AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆಗೆ ಬೆಂಕಿ: 23 ಮಂದಿ ಅಪರಾಧಿಗಳಿಗೆ 5 ವರ್ಷ ಜೈಲು, 36 ಲಕ್ಷ ರೂ. ದಂಡ

ಗದಗದ ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 23 ಜನರನ್ನು ಅಪರಾಧಿ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಅವರಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 36.87 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಪೊಲೀಸ್ ಠಾಣೆ ಹಾನಿಗೆ ಪರಿಹಾರವಾಗಿ 12.72 ಲಕ್ಷ ರೂಪಾಯಿಗಳನ್ನು ಪೊಲೀಸ್ ಇಲಾಖೆಗೆ ನೀಡಲು ಆದೇಶಿಸಲಾಗಿದೆ. ಈ ಪ್ರಕರಣ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು.

ಪೊಲೀಸ್ ಠಾಣೆಗೆ ಬೆಂಕಿ: 23 ಮಂದಿ ಅಪರಾಧಿಗಳಿಗೆ 5 ವರ್ಷ ಜೈಲು, 36 ಲಕ್ಷ ರೂ. ದಂಡ
ಗದಗ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ವಿವೇಕ ಬಿರಾದಾರ|

Updated on: Mar 25, 2025 | 7:42 AM

Share

ಗದಗ, ಮಾರ್ಚ್​ 25: ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ (Laxmeshwar Police Station) ಬೆಂಕಿ ಹಚ್ಚಿದ್ದ 23 ಜನ ಅಪರಾಧಿಗಳಿಗೆ ಗದಗ (Gadag) ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಶಿಕ್ಷೆ ಹಾಗೂ 36.87 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ದಂಡದ ಮೊತ್ತದಲ್ಲಿ ಪೊಲೀಸ್ ಠಾಣೆ ಹಾನಿ ಪರಿಹಾರವಾಗಿ 12.72 ಲಕ್ಷ ರೂಪಾಯಿ ನೀಡಲು ನ್ಯಾಯಾಲಯ ಸೂಚನೆ ನೀಡಿದೆ. ದೊಂಬಿ ಪ್ರಕರಣವೊಂದರಲ್ಲಿ ಇದೇ ಮೊದಲ ಬಾರಿಗೆ ಭಾರೀ ಪ್ರಮಾಣದ ದಂಡ ವಸೂಲಿ ಮಾಡಲು ನ್ಯಾಯಾಲಯ ಆದೇಶಿಸಿದೆ.

ದೇಶಾದ್ಯಂತ ಭಾರಿ ಸದ್ದು ಮಾಡಿದ್ದ ಪ್ರಕರಣ

8 ವರ್ಷಗಳ ಹಿಂದೆ ಅಂದರೆ 2017 ಫೆಬ್ರವರಿ 5 ರಂದು ಅಕ್ರಮ ಮರಳು ಸಾಗಿಸುವ ವಾಹನವನ್ನು ಪೊಲೀಸರು ತಡೆದಿದ್ದರು. ಈ ವಾಹನ ಚಲಾಯಿಸುತ್ತಿದ್ದ ಲಕ್ಷ್ಮೇಶ್ವರ ತಾಲೂಕಿನ ಬಟ್ಟೂರು ಗ್ರಾಮದ ನಿವಾಸಿ ಶಿವಪ್ಪ ಡೋಣಿ ಎಂಬುವರಿಗೆ ಪೊಲೀಸರು ಹಿಗ್ಗಾ ಮುಗ್ಗಾ ಥಳಿಸಿದ್ದರು ಎಂಬ ಆರೋಪ ಕೇಳಿಬಂದಿತ್ತು. ನಂತರ, ಶಿವಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ಶಿವಪ್ಪ ಮೃತಪಟ್ಟಿದ್ದರು.

ಇದರಿಂದ ಆಕ್ರೋಶಗೊಂಡಿದ್ದ ಶಿವಪ್ಪ ಅವರ ಪೋಷಕರು ಮತ್ತು ಗ್ರಾಮಸ್ಥರು ಮೃತದೇಹವನ್ನು ಪೊಲೀಸ್ ಠಾಣೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದರು. ನೋಡ ನೋಡುತ್ತಿದ್ದಂತೆ ಶಾಂತಯುತವಾಗಿ ನಡೆದಿದ್ದ ಪ್ರತಿಭಟನೆ, ವಿಕೋಪಕ್ಕೆ ತಿರುಗಿತ್ತು. ಪ್ರತಿಭಟನಾಕಾರರು ಪೊಲೀಸ್ ಠಾಣೆಯೊಳಗೆ ನುಗ್ಗಿ, ಕಚೇರಿಯಲ್ಲಿದ್ದ ಕಡತಗಳು, ದಾಖಲೆಗಳು, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದರು.

ಇದನ್ನೂ ಓದಿ
Image
ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವು: ಅಂಥ್ರಾಕ್ಸ್ ಸೊಂಕು ಶಂಕೆ
Image
ಬರ್ತ್​​ಡೇ ದಿನವೇ ಸೇಹಿತರ ದುರಂತ ಅಂತ್ಯ: ಈಜಲು ತೆರಳಿದ್ದ ಮೂವರು ನೀರುಪಾಲು
Image
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದು 19ನೇ ಬಜೆಟ್ ಮಂಡಿಸಲಿದ್ದಾರೆ: ಯತೀಂದ್ರ
Image
ಕೃಷಿಕ, ಮಹಿಳೆ, ಯುವಕರನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ: ವಿಜಯೇಂದ್ರ

ಪೊಲೀಸ್ ಜೀಪ್ ಹಾಗೂ ಹತ್ತಾರು ಬೈಕ್​ಗಳಿಗೆ ಬೆಂಕಿ ಹಚ್ಚಿದ್ದರು. ಈ ವೇಳೆಯಲ್ಲಿ ಪೊಲೀಸ್ ಠಾಣೆಯಲ್ಲಿ ಮೂರು ಸಿಬ್ಬಂದಿಗಳಿದ್ದರು. ದುಷ್ಕರ್ಮಿಗಳು ಪೊಲೀಸರ ಮೇಲೆ ಹಲ್ಲೆ ಸಹ ಮಾಡಿದ್ದರು. ಪೊಲೀಸ್​ ಸಿಬ್ಬಂದಿ ‌ಠಾಣೆಯ ಹಿಂಬಾಗಿನಿಲಿಂದ ಓಡಿ ಹೋಗಿ ಜೀವವನ್ನು ಉಳಿಸಿಕೊಂಡಿದ್ದರು.

ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. 8 ವರ್ಷದ ನಂತರ 122 ಜನರ ಪೈಕಿ 23 ಜನರಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 36 ಲಕ್ಷ 87 ಸಾವಿರ ದಂಡವನ್ನು ವಿಧಿಸಿ ಕೋರ್ಟ್ ಆದೇಶ ನೀಡಿದೆ. ಇಷ್ಟೊಂದು ಪ್ರಮಾಣದಲ್ಲಿ ದಂಡವನ್ನು ವಿಧಿಸಿದ್ದು, ರಾಜ್ಯದಲ್ಲಿ ಇದೇ ಮೊದಲಾಗಿದೆ.

ಇದನ್ನೂ ಓದಿ: ಯುವಕನ ಲವ್ ಸೆಕ್ಸ್ ದೋಖಾಕ್ಕೆ ತಾಯಿ-ಮಗಳು ಬಲಿ..!

ಇನ್ನು, ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆ ಬೆಂಕಿ ಹಚ್ಚಿದ ವೇಳೆಯಲ್ಲಿ ವಾಹನ ಹಾಗೂ ಪೊಲೀಸ್ ಠಾಣೆಗೆ ಸಾಕಷ್ಟು ಹಾನಿಯಾಗಿತ್ತು. ಹೀಗಾಗಿ, ಪರಿಹಾರವಾಗಿ 12 ಲಕ್ಷ 72 ರೂಪಾಯಿ ಗದಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅವರಿಗೆ ನೀಡಲು ನ್ಯಾಯಲಯ ಸೂಚನೆ ನೀಡಿದೆ. ಹಾಗೇ, 23 ಆರೋಪಿಗಳ ಪೈಕಿ, 1 ಹಾಗೂ ಎ ‌6ಗೆ 5.85 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ