AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧು ಹುಡುಕಿ ಸುಸ್ತಾದ 28 ವರ್ಷದ ಯುವಕ ತನಗೆ ಕನ್ಯೆ ಭಾಗ್ಯ ಕಲ್ಪಿಸುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೊರೆಯಿಟ್ಟ!

ಗ್ರಾಮ ಪಂಚಾಯತಿಗೆ ಅಭಿವೃದ್ಧಿ ಕೆಲಸ ಮಾಡಿಕೊಡಿ, ಕಳಪೆ ಕಾಮಗಾರಿ ಆಗಿವೆ ದುರಸ್ತಿ ಮಾಡಿ. ಕುಡಿಯುವ ನೀರಿನ ಸಮಸ್ಯೆ ಇದೆ, ಮೂಲಭೂತ ಸೌಕರ್ಯ ಕೊಡಿ ಎಂದು ಮನವಿ ಕೊಡುವುದು ಸಹಜ. ಆದ್ರೆ ಈ ಮೋಸ್ಟ್​​ ಎಲಿಜಿಬಲ್ ಬ್ಯಾಚುಲರ್​ ಮುತ್ತು ಹೂಗಾರ ತನ್ನ ಜೀವನಕ್ಕೆ ಸಂಗಾತಿ ಹುಡುಕಿ ಕೊಡಿ ಎಂದು ವಿನೂತನ ಪ್ರಯತ್ನ ಮಾಡಿದ್ದಾನೆ.

ವಧು ಹುಡುಕಿ ಸುಸ್ತಾದ 28 ವರ್ಷದ ಯುವಕ ತನಗೆ ಕನ್ಯೆ ಭಾಗ್ಯ ಕಲ್ಪಿಸುವಂತೆ ಸಿದ್ದರಾಮಯ್ಯ ಸರ್ಕಾರಕ್ಕೆ ಮೊರೆಯಿಟ್ಟ!
ಕನ್ಯೆ ಭಾಗ್ಯ ದಯಪಾಲಿಸಲು ಸಿದ್ದರಾಮಯ್ಯ ಸರ್ಕಾರಕ್ಕೆ ಮೊರೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಸಾಧು ಶ್ರೀನಾಥ್​|

Updated on:Jun 15, 2023 | 2:05 PM

Share

ಗದಗ: ಕನ್ಯೆ ಹುಡುಕಿ ಹುಡುಕಿ ಸುಸ್ತಾದ ಯುವಕನೊಬ್ಬ ಗ್ರಾಮ ಪಂಚಾಯತಿ ಮೊರೆಹೋಗಿದ್ದಾನೆ! ಗ್ರಾಮ ಪಂಚಾಯತಿ‌ ಮೂಲಕ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ (karnataka government) ಒತ್ತಾಯ ಮಾಡಿದ್ದಾನೆ. ಗದಗ (gadag) ಜಿಲ್ಲೆ ಮುಂಡರಗಿ (mundaragi) ತಾಲೂಕಿನ ಡಂಬಳ (dambal) ಗ್ರಾಮ ಪಂಚಾಯತಿಯಲ್ಲಿ ಈ ಪ್ರಸಂಗ ನಡೆದಿದೆ. ತನಗೊಂದು ಕನ್ಯೆಯನ್ನು (bride) ಹುಡುಕಿಕೊಡಿ ಎಂದು ಗ್ರಾಮ ಪಂಚಾಯತ್​​ ಪಿಡಿಒಗೆ ಮುತ್ತು ಹೂಗಾರ (28) ಎಂಬ ಯುವಕ ಮನವಿ ಮಾಡಿದ್ದಾನೆ.

ಗ್ರಾಮ ಪಂಚಾಯತಿಗೆ ಅಭಿವೃದ್ಧಿ ಕೆಲಸ ಮಾಡಿಕೊಡಿ, ಕಳಪೆ ಕಾಮಗಾರಿ ಆಗಿವೆ ದುರಸ್ತಿ ಮಾಡಿ. ಕುಡಿಯುವ ನೀರಿನ ಸಮಸ್ಯೆ ಇದೆ, ಮೂಲಭೂತ ಸೌಕರ್ಯ ಕೊಡಿ ಎಂದು ಮನವಿ ಕೊಡುವುದು ಸಹಜ. ಆದ್ರೆ ಈ ಮೋಸ್ಟ್​​ ಎಲಿಜಿಬಲ್ ಬ್ಯಾಚುಲರ್​ ಮುತ್ತು ಹೂಗಾರ ತನ್ನ ಜೀವನಕ್ಕೆ ಸಂಗಾತಿ ಹುಡುಕಿ ಕೊಡಿ ಎಂದು ವಿನೂತನ ಪ್ರಯತ್ನ ಮಾಡಿದ್ದಾನೆ. ಶುಭಸ್ಯ ಶೀಘ್ರಂ ಅನ್ನೋಣ.

ಇದನ್ನೂ ಓದಿ: ವರಮಾಲೆ ಹಾಕುವ ವೇಳೆ ವರನಿಗೆ ವಧು ಮಾಡಿದ ಕೆಲಸಕ್ಕೆ ಎಲ್ಲರೂ ಮೆಚ್ಚಿಗೆ ಸೂಚಿಸಿದರು! ಆ ರೊಮ್ಯಾಂಟಿಕ್ ವಿಡಿಯೋ ವೈರಲ್

ಏನಿದು ಪ್ರಸಂಗವೆಂದರೆ… 28 ವರ್ಷದ ಮುತ್ತು ಹೂಗಾರ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದಾರೆ. ತಿಂಗಳಿಗೆ 50 ಸಾವಿರ ರೂಪಾಯಿ ಆದಾಯವಿದೆ. ಆದರೂ ಹುಡುಗಿ ಸಿಗ್ತಾಯಿಲ್ಲ ಎಂಬುದು ಆತನ ಅಳಲಾಗಿದೆ. ನನಗೆ ಅಣ್ಣ, ತಮ್ಮ, ಅಕ್ಕ, ತಂಗಿ ಯಾರೂ ಇಲ್ಲ. ಕನ್ಯೆ ತೋರಿಸ್ತಾರೆ, ಬಳಿಕ ಸರ್ಕಾರಿ ನೌಕರಿ ಇದ್ದವ್ರಿಗೆ ಕೊಡ್ತೀವಿ ಅಂತಾ ಸಬೂಬು ಹೇಳ್ತಾ ಇದಾರೆ ಅಂತಾ ಯುವಕ ತನ್ನ ಗೋಳಾಟ ತೋಡಿಕೊಂಡಿದ್ದಾನೆ.

ಸುತ್ತಮುತ್ತ ಹಳ್ಳಿ ಹಳ್ಳಿ ಅಡ್ಯಾಡಿ ಕನ್ಯೆ ನೋಡಿದ್ದೇನೆ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ. ಹೀಗಾಗಿ ತನಗೊಂದು ಜೀವನದ ಸಂಗಾತಿಯನ್ನ ಹುಡುಕುವಂತೆ ಗ್ರಾಮ ಪಂಚಾಯತ್​​ಗೆ ಆತ ಮನವಿ ಸಲ್ಲಿಸಿದ್ದಾನೆ. ಯಾವುದೇ ಜಾತಿಯ ಕನ್ಯೆ ಇದ್ದರೂ ಪರವಾಗಿಲ್ಲ ಎಂದು ಗ್ರಾಮ ಪಂಚಾಯತ್​​ಗೆ ಮನವಿ ಕೊಟ್ಟಿದ್ದಾರೆ ಮುತ್ತು ಹೂಗಾರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:46 pm, Thu, 15 June 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು