AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಜೈಲಿನಲ್ಲಿಯೇ ಬ್ಲೇಡ್​ನಿಂದ ಕತ್ತು ಕೊಯ್ದುಕೊಂಡು ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಯತ್ನ

ಆತ ಮಹಿಳೆಯ ಭೀಕರ ಕೊಲೆ ಮಾಡಿ ಜೈಲು ಸೇರಿದ್ದ. ಜೈಲು ಸೇರಿ ಈಗ ಬರೊಬ್ಬರಿ ನಾಲ್ಕು ತಿಂಗಳಾಗಿವೆ. ಮೊನ್ನೆ ಪತ್ನಿ ಜೊತೆ ಮಾಡಿದ ವಿಚಾರಣಾಧೀನ ಖೈದಿ ನನಗೆ ಬಿಸಿ ರೊಟ್ಟಿ ತಿನ್ನುವಾಸೆಯಾಗಿದೆ ಎಂದು ಹೇಳಿದ್ದ. ಇವತ್ತು ಪತ್ನಿ ಜೈಲು ಸೇರಿದ ಪತಿಗಾಗಿ ಬಿಸಿ ಬಿಸಿ ರೊಟ್ಟಿ ಮಾಡಿಕೊಂಡು ಬರುತ್ತಿದ್ದಳು. ಆದ್ರೆ, ಪತ್ನಿ ಜೈಲಿಗೆ ಬರುಷ್ಟರಲ್ಲೇ ಪತಿ ಆಸ್ಪತ್ರೆ ಸೇರಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ. ಅಷ್ಟಕ್ಕೂ ಆಗಿದ್ದಾದ್ರೂ ಏನೂ ಅಂತಿರಾ? ಇಲ್ಲಿದೆ ನೋಡಿ.

ಗದಗ: ಜೈಲಿನಲ್ಲಿಯೇ ಬ್ಲೇಡ್​ನಿಂದ ಕತ್ತು ಕೊಯ್ದುಕೊಂಡು ವಿಚಾರಣಾಧೀನ ಖೈದಿ ಆತ್ಮಹತ್ಯೆಗೆ ಯತ್ನ
ಪತಿ ಕಂಡು ಗೋಳಾಡುತ್ತಿರುವ ಆತನ ಪತ್ನಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Apr 18, 2023 | 10:25 AM

Share

ಗದಗ: ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ. ಆತ್ಮಹತ್ಯೆ ಮಾಡಿಕೊಳ್ಳುವಂಥವನಲ್ಲ ನನ್ನ ಗಂಡ ಎಂದು ಪತ್ನಿ ಗೋಳಾಟ. ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ (Gadag) ನಗರದ ಜಿಮ್ಸ್ ಆಸ್ಪತ್ರೆಯಲ್ಲಿ. ನಿನ್ನೆ(.17) ಬೆಳಗ್ಗೆ ಗದಗ ಸಬ್ ಜೈಲ್​ನಲ್ಲಿ ಖೈದಿಗಳು, ವಿಚಾರಣಾಧೀನ ಖೈದಿಗಳು, ಜೈಲು ಅಧಿಕಾರಿಗಳು ಬೆಚ್ಚಿಬಿದ್ದಿದ್ರು. ಹೌದು ಶೌಚಾಲಯದಲ್ಲಿ ಓರ್ವ ವಿಚಾರಣಾಧೀನ ಖೈದಿ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ಕೊಲೆ ಆರೋಪದ ಮೇಲೆ ಗದಗ ಸಬ್ ಜೈಲು ಸೇರಿದ್ದ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪ ಗ್ರಾಮದ ಬಸಪ್ಪ ಚಂದ್ರ ಎಂಬಾಂತ ಮುಂಜಾನೆ ಬ್ಲೇಡ್​ನಿಂದ ಕತ್ತು ಕೊಯ್ದಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.

ಜೈಲಿನ ಬಾತ್ ರೂಂನಲ್ಲಿ ಬಸಪ್ಪ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ. ತಕ್ಷಣ ಎಚ್ಚೆತ್ತ ಅಧಿಕಾರಿಗಳು ಗದಗ ಜಿಮ್ಸ್ ಆಸ್ಪತ್ರೆಗೆ ಸಾಗಿಸಿದ್ದರು. ಸಾಕಷ್ಟು ರಕ್ತಸ್ರಾವವಾಗಿರುವ ಕಾರಣ ಆರೋಪಿ ಬಸಪ್ಪನ ಸ್ಥಿತಿ ಗಂಭೀರವಾಗಿದೆ. ತಕ್ಷಣ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತೆ ಎಂದಿದ್ದಾರೆ. ಕೊಲೆ ಮಾಡಿದಕ್ಕೆ ಪಶ್ಚಾತಾಪವಾಗಿಯೋ ಅಥವಾ ಮತ್ತೆ ಯಾವ ಕಾರಣವೋ ಗೋತ್ತಿಲ್ಲ ವಿಚಾರಣಾಧೀನ ಖೈದಿ ಬಸಪ್ಪ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಇದೀಗ ಬಸಪ್ಪ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾನೆ.

ಇದನ್ನೂ ಓದಿ:ಮನೆಯಲ್ಲೆ ಮಹಿಳೆ ಅನುಮಾನಸ್ಪದ ಸಾವು; ನ್ಯಾಯಕ್ಕಾಗಿ ಅತ್ತೆ ಮಗನಿಂದ ಆತ್ಮಹತ್ಯೆ ಹೈಡ್ರಾಮಾ

ಅನೈತಿಕ ಸಂಬಂಧ ಹಿನ್ನಲೆ 2022ರಲ್ಲಿ ಮಹಿಳೆಯೊಬ್ಬಳ ಕೊಲೆ ಮಾಡಿ ಜೈಲು ಸೇರಿದ್ದ ಬಸಪ್ಪ

2022ರ ಡಿಸೆಂಬರ್ 18ರಂದು ನರಗುಂದ ತಾಲೂಕಿನ ಕುರುಗೋವಿನಕೊಪ್ಪ ಗ್ರಾಮದ ಜಮೀನೊಂದರಲ್ಲಿ ಅನೈತಿಕ ಸಂಬಂಧ ಹಿನ್ನಲೆ ಮಹಿಳೆಯೊಬ್ಬಳ‌ ಭೀಕರ ಕೊಲೆ ಮಾಡಿ ಬಸಪ್ಪ ಜೈಲು ಪಾಲಾಗಿದ್ದ. ನಾಲ್ಕು ದಿನಗಳ ಹಿಂದೆ ಪತ್ನಿ ಜೊತೆ ಜೈಲಿನಿಂದ ಆರೋಪಿ ಬಸಪ್ಪ ಮಾತನಾಡಿದ್ದಾನೆ. ನನಗೆ ಬಿಸಿ ಬಿಸಿ ರೊಟ್ಟಿ ತಿನ್ನುವಂತಾಗಿದೆ. ನೀನು ಬರುವಾಗ ರೊಟ್ಟಿ ತಗೊಂಡು ಬಾ ಅಂತ ಹೇಳಿದ್ದಾನೆ. ಹೀಗಾಗಿ ಪತ್ನಿ ಪತಿಗಾಗಿ ಬಿಸಿ ಬಿಸಿ ರೊಟ್ಟಿ ಮಾಡಿಕೊಂಡು ಗದಗ ಸಬ್ ಜೈಲ್ ಗೆ ಹೋಗಲು ಸಜ್ಜಾಗಿದ್ದಳು. ಅಷ್ಟರಲ್ಲೇ ಸಬ್ ಜೈಲ್ ಅಧಿಕಾರಿಗಳು ಪತ್ನಿಗೆ ಫೋನ್ ಮಾಡಿ, ನಿನ್ನ ಗಂಡ ಬ್ಲೇಡ್ ನಿಂದ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು, ಸುದ್ದಿ ಕೇಳಿದ ಪತ್ನಿಗೆ ಬರಸಿಡಿಲು ಬಂಡಿದಂತಾಗಿದೆ. ಕೂಡಲೇ ಓಡೋಡಿ ಗದಗ ಜಿಮ್ಸ್ ಆಸ್ಪತ್ರೆಗೆ ಬಂದಿದ್ದಾಳೆ. ಗಂಡನ ಸ್ಥಿತಿ ನೋಡಿ, ನನ್ನ ಗಂಡ ಈ ರೀತಿ ಮಾಡಿಕೊಳ್ಳುವಂಥ ವ್ಯಕ್ತಿ ಅಲ್ಲ ಎಂದು ಕಣ್ಣೀರು ಹಾಕುತ್ತಿದ್ದಾಳೆ.

ವಿಚಾರಣಾಧೀನ ಖೈದಿ ಬಸಪ್ಪ ಆತ್ಮಹತ್ಯೆಗೆ ಯತ್ನಿಸಿದ್ದು ಹೇಗೆ ಎನ್ನುವ ಪ್ರಶ್ನೆ ಕಾಡುತ್ತಿದೆ. ಜೈಲ್​ನ ಸೆಲ್​ನಲ್ಲಿ ಯಾವುದೇ ವಸ್ತುಗಳು ಇರಲ್ಲ. ಆದ್ರೆ, ಈ ಬಸಪ್ಪನ ಬಳಿ ಬ್ಲೇಡ್ ಎಲ್ಲಿಂದ ಬಂತು ಅನ್ನೋ ಪ್ರಶ್ನೆ ಕಾಡುತ್ತಿದೆ. ನಿನ್ನೆ ಭಾನುವಾರ ಇರೋದ್ರಿಂದ ಎಲ್ಲ ಆರೋಪಿಗಳ ಕ್ಷೌರ ಮಾಡಿಸಲಾಗಿದೆ. ಆಗ ಏನಾದ್ರೂ ಬ್ಲೇಡ್ ಬಚ್ಚಿಟ್ಟಿಕೊಂಡಿದ್ನೋ ಎನ್ನುವ ಹತ್ತಾರು ಪ್ರಶ್ನೆಗಳು ಕಾಡ್ತಾಯಿವೆ. ಅಷ್ಟಕ್ಕೂ ಬಸಪ್ಪ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನೂ ಅನ್ನೋದು ತನಿಖೆ ಬಳಿಕ ಗೋತ್ತಾಗಲಿದೆ.

ವರದಿ: ಸಂಜೀವ ಪಾಂಡ್ರೆ, ಟಿವಿ9 ಗದಗ

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:24 am, Tue, 18 April 23

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ