AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ

Gadag farmer: ಈ ಹಿಂದೆ ತಿಂಗಳಿಗೆ ಮೂರ್ನಾಲ್ಕು ಸಾವಿರ ರೂಪಾಯಿ ಪಡೆಯುತ್ತಿದ್ದ, ಶಿಕ್ಷಕ ತಮ್ಮ ಜಮೀನಿನಲ್ಲಿ ಗುಲಾಬಿ ಬೆಳೆದು ತಿಂಗಳಿಗೆ 30 ಸಾವಿರ ರೂಪಾಯಿ ಲಾಭ ಪಡೆಯುತ್ತಿದ್ದಾರೆ. ವರ್ಷಕ್ಕೆ ಈ ಹೂವಿನಿಂದ 3 ರಿಂದ ನಾಲ್ಕು 4 ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ.

ಗದಗ: ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ; ಲಕ್ಷ ಲಕ್ಷ ರೂಪಾಯಿ ಸಂಪಾದನೆ
ಕೃಷಿಕ ಈರಪ್ಪ ಕಟಗಿ
TV9 Web
| Edited By: |

Updated on: Aug 03, 2021 | 11:05 AM

Share

ಗದಗ: ಅವರು ಅತಿಥಿ ಉಪನ್ಯಾಸಕ ವೃತ್ತಿ ಮಾಡುತ್ತಿದ್ದರು. ಆದರೆ ಈ ಉಪನ್ಯಾಸಕ ವೃತ್ತಿಯಿಂದ ಅವರ ಹೊಟ್ಟೆ ತುಂಬುತ್ತಿರಲಿಲ್ಲ. ಹೀಗಾಗಿ ಬದುಕು ಸಾಗಿಸಲು ಏನಾದರು ಮಾಡಬೇಕು ಎಂದು ಯೋಚಿಸುತ್ತಿದ್ದಾಗ ಮೊಬೈಲ್​ನಲ್ಲಿ ಅವರಿಗೆ ಮುಂದಿನ ಜೀವನದ ದಾರಿ ಸಿಕ್ಕಿದೆ. ಅಂದು ಯೂಟ್ಯೂಬ್​ನಲ್ಲಿ ಗುಲಾಬಿ ಕೃಷಿ ( Agriculture) ಹೇಗೆ ಮಾಡುತ್ತಾರೆ ಎಂದು ಮಾಹಿತಿ ಪಡೆದಿದ್ದ ಅತಿಥಿ ಉಪನ್ಯಾಸಕ, ತಮ್ಮ ಜೀವನದಲ್ಲಿ ಅದೇ ಮಾರ್ಗ ಅನುಸರಿಸಿ, ಭರ್ಜರಿ ಗುಲಾಬಿ ಹೂ (Rose) ಬೆಳೆದು, ಹೂವಿನಂತ ಬದುಕು ಕಟ್ಟಿಕೊಂಡಿದ್ದಾರೆ.

ಪಾಠ ಹೋಳೋದನ್ನು ಬಿಟ್ಟು ಕೃಷಿ ಕೆಲಸದಲ್ಲಿ ಮಗ್ನರಾದ ಅತಿಥಿ ಉಪನ್ಯಾಸಕ ಈರಪ್ಪ ಕಟಗಿ, ಗದಗ ತಾಲೂಕಿನ ಶಿರುಂಜ ಗ್ರಾಮದ ನಿವಾಸಿ. ಎಂಎ ಮುಗಿಸಿಕೊಂಡು ಗದಗ, ಮುಳಗುಂದ ಸೇರಿದಂತೆ ನಾನಾ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ಇಲ್ಲಿ ಕೊಡುವ ಮೂರ್ನಾಲ್ಕು ಸಾವಿರ ರೂಪಾಯಿಯಲ್ಲಿ ಇವರಿಗೆ ಬದುಕು ಸಾಗಿಸಲು ಸಾಧ್ಯವಾಗುತ್ತಿರಲಿಲ್ಲ. ಹಾಗಾಗಿಯೇ ಏನಾದರೂ ಮಾಡಬೇಕು ಎನ್ನುವ ಚಿಂತೆ ಕಾಡುತ್ತಿತ್ತು.

ಬಳಿಕ ಯೂಟ್ಯೂಬ್ ನೋಡುವಾಗ ಗುಲಾಬಿ ಕೃಷಿ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ತಡಮಾಡದೆ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ, ತಮ್ಮ ಪಿತ್ರಾರ್ಜಿತ ಎರಡುವರೆ ಎಕರೆ ಜಮೀನಿನಲ್ಲಿ ಗುಲಾಬಿ ಕೃಷಿ ಮಾಡಲು ಆರಂಭ ಮಾಡಿದ್ದಾರೆ. ಈ ಹಿಂದೆ ತಿಂಗಳಿಗೆ ಮೂರ್ನಾಲ್ಕು ಸಾವಿರ ರೂಪಾಯಿ ಪಡೆಯುತ್ತಿದ್ದ, ಶಿಕ್ಷಕ ತಮ್ಮ ಜಮೀನಿನಲ್ಲಿ ಗುಲಾಬಿ ಬೆಳೆದು ತಿಂಗಳಿಗೆ 30 ಸಾವಿರ ರೂಪಾಯಿ ಲಾಭ ಪಡೆಯುತ್ತಿದ್ದಾರೆ. ಅಲ್ಲದೆ ವರ್ಷಕ್ಕೆ ಈ ಹೂವಿನಿಂದ 3 ರಿಂದ ನಾಲ್ಕು 4 ಲಕ್ಷ ರೂಪಾಯಿ ಸಂಪಾದನೆ ಮಾಡುತ್ತಿದ್ದಾರೆ.

ಶಿಕ್ಷಕ ವೃತ್ತಿಗೆ ಗುಡ್​ಬೈ ಹೇಳಿ ಕೃಷಿಯಲ್ಲಿ ಪ್ರಯೋಗ! ಗದಗ ಜಿಲ್ಲೆಯಲ್ಲಿ ಗುಲಾಬಿ ಹೂವಿನ ಕೃಷಿ ಮಾಡುವವರ ಸಂಖ್ಯೆ ಬಹಳ ಕಡಿಮೆ. ಆದರೂ ಹೊಸ ಬೆಳೆಯನ್ನು ಬೆಳೆದು ಉಪನ್ಯಾಸಕ ಸೈ ಎನಿಸಿಕೊಂಡಿದ್ದಾರೆ. ಎರಡು ಎಕರೆ ಜಮೀನಿನಲ್ಲಿ ಸಾಲಿನಿಂದ ಸಾಲಿಗೆ ಗಿಡದಿಂದ ಗಿಡಕ್ಕೆ 4 ಅಡಿ ಅಂತರದಲ್ಲಿ 6 ಸಾವಿರ ಗಿಡಗಳನ್ನು ನಾಟಿ ಮಾಡಿದ್ದಾರೆ. ಬೆಂಗಳೂರು ಬಳಿಯ ಸರ್ಜಾಪುರ ನರ್ಸರಿಯಿಂದ ಗ್ಲ್ಯಾಡಿಯೇಟರ್, ಬ್ಲ್ಯಾಕ್ ಮ್ಯಾಜಿಕ್, ಮೋದಿ ರೆಡ್, ಮ್ಯಾಂಗೋ ಯಲೋ, ಎನ್ನುವ ತಳಿಗಳ ಗುಲಾಬಿ ಗಿಡಗಳನ್ನು ನಾಟಿ ಮಾಡಿದ್ದಾರೆ.

rose

ಎರಡು ಎಕರೆ ಜಮೀನಿನಲ್ಲಿ ಭರ್ಜರಿ ಗುಲಾಬಿ ಹೂವು ಬೆಳೆದ ಉಪನ್ಯಾಸಕ

ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಗುಲಾಬಿ ಕೃಷಿ ಮಾಡುತ್ತಿದ್ದು, ಸ್ಥಳೀಯವಾಗಿಯೇ ಉತ್ತಮವಾದ ಮಾರುಕಟ್ಟೆ ಇರುವುದರಿಂದ ಗದಗ-ಹುಬ್ಬಳ್ಳಿಯಲ್ಲಿಯೇ ಗುಲಾಬಿ ಹೂಗಳನ್ನು ಮಾರಾಟ ಮಾಡಬಹುದು. ಇನ್ನೂ ಸಾವಯವ ಕೃಷಿ ಪದ್ಧತಿ ಹಾಗೂ ರಾಸಾಯನಿಕ ಪದ್ಧತಿ ಮೂಲಕ ಕೃಷಿ ಮಾಡುತ್ತಿದ್ದು, ಇದರಿಂದ ಸ್ವಾವಲಂಬಿ ಜೀವನ ನಡೆಸುತ್ತಿದ್ದೇನೆ ಎಂದು ಮಾದರಿ ಕೃಷಿಕ ಈರಪ್ಪ ಕಟಗಿ ಹೇಳಿದ್ದಾರೆ.

ಅಂದು ಉಪನ್ಯಾಸಕ ವೃತ್ತಿಯಿಂದ ಬದುಕು ಸಾಗಿಸಲು ಪರದಾಟ ನಡೆಸಿದ್ದ ಶಿಕ್ಷಕ. ಇಂದು ಸ್ವಾವಲಂಬಿ ಬದುಕು ಸಾಗಿಸುತ್ತಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ನೋಡಿ ಕಾಲ ಹರಣ ಮಾಡುವವರ ಸಂಖ್ಯೆಯೇ ಹೆಚ್ಚಳ. ಹೀಗಿರುವಾಗ ಈ ಅತಿಥಿ ಉಪನ್ಯಾಸಕ ಬದುಕನ್ನೇ ಬಂಗಾರವನ್ನಾಗಿಸುವಂತೆ ಗುಲಾಬಿ ಹೂವು ಬೆಳೆಸಿದ್ದಾರೆ. ಒಟ್ಟಾರೆ ಮನಸ್ಸು ಮಾಡಿದರೆ ಏನಾದರೂ ಮಾಡಿ ಬದುಕು ಕಟ್ಟಿಕೊಳ್ಳಬಹುದು ಎನ್ನುವುದಕ್ಕೆ ಈ ಉಪನ್ಯಾಸಕ ಉತ್ತಮ ಉದಾಹರಣೆಯಾಗಿದ್ದಾರೆ.

ವರದಿ: ಸಂಜೀವ ಪಾಂಡ್ರೆ

ಇದನ್ನೂ ಓದಿ: ನೀಲಕುರಿಂಜಿ ಹೂವು ಕೇರಳದಲ್ಲಿ 12 ವರ್ಷಗಳಿಗೊಮ್ಮೆ ಮಾತ್ರ ಅರಳುವ ಸುಗಂಧಭರಿತ ನೀಲಿವರ್ಣದ ಪುಷ್ಪ

ಬಸವಸಾಗರ ಡ್ಯಾಂನಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ; 2000 ಎಕರೆಗೂ ಹೆಚ್ಚು ಪ್ರದೇಶದಲ್ಲಿದ್ದ ಭತ್ತದ ಬೆಳೆ ಜಲಾವೃತ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್