AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳ ದರ್ಪ; ಬ್ಯಾಂಕ್​ಗೆ ಕರೆತಂದು ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದಲ್ಲಿ ಬಸವರಾಜ್ ನಿಟ್ಟಾಲಿ ಎಂಬ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು ದರ್ಪ ತೋರಿದ್ದಾರೆ ಎನ್ನಲಾಗುತ್ತಿದೆ. ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಎತ್ತಾಕಿಕೊಂಡು ಹೋಗಿ ಬ್ಯಾಂಕ್​ನಲ್ಲಿ ಕಿರುಕುಳ ನೀಡಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ.

ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳ ದರ್ಪ; ಬ್ಯಾಂಕ್​ಗೆ ಕರೆತಂದು ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡರು
ರೈತ ಬಸವರಾಜ್ ನಿಟ್ಟಾಲಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಆಯೇಷಾ ಬಾನು|

Updated on:Oct 29, 2023 | 9:18 AM

Share

ಗದಗ, ಅ.29: ರಾಜ್ಯದಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ ಬರ ಆವರಿಸಿದೆ (Karnataka Rains). ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಇದರ ನಡುವೆ ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು (Bank Officers) ಗೂಂಡಾವರ್ತನೆ ತೋರಿದ್ದಾರೆ. ಸಾಲ ಮರುಪಾವತಿ‌ ಮಾಡುವಂತೆ ರೈತನನ್ನೆ (Farmer) ಬ್ಯಾಂಕಿಗೆ ಕರೆತಂದು‌ ದಬ್ಬಾಳಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಅಧಿಕಾರಿಗಳ ಅಟ್ಟಹಾಸಕ್ಕೆ ಅನ್ನದಾತ ಕಂಗಾಲಾಗಿದ್ದಾನೆ.

ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದಲ್ಲಿ ಬಸವರಾಜ್ ನಿಟ್ಟಾಲಿ ಎಂಬ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು ದರ್ಪ ತೋರಿದ್ದಾರೆ ಎನ್ನಲಾಗುತ್ತಿದೆ. ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಎತ್ತಾಕಿಕೊಂಡು ಹೋಗಿ ಬ್ಯಾಂಕ್​ನಲ್ಲಿ ಕಿರುಕುಳ ನೀಡಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ. ಬಸವರಾಜ್ ನಿಟ್ಟಾಲಿ ಅವರು ಬ್ಯಾಂಕಿನಲ್ಲಿ 1.70 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರು ಪಾವತಿ ಮಾಡುವಂತೆ ಮನೆಯಿಂದ ಒತ್ತಾಯಪೂರ್ವಕವಾಗಿ ಬ್ಯಾಂಕಿಗೆ ಕರೆತಂದು 2.20 ಲಕ್ಷ ರೂ ಸಾಲಕ್ಕೆ ಒತ್ತಾಯ ಪೂರ್ವಕವಾಗಿ ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ. ಮಳೆ ಇಲ್ಲ, ಬೆಳೆ‌ ಒಣಗಿದೆ. ಈಗ ಸಾಲ ಪಾವತಿ ಆಗಲ್ಲ ಅಂತ ಬೇಡಿಕೊಂಡ್ರು ಕರುಣೆ ತೋರದೆ ಮನೆಯಿಂದ ಕರೆದುಕೊಂಡು ಬಂದು ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಬ್ಯಾಂಕ್ ಅಧಿಕಾರಿಗಳ ನಡೆಗೆ ರೈತ ರೊಚ್ಚಿಗೆದ್ದಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಿನ್ನೆ ಶನಿವಾರ ಬ್ಯಾಂಕ್ ರಜೆ ಇದ್ರೂ ರೈತನನ್ನು ಬ್ಯಾಂಕ್​ಗೆ ಕರೆ ತಂದು ಹಿಂಸೆ ನೀಡಿದ್ದಾರೆ. ಭೀಕರ ಬರದಲ್ಲಿ ಸಾಲ ವಸೂಲಿಗೆ ಸರ್ಕಾರ ಬ್ರೇಕ್ ಹಾಕಿದ್ರೂ ರೈತರ ಮೇಲೆ ಅಧಿಕಾರಿಗಳ ದರ್ಪ ನಡೆಯುತ್ತಿದೆ. ಕೆನರಾ ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ರೈತ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಬರ ಅಧ್ಯಯನ ನಡೆಸಲು ಬಿಜೆಪಿ ತಯಾರಿ: 16 ನಾಯಕರ ನೇತೃತ್ವದಲ್ಲಿ ತಂಡಗಳ ರಚನೆ 

ಗದಗ ಜಿಲ್ಲೆಯಲ್ಲಿ 258 ಕೋಟಿಯಷ್ಟು ಬೆಳೆ ಹಾನಿ

ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಜಿಲ್ಲೆಯಲ್ಲಿ 1.88 ಹೆಕ್ಟೇರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಒಣ ಬೇಸಾಯ, ತೋಟಗಾರಿಕೆ ಬೆಳೆ ಸೇರಿ 258 ಕೋಟಿ ಬೆಳೆಹಾನಿಯಾಗಿದೆ. ಹೆಸರು, ಶೇಂಗಾ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ, ಈರುಳ್ಳಿ ಸೇರಿ ಹಲವು ಬೆಳೆಗಳನ್ನ ರೈತರು ಕಳೆದುಕೊಂಡಿದ್ದಾರೆ. ಜಾನುವಾರುಗಳಿಗೆ ಮೇವು ಹೇಗಪ್ಪ ಅನ್ನೋ ಚಿಂತೆ ಕಾಡ್ತಿದೆ.

ಗದಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Sun, 29 October 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​