AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾ. ಸಂಗನಬಸವ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ; ಡಾ. ಅಭಿನವ ಅನ್ನದಾನ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

ಹಾಲಕೆರೆ ರಥ ಬೀದಿಯಲ್ಲಿ ಅಂತಿಮ ಯಾತ್ರೆ ಮೆರವಣಿಗೆ ಸಾಗಿದೆ. ನಂತರ ಕ್ರೀಯಾ ಸಮಾಧಿಯಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಡಾ. ಸಂಗನಬಸವ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ; ಡಾ. ಅಭಿನವ ಅನ್ನದಾನ ಶ್ರೀಗಳ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ
ಕೊಟ್ಟೂರು ಮಠದ ಜಗದ್ಗುರು ಡಾ. ಸಂಗನ ಬಸವ ಮಹಾಸ್ವಾಮಿ, ಹಾಲಕೆರೆಯ ಅನ್ನದಾನೇಶ್ವರ ಮಠದ ಡಾ. ಅಭಿನವ ಅನ್ನದಾನ ಸ್ವಾಮೀಜಿ ಲಿಂಗೈಕ್ಯ
TV9 Web
| Updated By: ganapathi bhat|

Updated on:Nov 23, 2021 | 5:45 PM

Share

ಗದಗ: ಅಕ್ಷರ ದಾಸೋಹಿ ಡಾ.ಸಂಗನಬಸವ ಶ್ರೀ ಲಿಂಗೈಕ್ಯ ಹಿನ್ನಲೆ ಡಾ. ಸಂಗನಬಸವ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಶ್ರೀಗಳಿಗೆ ಸರ್ಕಾರಿ ಗೌರವ ಸಲ್ಲಿಕೆ ಮಾಡಲಾಗಿದೆ. ಗದಗ ಜಿಲ್ಲೆಯ ಹಾಲಕೆರೆ ಮಠದಲ್ಲಿ ಶ್ರೀಗಳ ಪಾರ್ಥಿವ ಶರೀರಕ್ಕೆ ರಾಷ್ಟ್ರಧ್ವಜ ಹೊದಿಸಿ ಇಂದು (ನವೆಂಬರ್ 23) ಗೌರವ ಸಮರ್ಪಣೆ ಮಾಡಲಾಗಿದೆ.

ಸರ್ಕಾರದ ಪ್ರತಿನಿಧಿಯಾಗಿ ಸಚಿವ ಸಿ‌ಸಿ ಪಾಟೀಲ, ಸಂಸದ ಶಿವಕುಮಾರ್ ಉದಾಸಿ, ಪಿ.ಸಿ ಗದ್ದಿಗೌಡರ್, ಶಾಸಕ ಕಳಕಪ್ಪ ಬಂಡಿ ಭಾಗಿ ಆಗಿದ್ದಾರೆ. ಶ್ರೀಗಳ ಪಾರ್ಥಿವ ಶರೀರ ಮೆರವಣಿಗೆ ನಡೆಸಲಾಗಿದೆ. ಮಠದ ಆವರಣದಿಂದ ಹಾಲಕೆರೆ ಗ್ರಾಮದಲ್ಲಿ ಶ್ರೀ ಅಂತಿಮ ಯಾತ್ರೆ ನಡೆಸಲಾಗಿದೆ. ಹಾಲಕೆರೆ ರಥ ಬೀದಿಯಲ್ಲಿ ಅಂತಿಮ ಯಾತ್ರೆ ಮೆರವಣಿಗೆ ಸಾಗಿದೆ. ನಂತರ ಕ್ರೀಯಾ ಸಮಾಧಿಯಲ್ಲಿ ವೀರಶೈವ ಲಿಂಗಾಯತ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಹಾಲಕೆರೆ ಸಂಸ್ಥಾನ ಮಠದ ಡಾ. ಅಭಿನವ ಅನ್ನದಾನ ಶ್ರೀಗಳು ಲಿಂಗೈಕ್ಯ ಹಿನ್ನಲೆ, ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರ ಸಾವಿರ ಭಕ್ತರು ಹರಿದು ಬಂದಿದ್ದಾರೆ. ಹುಬ್ಬಳ್ಳಿ ಮೂಗು ಜಗದ್ಗುರು, ದಿಂಗಾಲೇಶ್ವರ ಶ್ರೀಗಳು, ಹರಿಹರ ಪಂಚಮಸಾಲಿ ಮಠದ ವಚನಾನಂದ ಶ್ರೀಗಳು, ಶಿರಹಟ್ಟಿ ಫಕೀರೇಶ್ವರ ಶ್ರೀಗಳು ಸೇರಿ ನೂರಾರು ಮಠಾಧೀಶರು, ಹಾಗೂ ಮಾಜಿ ಸಚಿವರು, ಕಾಂಗ್ರೆಸ್, ಬಿಜೆಪಿ ಹಾಲಿ, ಮಾಜಿ ಶಾಸಕರು ಸೇರಿ ಹರಿದು ಬಂದ ಜನಪ್ರತಿನಿಧಿಗಳು ಭೇಟಿ ನೀಡಿ, ಶ್ರೀಗಳ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿದ್ದಾರೆ. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಹಾಲಕೆರೆ ಗ್ರಾಮದಲ್ಲಿ ಶ್ರೀಗಳ ಅಂತಿಮ ದರ್ಶನ ಮಾಡಿದ್ದಾರೆ.

ಹಾಲಕೆರೆ ಅನ್ನದಾನೇಶ್ವರ ಲಿಂಗೈಕ್ಯ ಹಿನ್ನೆಲೆ ವೀರಶೈವ ಸಂಪ್ರದಾಯದಂತೆ ಶ್ರೀಗಳ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ. ಜಗದ್ಗುರು ಶ್ರೀ ಡಾ. ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿಗಳು, ಮಠಾದೀಶರ ಮಂತ್ರಘೋಷಗಳೊಂದಿಗೆ ಶ್ರೀಗಳಿಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ. 10 ಸಾವಿರ ವಿಭೂತಿಗಳೊಂದಿಗೆ ಸ್ವಾಮೀಜಿಗಳ ಅಂತ್ಯಕ್ರಿಯೆ ಮಾಡಲಾಗಿದ್ದು, ಅಂತಿಮ ದರ್ಶನದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಭಕ್ತರು ಭಾಗಿ ಆಗಿದ್ದಾರೆ.

ಇದನ್ನೂ ಓದಿ: ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

ಇದನ್ನೂ ಓದಿ: ಕೊಟ್ಟೂರು ಮಠದ ಡಾ. ಸಂಗನ ಬಸವ ಮಹಾಸ್ವಾಮಿ, ಹಾಲಕೆರೆ ಅನ್ನದಾನೇಶ್ವರ ಮಠದ ಡಾ. ಅಭಿನವ ಸ್ವಾಮೀಜಿ ಲಿಂಗೈಕ್ಯ

Published On - 5:43 pm, Tue, 23 November 21

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!