Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳ ದರ್ಪ; ಬ್ಯಾಂಕ್​ಗೆ ಕರೆತಂದು ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದಲ್ಲಿ ಬಸವರಾಜ್ ನಿಟ್ಟಾಲಿ ಎಂಬ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು ದರ್ಪ ತೋರಿದ್ದಾರೆ ಎನ್ನಲಾಗುತ್ತಿದೆ. ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಎತ್ತಾಕಿಕೊಂಡು ಹೋಗಿ ಬ್ಯಾಂಕ್​ನಲ್ಲಿ ಕಿರುಕುಳ ನೀಡಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ.

ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳ ದರ್ಪ; ಬ್ಯಾಂಕ್​ಗೆ ಕರೆತಂದು ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡರು
ರೈತ ಬಸವರಾಜ್ ನಿಟ್ಟಾಲಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಆಯೇಷಾ ಬಾನು

Updated on:Oct 29, 2023 | 9:18 AM

ಗದಗ, ಅ.29: ರಾಜ್ಯದಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ ಬರ ಆವರಿಸಿದೆ (Karnataka Rains). ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಇದರ ನಡುವೆ ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು (Bank Officers) ಗೂಂಡಾವರ್ತನೆ ತೋರಿದ್ದಾರೆ. ಸಾಲ ಮರುಪಾವತಿ‌ ಮಾಡುವಂತೆ ರೈತನನ್ನೆ (Farmer) ಬ್ಯಾಂಕಿಗೆ ಕರೆತಂದು‌ ದಬ್ಬಾಳಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಅಧಿಕಾರಿಗಳ ಅಟ್ಟಹಾಸಕ್ಕೆ ಅನ್ನದಾತ ಕಂಗಾಲಾಗಿದ್ದಾನೆ.

ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದಲ್ಲಿ ಬಸವರಾಜ್ ನಿಟ್ಟಾಲಿ ಎಂಬ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು ದರ್ಪ ತೋರಿದ್ದಾರೆ ಎನ್ನಲಾಗುತ್ತಿದೆ. ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಎತ್ತಾಕಿಕೊಂಡು ಹೋಗಿ ಬ್ಯಾಂಕ್​ನಲ್ಲಿ ಕಿರುಕುಳ ನೀಡಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ. ಬಸವರಾಜ್ ನಿಟ್ಟಾಲಿ ಅವರು ಬ್ಯಾಂಕಿನಲ್ಲಿ 1.70 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರು ಪಾವತಿ ಮಾಡುವಂತೆ ಮನೆಯಿಂದ ಒತ್ತಾಯಪೂರ್ವಕವಾಗಿ ಬ್ಯಾಂಕಿಗೆ ಕರೆತಂದು 2.20 ಲಕ್ಷ ರೂ ಸಾಲಕ್ಕೆ ಒತ್ತಾಯ ಪೂರ್ವಕವಾಗಿ ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ. ಮಳೆ ಇಲ್ಲ, ಬೆಳೆ‌ ಒಣಗಿದೆ. ಈಗ ಸಾಲ ಪಾವತಿ ಆಗಲ್ಲ ಅಂತ ಬೇಡಿಕೊಂಡ್ರು ಕರುಣೆ ತೋರದೆ ಮನೆಯಿಂದ ಕರೆದುಕೊಂಡು ಬಂದು ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಬ್ಯಾಂಕ್ ಅಧಿಕಾರಿಗಳ ನಡೆಗೆ ರೈತ ರೊಚ್ಚಿಗೆದ್ದಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಿನ್ನೆ ಶನಿವಾರ ಬ್ಯಾಂಕ್ ರಜೆ ಇದ್ರೂ ರೈತನನ್ನು ಬ್ಯಾಂಕ್​ಗೆ ಕರೆ ತಂದು ಹಿಂಸೆ ನೀಡಿದ್ದಾರೆ. ಭೀಕರ ಬರದಲ್ಲಿ ಸಾಲ ವಸೂಲಿಗೆ ಸರ್ಕಾರ ಬ್ರೇಕ್ ಹಾಕಿದ್ರೂ ರೈತರ ಮೇಲೆ ಅಧಿಕಾರಿಗಳ ದರ್ಪ ನಡೆಯುತ್ತಿದೆ. ಕೆನರಾ ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ರೈತ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಬರ ಅಧ್ಯಯನ ನಡೆಸಲು ಬಿಜೆಪಿ ತಯಾರಿ: 16 ನಾಯಕರ ನೇತೃತ್ವದಲ್ಲಿ ತಂಡಗಳ ರಚನೆ 

ಗದಗ ಜಿಲ್ಲೆಯಲ್ಲಿ 258 ಕೋಟಿಯಷ್ಟು ಬೆಳೆ ಹಾನಿ

ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಜಿಲ್ಲೆಯಲ್ಲಿ 1.88 ಹೆಕ್ಟೇರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಒಣ ಬೇಸಾಯ, ತೋಟಗಾರಿಕೆ ಬೆಳೆ ಸೇರಿ 258 ಕೋಟಿ ಬೆಳೆಹಾನಿಯಾಗಿದೆ. ಹೆಸರು, ಶೇಂಗಾ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ, ಈರುಳ್ಳಿ ಸೇರಿ ಹಲವು ಬೆಳೆಗಳನ್ನ ರೈತರು ಕಳೆದುಕೊಂಡಿದ್ದಾರೆ. ಜಾನುವಾರುಗಳಿಗೆ ಮೇವು ಹೇಗಪ್ಪ ಅನ್ನೋ ಚಿಂತೆ ಕಾಡ್ತಿದೆ.

ಗದಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Sun, 29 October 23

ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್