AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಣ ತಾಲ್ಲೂಕಿನಲ್ಲಿ ಅಮಾನವೀಯ ಘಟನೆ: ಬಟ್ಟೆ ‌ಬಿಚ್ಚಿಸಿ, ಸೆಗಣಿ ತಿನಿಸಲು ಮುಂದಾದರು

ಜೀವ ಸಹಿತ ಸುಟ್ಟು ಬಿಡೋಣ ಎಂದಿದ್ದಲ್ಲದೇ ಲೈಟ್ ಕಂಬಕ್ಕೆ ಕಟ್ಟಲು ಆರೋಪಿಗಳು ಮುಂದಾಗಿದ್ದರು ಎಂದು ಹೇಳಲಾಗಿದೆ. ನಂತರ ಊರು ಬಿಟ್ಟು ಹೋಗುವಂತೆ ಜೀವ ಬೆದರಿಕೆ ಕೂಡ ಹಾಕಲಾಗಿದೆಯಂತೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ 6 ಮಂದಿ ವಿರುದ್ಧ ವಿವಿಧ ಕಲಂಗಳ ಅಡಿ ಪ್ರಕರಣ ದಾಖಲಾಗಿದೆ.

ರೋಣ ತಾಲ್ಲೂಕಿನಲ್ಲಿ ಅಮಾನವೀಯ ಘಟನೆ: ಬಟ್ಟೆ ‌ಬಿಚ್ಚಿಸಿ, ಸೆಗಣಿ ತಿನಿಸಲು ಮುಂದಾದರು
ಸಾಂಕೇತಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on: Jun 25, 2022 | 7:58 PM

Share

ಗದಗ ಜಿಲ್ಲೆಯ ರೋಣ ತಾಲ್ಲೂಕಿನಲ್ಲಿ ಅಮಾನವೀಯ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿ ನಿಂತಿದ್ದ ಪರಿಶಿಷ್ಟ ಜಾತಿಯ‌ ಮೂರು ಜನರಿಗೆ ಏಳು ಜನರ ಗುಂಪೊಂದು ಅಮಾನವೀಯವಾಗಿ ನಡೆದುಕೊಂಡಿದೆ. ಮೆಣಸಗಿ ಗ್ರಾಮದ ಕಾಂಟ್ರಾಕ್ಟರ್ ಪುಂಡಲೀಕ ಬಸಪ್ಪ ಮಾದರ ಎಂಬಾತ ಗೆಳೆಯರಾದ ಹನಮಂತ ದ್ಯಾಮಪ್ಪ ಮಾದರ ಹಾಗೂ ಗಣೇಶ್ ದುರಗಪ್ಪ ದೇವರಮನಿ ಜೊತೆಗೆ ಗ್ರಾಮದ ಬಸ್ ನಿಲ್ದಾಣದಲ್ಲಿ ನಿಂತುಕೊಂಡಾಗ ಏಕಾಏಕಿ ಎಂಟು ಹತ್ತು ಜನರ ಗುಂಪೊಂದು ಬಂದು ಅವಾಚ್ಯ ಶಬ್ದಗಳಿಂದ ಬೈದಾಡಿ ನಿಂದಿಸಿ, ಊರಾಗ ರೌಡಿಸಂ ಮಾಡಾಕತ್ತಿರೇನ ಲೇ… ಮಕ್ಕಳ ಅಂತಾ ಬೈದಾಡುತ್ತಾ ಫಿರ್ಯಾದಿ ಗುತ್ತಿಗೆದಾರ ಪುಂಡಲೀಕ ಮಾದರ ಎಂಬಾತನ ಎದೆ ಮೇಲಿನ ಅಂಗಿ ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡಾಗ ಆರೋಪಿ ರಾಜು ಬದಾಮಿ ಎಂಬಾತ ಸೆಗಣಿ ಹಿಡಿದುಕೊಂಡು ಬಂದು ಆರೋಪಿ ಪುಂಡಲೀಕನ ಬಾಯಿಯಲ್ಲಿ ಇಡಲು ಒತ್ತಾಯ ಮಾಡಿದ್ದು, ಹಾಗೂ ಗೆಳೆಯರಾದ ಹನಮಂತ ದ್ಯಾಮಪ್ಪ ಮಾದರ, ಗಣೇಶ್ ದುರಗಪ್ಪ ದೇವರಮನಿ ಎಂಬ ಮೂರು ಜನರ ಅಂಗಿ ಬಿಚ್ಚಿಸಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಜೀವ ಸಹಿತ ಸುಟ್ಟು ಬಿಡೋಣ ಎಂದಿದ್ದಲ್ಲದೇ ಲೈಟಿನ ಕಂಬಕ್ಕೆ ಕಟ್ಟಲು ಆರೋಪಿಗಳು ಮುಂದಾಗಿದ್ದರು ಎಂದು ಹೇಳಲಾಗಿದೆ. ನಂತರ ಊರು ಬಿಟ್ಟು ಹೋಗುವಂತೆ ಜೀವ ಬೆದರಿಕೆ ಕೂಡ ಹಾಕಲಾಗಿದೆಯಂತೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ರಾಜು ಸಿದ್ದಪ್ಪ ಬದಾಮಿ ಅಲಿಯಾಸ್ ಗಾಣಿಗೇರ, ಬಸವರಾಜ ಬದಾಮಿ, ಪ್ರವೀಣ್ ಮಲ್ಲಿಕಾರ್ಜುನ ಗುರಮ್ಮನವರ್, ಈರಪ್ಪ ಪತಂಗ, ಪ್ರಕಾಶ್ ಗಾಣಿಗೇರ, ಚಂದ್ರು ಮುದ್ದಪ್ಪ ಬದಾಮಿ ಎಂಬವರ ವಿರುದ್ಧ ವಿವಿಧ ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಇಡೀ ಪ್ರಕರಣ ನಡೆದಿದ್ದು ಯಾವ ಕಾರಣಕ್ಕಾಗಿ ಎಂಬುದು ಗೊತ್ತಾಗಿಲ್ಲ.

ಪ್ರತಿ ದೂರು ದಾಖಲು

ಫಿರ್ಯಾದಿ ನಿಂಗಪ್ಪ ಶಿವಲಿಂಗಪ್ಪ ಬದಾಮಿ ಮನೆಯಲ್ಲಿ ಇದ್ದಾಗ ಆರೋಪಿಗಳಾದ ಬಸಪ್ಪ ಭರಮಪ್ಪ ಮಾದರ, ಪುಂಡಲೀಕ ಬಸಪ್ಪ ಮಾದರ, ಶೇಕಪ್ಪ ಭರಮಪ್ಪ ಮಾದರ, ಹನಮಪ್ಪ ಶೇಖಪ್ಪ ಮಾದರ, ಭರಮಪ್ಪ ಶೇಖಪ್ಪ ಮಾದರ, ಗಣೇಶ್ ದುರಗಪ್ಪ ದೇವರಮನಿ ಎಂಬುವವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಎಸ್ ಸಿ ಕೇಸ್ ಹಾಕಿಸಿ ಎಲ್ಲರನ್ನೂ ಒಳಗ ಹಾಕಸ್ತೀವಿ ಅಂತ ಬೆದರಿಕೆ ಹಾಕಿದ್ದಲ್ಲದೆ ಕಲ್ಲು ಮತ್ತು ಬಡಿಗೆಗಳಿಂದ ಹೊಡೆಯಲು ಹೋದಾಗ, ಪುಂಡಲೀಕ ಮಾದರ ಎಂಬಾತ ಫಿರ್ಯಾದಿ ನಿಂಗಪ್ಪನಿಗೆ ಕೈಯಿಂದ ಗುದ್ದಿ, ನೂಕಾಡಿದಾಗ‌ ಬಿದ್ದು ಒಳಪೆಟ್ಟು ಆಗಿದ್ದು, ಇದೇ ಸಂದರ್ಭದಲ್ಲಿ ಶರಣಬಸಪ್ಪ ಬದಾಮಿ ಎಂಬುವರು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ಕಾಣಿಸಲಾಗಿದೆ.

IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
IND vs ENG: ಇಂಡಿಯಾ ವಿರುದ್ಧ ಇಂಗ್ಲೆಂಡ್ ಮೋಸದಾಟ... ಆದ್ರೂ ಗೆಲ್ಲಲಿಲ್ಲ..
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್