AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ; ಸಚಿವ ಬಿ ಶ್ರೀರಾಮುಲು ವಾಗ್ದಾಳಿ

ಹಾವುಗಾರನ ರೀತಿಯಲ್ಲಿ ಸಿದ್ದರಾಮಯ್ಯ ಮಾತಾನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಅಲೆ ಎದ್ದಿದೆೆ, ಬಿಜೆಪಿ ಕೊಚ್ಚಿ ಹೋಗುತ್ತದೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ; ಸಚಿವ ಬಿ ಶ್ರೀರಾಮುಲು ವಾಗ್ದಾಳಿ
ಸಿದ್ದರಾಮಯ್ಯ, ಶ್ರೀರಾಮುಲು
TV9 Web
| Edited By: |

Updated on:Nov 18, 2021 | 11:20 AM

Share

ಗದಗ: ಸಿದ್ದರಾಮಯ್ಯ (Siddaramaiah) ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ ಸಚಿವ ಬಿ ಶ್ರೀರಾಮುಲು (B Sreeramulu), ಸಿದ್ದರಾಮಯ್ಯ ಬೂಟಾಟಿಕೆ ಹೇಳಿಕೆ ನೀಡಲು ಶುರು ಮಾಡಿದ್ದಾರೆ ಎಂತ ವಾಗ್ದಾಳಿ ನಡೆಸಿದ್ದಾರೆ. ಅವರ ಪಕ್ಷದಲ್ಲೇ ಅವರನ್ನು ಸ್ವೀಕಾರ ಮಾಡಲು ಸಿದ್ಧರಿಲ್ಲ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿ ಪರ ಘೋಷಣೆ ಕೂಗಿದ್ದಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮದಿಂದ ನಿರ್ಗಮಿಸಿದ್ದಾರೆ ಅಂತ ಗದಗದಲ್ಲಿ ಸಾರಿಗೆ ಇಲಾಖೆ ಸಚಿವ ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.

ಹಾವುಗಾರನ ರೀತಿಯಲ್ಲಿ ಸಿದ್ದರಾಮಯ್ಯ ಮಾತಾನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಅಲೆ ಎದ್ದಿದೆೆ, ಬಿಜೆಪಿ ಕೊಚ್ಚಿ ಹೋಗುತ್ತದೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಅಲೆ, ಬಿರುಗಾಳಿ, ಸುನಾಮಿ ಎಲ್ಲ ಕಾಂಗ್ರೆಸ್​ಗೆ ಅನ್ವಯಿಸುತ್ತೆ. 2023ರ ಚುನಾವಣೆವರೆಗೆ ಕಾಯುವ ಅವಶ್ಯಕತೆ ಇಲ್ಲ. ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ಜನ ತಕ್ಕ ಪಾಠ ಕಲಿಸುತ್ತಾರೆ ಅಂತ ಶ್ರೀರಾಮುಲು ಹೇಳಿದರು.

ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ತನಿಖೆ ಬಗ್ಗೆ ಸಿಎಂ ಆದೇಶ ಮಾಡಿದ್ದಾರೆ. ರಾಜಕೀಯ ಕೆಸರೆರಚಾಟಕ್ಕೆ ಆರೋಪಿಸುವುದು ಸರಿಯಲ್ಲ. ಸಿದ್ದರಾಮಯ್ಯರಿಂದ ಸುಳ್ಳು ಹೇಳಿ ದಾರಿ ತಪ್ಪಿಸುವ ಕೆಲಸವಾಗುತ್ತಿದೆ. ಬಿಟ್ ಕಾಯಿನ್ ಕೇಸ್​ನ ದಾಖಲೆ ಇದ್ರೆ ಬಿಡುಗಡೆ ಮಾಡಲಿ. ಆರೋಪಿ ಪಾತಾಳಕ್ಕೆ ಹೋದರೂ ಕರೆತರುವ ಶಕ್ತಿ ಸರ್ಕಾರಕ್ಕಿದೆ. ಕಾಂಗ್ರೆಸ್ ಪಕ್ಷ ಸುಳ್ಳಿನ ಫ್ಯಾಕ್ಟರಿ. ಕಾಂಗ್ರೆಸ್ನಲ್ಲಿ ಹೊಂದಾಣಿಕೆ ಇಲ್ಲ, ಮೂರು ಬಾಗಿಲಾಗಿದೆ. ಕಾಂಗ್ರೆಸ್​ನವರು ಮೊದಲು ತಮ್ಮ ಮನೆ ಸರಿಮಾಡಿಕೊಳ್ಳಲಿ ಅಂತ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮುಂದುವರಿದು ಮಾತನಾಡಿದ ಶ್ರೀರಾಮುಲು, ಪಾರ್ಟ್ ಟೈಂ ಲೀಡರ್ ರೀತಿ ಸೋನಿಯಾ, ರಾಹುಲ್ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಆಲ್ ಟೈಂ ನಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಸುಳ್ಳು ಹೇಳುವ ಕಾಂಗ್ರೆಸ್ 2023ರವರೆಗೂ ಕಾಯಬೇಕಿಲ್ಲ. ಈ ಚುನಾವಣೆಯಲ್ಲೇ ಕಾಂಗ್ರೆಸ್ ಕೊಚ್ಚಿಕೊಂಡು ಹೋಗುತ್ತೆ ಅಂತ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

ಸರ್ಕಾರವನ್ನು ಟೀಕಿಸುವವರು ಮತ್ತು ಹೋರಾಟಗಾರರ ಟ್ವಿಟರ್ ಖಾತೆ ಮೇಲೆ ತ್ರಿಪುರಾ ಪೊಲೀಸ್ ನಿಗಾ

ಬೆಳ್ಳಿಗಜ್ಜೆಗಾಗಿ ಮಹಿಳೆಯರ ಪಾದವನ್ನೇ ಕತ್ತರಿಸಿ, ಹತ್ಯೆ ಮಾಡುವ ಸೈಕೋಗಾಗಿ ಹುಡುಕಾಟ; ಎರಡನೇ ಘಟನೆಯ ಬೆನ್ನಲ್ಲೇ ಚುರುಕಾದ ಪೊಲೀಸರು

Published On - 11:19 am, Thu, 18 November 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ