ಖಾಲಿ ಖಾಲಿಯಾಗಿತ್ತು.

ಮನೆಯಲ್ಲಿ ಇಟ್ಟಿರೋದನ್ನೆಲ್ಲಾ ಗುಡಿಸಿ ಗುಂಡಾಂತರ ಮಾಡಿದ್ದಾರೆ. ನಯಾಪೈಸೆ ಕೂಡ ಬಿಡದಂಗೆ ಕೊಳ್ಳೆ ಹೊಡೆದಿದ್ದಾರೆ. ದರೋಡೆಕೋರರ ಅಟ್ಟಹಾಸಕ್ಕೆ ಎಲ್ರೂ ನಡುಗಿ ಹೋಗಿದ್ದಾರೆ. ಮನೆಯಲ್ಲಿಟ್ಟಿದ್ದ ಚಿನ್ನಾಭರಣ. ಹಣ ಕಳೆದ್ಕೊಂಡು ದಂಗು ಬಡಿದು ಕೂತಿದ್ದಾರೆ.

ತಾಂಡಾ ಜನರನ್ನ ಬೆಚ್ಚಿ ಬೀಳಿಸಿದೆ ಆ ಕಳ್ಳರ ಗ್ಯಾಂಗ್! ಜನರು ಮನೆಯಲ್ಲಿದ್ರೇನೆ ದರೋಡೆಕೋರು ಇರೋ ಬರೋದನ್ನೆಲ್ಲಾ ದೋಚಿ ಜೂಟ್ ಆಗ್ತಾರೆ. ಅಂತದ್ರಲ್ಲಿ ಮನೆಯಲ್ಲಿ ಯಾರು ಇಲ್ಲ ಅಂದ್ರೆ ಕೇಳ್ಬೇಕಾ? ಅಂದಹಾಗೆ ಗದಗ ತಾಲೂಕಿನ ನಾಗಾವಿ ತಾಂಡಾದ ಜನ 6 ತಿಂಗಳು ಮನೆಯಲ್ಲಿ ವಾಸಿಸಿದ್ರೆ, ಶೇ.70ರಷ್ಟು ಜನ 6 ತಿಂಗಳು ಗೋವಾಕ್ಕೆ ಕೆಲಸಕ್ಕೆ ತೆರಳ್ತಾರೆ. ಹೀಗೆ ಪಾರವ್ವ ದೊಡ್ಡಮನಿ ಮಕ್ಕಳು ಗೋವಾದಲ್ಲಿರೋದ್ರಿಂದ ಕಳೆದ 10 ದಿನದ ಹಿಂದೆ ಗೋವಾಕ್ಕೆ ತೆರಳಿದ್ರಂತೆ.

ಆದ್ರೆ, ಲೂಟಿ ಹೊಡೆಯೋಕೆ ಹೊಂಚು ಹಾಕಿದ್ದ ಖದೀಮರು, ಪಾರವ್ವ ದೊಡ್ಡಮನಿ ಮನೆ ಲಾಕ್​​ ಮುರಿದಿದ್ದಾರೆ. ಮನೆಯಲ್ಲಿಟ್ಟು ಹೋಗಿದ್ದ 150 ಗ್ರಾಂ ಚಿನ್ನಾಭರಣ, 1 ಲಕ್ಷ ನಗದು ದೋಚಿ ಜೂಟ್ ಆಗಿದ್ದಾರೆ. ಆದ್ರೆ, ಪಾರವ್ವ ಮರಳಿ ಊರಿಗೆ ಬಂದಾಗ ಶಾಕ್ ಆಗತ್ತು. ಮೊಮ್ಮಕ್ಕಳ ಮದುವೆಗಾಗಿ ಮಾಡಿಸಿದ್ದ ಚಿನ್ನಾಭರಣ, ಕೂಡಿಟ್ಟಿದ್ದ ಹಣ ದರೋಡೆಯಾಗಿರೋದು ಕಂಡು ಅಲ್ಲೇ ಕುಸಿದು ಬಿದ್ದಿದ್ದಾರೆ.

ಈರುಳ್ಳಿ ಆಯ್ತು.. ಈಗ ಚಿನ್ನಾಭರಣಕ್ಕೆ ಹಾಕಿದ್ರು ಕನ್ನ! ಇನ್ನು, ಇದೀಗ ಪಾರವ್ವ ಮನೆಯಲ್ಲಿ ಕಳ್ಳರು ಕೈಚಳಕ ತೋರಿರೋದು ಇಡೀ ತಾಂಡಾ ಜನರನ್ನೇ ದಂಗು ಬಡಿಸಿದೆ. ಪೊಲೀಸರು ಕೂಡ ಎಂಟ್ರಿ ಕೊಟ್ಟಿದ್ದು ಕಳ್ಳರ ಗ್ಯಾಂಗ್​ಗೆ ಬಲೆ ಬೀಸಿದ್ದಾರೆ. ಇಷ್ಟು ದಿನ ಗದಗದಲ್ಲಿ ಈರುಳ್ಳಿಗೆ ಕನ್ನ ಹಾಕ್ತಿದ್ದಿದ್ದು ಜನರ ನಿದ್ದೆಗೆಡಿಸಿತ್ತು. ಆದ್ರೀಗ ಚಿನ್ನದ ಬೆಲೆ ಗಗನಕ್ಕೇರಿರೋದ್ರಿಂದ ಮನೆಯಲ್ಲಿ ಹೇಗಿಡೋದು ಅಂತ ತಾಂಡಾ ನಿವಾಸಿಗಳ ದಂಗಾಗಿದ್ದಾರೆ. ಒಟ್ನಲ್ಲಿ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಖದೀಮರು ಕೈಚಳಕ ತೋರಿರೋದು ಜನರ ನಿದ್ದೆಗೆಡಿಸಿದೆ. ಇತ್ತ ಪೊಲೀಸ್ರು ಕೂಡ ದರೋಡೆಕೋರ ಪತ್ತೆಗೆ ಬಲೆ ಬೀಸಿದ್ದಾರೆ.

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ