ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳ ದರ್ಪ; ಬ್ಯಾಂಕ್​ಗೆ ಕರೆತಂದು ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದಲ್ಲಿ ಬಸವರಾಜ್ ನಿಟ್ಟಾಲಿ ಎಂಬ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು ದರ್ಪ ತೋರಿದ್ದಾರೆ ಎನ್ನಲಾಗುತ್ತಿದೆ. ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಎತ್ತಾಕಿಕೊಂಡು ಹೋಗಿ ಬ್ಯಾಂಕ್​ನಲ್ಲಿ ಕಿರುಕುಳ ನೀಡಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ.

ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳ ದರ್ಪ; ಬ್ಯಾಂಕ್​ಗೆ ಕರೆತಂದು ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡರು
ರೈತ ಬಸವರಾಜ್ ನಿಟ್ಟಾಲಿ
Edited By: ಆಯೇಷಾ ಬಾನು

Updated on: Oct 29, 2023 | 9:18 AM

ಗದಗ, ಅ.29: ರಾಜ್ಯದಲ್ಲಿ ಮಳೆ ಕೈ ಕೊಟ್ಟ ಹಿನ್ನೆಲೆ ಬರ ಆವರಿಸಿದೆ (Karnataka Rains). ರೈತರು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಇದರ ನಡುವೆ ಭೀಕರ ಬರಕ್ಕೆ ತತ್ತರಿಸಿದ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು (Bank Officers) ಗೂಂಡಾವರ್ತನೆ ತೋರಿದ್ದಾರೆ. ಸಾಲ ಮರುಪಾವತಿ‌ ಮಾಡುವಂತೆ ರೈತನನ್ನೆ (Farmer) ಬ್ಯಾಂಕಿಗೆ ಕರೆತಂದು‌ ದಬ್ಬಾಳಿಕೆ ಮಾಡಿರುವ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಅಧಿಕಾರಿಗಳ ಅಟ್ಟಹಾಸಕ್ಕೆ ಅನ್ನದಾತ ಕಂಗಾಲಾಗಿದ್ದಾನೆ.

ಹೌದು ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಕಕ್ಕೂರ ಗ್ರಾಮದಲ್ಲಿ ಬಸವರಾಜ್ ನಿಟ್ಟಾಲಿ ಎಂಬ ರೈತನ ಮೇಲೆ ಬ್ಯಾಂಕ್ ಅಧಿಕಾರಿಗಳು ದರ್ಪ ತೋರಿದ್ದಾರೆ ಎನ್ನಲಾಗುತ್ತಿದೆ. ಪದೇ ಪದೇ ನೋಟಿಸ್ ನೀಡಿ ಕಿರುಕುಳ ನೀಡುತ್ತಿದ್ದಾರೆ. ತನ್ನನ್ನು ಎತ್ತಾಕಿಕೊಂಡು ಹೋಗಿ ಬ್ಯಾಂಕ್​ನಲ್ಲಿ ಕಿರುಕುಳ ನೀಡಿದ್ದಾರೆ ಎಂದು ರೈತ ಅಳಲು ತೋಡಿಕೊಂಡಿದ್ದಾರೆ. ಬಸವರಾಜ್ ನಿಟ್ಟಾಲಿ ಅವರು ಬ್ಯಾಂಕಿನಲ್ಲಿ 1.70 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ಮರು ಪಾವತಿ ಮಾಡುವಂತೆ ಮನೆಯಿಂದ ಒತ್ತಾಯಪೂರ್ವಕವಾಗಿ ಬ್ಯಾಂಕಿಗೆ ಕರೆತಂದು 2.20 ಲಕ್ಷ ರೂ ಸಾಲಕ್ಕೆ ಒತ್ತಾಯ ಪೂರ್ವಕವಾಗಿ ಸಾಲದ ಪತ್ರಕ್ಕೆ ಹೆಬ್ಬಟ್ಟು ಒತ್ತಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ. ಮಳೆ ಇಲ್ಲ, ಬೆಳೆ‌ ಒಣಗಿದೆ. ಈಗ ಸಾಲ ಪಾವತಿ ಆಗಲ್ಲ ಅಂತ ಬೇಡಿಕೊಂಡ್ರು ಕರುಣೆ ತೋರದೆ ಮನೆಯಿಂದ ಕರೆದುಕೊಂಡು ಬಂದು ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಬ್ಯಾಂಕ್ ಅಧಿಕಾರಿಗಳ ನಡೆಗೆ ರೈತ ರೊಚ್ಚಿಗೆದ್ದಿದ್ದಾರೆ. ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಿನ್ನೆ ಶನಿವಾರ ಬ್ಯಾಂಕ್ ರಜೆ ಇದ್ರೂ ರೈತನನ್ನು ಬ್ಯಾಂಕ್​ಗೆ ಕರೆ ತಂದು ಹಿಂಸೆ ನೀಡಿದ್ದಾರೆ. ಭೀಕರ ಬರದಲ್ಲಿ ಸಾಲ ವಸೂಲಿಗೆ ಸರ್ಕಾರ ಬ್ರೇಕ್ ಹಾಕಿದ್ರೂ ರೈತರ ಮೇಲೆ ಅಧಿಕಾರಿಗಳ ದರ್ಪ ನಡೆಯುತ್ತಿದೆ. ಕೆನರಾ ಬ್ಯಾಂಕ್ ಅಧಿಕಾರಿಗಳ ವರ್ತನೆಗೆ ರೈತ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ಬರ ಅಧ್ಯಯನ ನಡೆಸಲು ಬಿಜೆಪಿ ತಯಾರಿ: 16 ನಾಯಕರ ನೇತೃತ್ವದಲ್ಲಿ ತಂಡಗಳ ರಚನೆ 

ಗದಗ ಜಿಲ್ಲೆಯಲ್ಲಿ 258 ಕೋಟಿಯಷ್ಟು ಬೆಳೆ ಹಾನಿ

ಬರ ಗದಗ ಜಿಲ್ಲೆಯ ರೈತರ ಜೀವ ಹಿಂಡುತ್ತಿದೆ. ಜಿಲ್ಲೆಯಲ್ಲಿ 1.88 ಹೆಕ್ಟೇರ್ ಬೆಳೆ ಸಂಪೂರ್ಣ ಹಾನಿಯಾಗಿದೆ. ಒಣ ಬೇಸಾಯ, ತೋಟಗಾರಿಕೆ ಬೆಳೆ ಸೇರಿ 258 ಕೋಟಿ ಬೆಳೆಹಾನಿಯಾಗಿದೆ. ಹೆಸರು, ಶೇಂಗಾ, ಜೋಳ, ಸೂರ್ಯಕಾಂತಿ, ಮೆಣಸಿನಕಾಯಿ, ಈರುಳ್ಳಿ ಸೇರಿ ಹಲವು ಬೆಳೆಗಳನ್ನ ರೈತರು ಕಳೆದುಕೊಂಡಿದ್ದಾರೆ. ಜಾನುವಾರುಗಳಿಗೆ ಮೇವು ಹೇಗಪ್ಪ ಅನ್ನೋ ಚಿಂತೆ ಕಾಡ್ತಿದೆ.

ಗದಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:15 am, Sun, 29 October 23

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us