AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗನವಾಡಿ ಮಕ್ಕಳ ಜೀವದ ಜೊತೆ ಚೆಲ್ಲಾಟ; ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ

ಗರ್ಭೀಣಿ ಮಹಿಳೆಯರು ಹಾಗೂ ಮಕ್ಕಳಿಗೆ ಸರ್ಕಾರವೇ ಉಚಿತವಾಗಿ ಪೌಷ್ಠಿಕ ಆಹಾರವಾದ ಮೊಟ್ಟೆ, ದವಸ-ಧಾನ್ಯಗಳು, ಸೇರಿದಂತೆ ಇನ್ನಿತರ ಪದ್ದಾರ್ಥವನ್ನು ಕೊಡುತ್ತದೆ. ಆದರೆ, ಗದಗ ನಗರದ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿಇದನ್ನು ಸರಿಯಾಗಿ ನಿರ್ವಹಣೆ ಮಾಡದೆ, ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿಗಳನ್ನು ಮಕ್ಕಳಿಗೆ ನೀಡಲಾಗುತ್ತಿದೆ.

ಅಂಗನವಾಡಿ ಮಕ್ಕಳ ಜೀವದ ಜೊತೆ ಚೆಲ್ಲಾಟ; ಕಳಪೆ ಆಹಾರ ನೀಡ್ತಿರುವ ಕಾರ್ಯಕರ್ತೆ, ಸಹಾಯಕಿ ವಿರುದ್ಧ ಪೋಷಕರ ಆಕ್ರೋಶ
ಗದಗದಲ್ಲಿ ಅಂಗನವಾಡಿ ಮಕ್ಕಳಿಗೆ ಕಳಪೆ ಮೊಟ್ಟೆ ಪೂರೈಕೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 16, 2024 | 4:06 PM

Share

ಗದಗ, ಫೆ.16: ಅಂಗನವಾಡಿ ಮಕ್ಕಳ ಜೀವದ ಜೊತೆ‌ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ ಚೆಲ್ಲಾಟವಾಡುತ್ತಿದ್ದು, ಮಕ್ಕಳಿಗೆ ಸಂಪೂರ್ಣ ಕಳಪೆ ಆಹಾರ ಪೂರೈಕೆ ಮಾಡಿದ ಘಟನೆ ಗದಗ(Gadag) ನಗರದ ಗಂಗಾಪೂರ ಪೇಟೆಯ ಅಂಗನವಾಡಿ‌ ಕೇಂದ್ರ 178ರಲ್ಲಿ ಬೆಳಕಿಗೆ ಬಂದಿದೆ. ಕೊಳೆತ ಮೊಟ್ಟೆ, ಬೂಸ್ಟ್ ಹಿಡಿದ ಶೇಂಗಾ ಚಿಕ್ಕಿ ಹಾಗೂ ತರಕಾರಿ ಸೇರಿದಂತೆ ಆಹಾರ ಧಾನ್ಯಗಳಲ್ಲಿ ನುಸಿಗಳು ಕಂಡು ಬರುತ್ತಿವೆ. ಅದನ್ನೇ ಮಕ್ಕಳಿಗೆ ನೀಡುತ್ತಿರುವ ಹಿನ್ನಲೆ ರೊಚ್ವಿಗೆದ್ದ ಪಾಲಕರು, ಅಂಗನವಾಡಿ ಕೇಂದ್ರಕ್ಕೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲಿಗಳು ಕಚ್ಚಿದ ತರಕಾರಿ‌ಯನ್ನೇ ಮಕ್ಕಳಿಗೆ ತಿನ್ನುಸುತ್ತಿರೋ ಕಾರ್ಯಕರ್ತೆ

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪನಿರ್ದೇಶಕ ಶೆಟ್ಟೆಪ್ಪನವರ​ನ್ನು ಹಿಗ್ಗಾಮುಗ್ಗಾ ತರಾಟೆಗೆ ತಹೆದುಕೊಂಡು ಕಳಪೆ ಆಹಾರ ಧಾನ್ಯಗಳನ್ನು ಅಧಿಕಾರಿಗಳ ಎದುರೆ ಸುರಿದ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲಿಗಳು ಕಚ್ಚಿದ ತರಕಾರಿ‌ಯನ್ನೇ ಮಕ್ಕಳಿಗೆ ತಿನ್ನುಸುತ್ತಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ವಿರುದ್ಧ ಕಿಡಿಕಾರಿದ್ದಾರೆ. ಕಳಪೆ ಆಹಾರ ತಿಂದು ಮಕ್ಕಳು ಆರೋಗ್ಯ ಹದಗೆಡುತ್ತಿದ್ದು, ಹೊಟ್ಟೆ ನೋವಿನಿಂದ ಬಳಲಿ ಫುಡ್ ಪಾಯಿಜನ್ ಆಗಿ ಆಸ್ಪತ್ರೆಗೆ ಸೇರುತ್ತಿವೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆ ಸರಬರಾಜು ಅಗಿರುವುದನ್ನು ಒಪ್ಪಿ ವಿಷಾದ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್

ಈ ಕುರಿತು ಮಾತನಾಡಿದ ಮಹಿಳಾ ಮತ್ತು ಮಕ್ಕಳ‌ ಅಭಿವೃದ್ಧಿ ಇಲಾಖೆ, ‘ಇದು ಗರ್ಭೀಣಿ ಮಹಿಳೆಯರು ಹಾಗೂ ಮಕ್ಕಳಿಗೆ ಕೊಡಬೇಕಾದಂತಹ ಆಹಾರವಾಗಿದೆ. ಆದರೆ, ಇಲ್ಲಿನ ಕಾರ್ಯಕರ್ತೆಯ ನಿರ್ಲಕ್ಷ್ಯತನದಿಂದ ಆಹಾರ ಪದ್ದಾರ್ಥಗಳನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ, ಆದ್ದರಿಂದ ಈ ಕೂಡಲೇ ಆಕೆಯ ಮೇಲೆ ಸೂಕ್ತ ಕ್ರಮಕೈಗೊಂಡು ಅಮಾನತ್ತುಗೊಳಿಸುತ್ತೇವೆ. ಜೊತೆಗೆ ಇದೇ ಗ್ರಾಮದ ಒಳ್ಳೆಯ ಕಾರ್ಯಕರ್ತೆಗೆ ಇಲ್ಲಿನ ಅಧಿಕಾರ ಕೊಟ್ಟು ನಿರ್ವಹಣೆ ಮಾಡಲು ನಾವು ವ್ಯವಸ್ಥೆ ಮಾಡುತ್ತೇವೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ