AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ನಿರಂತರ ಮಳೆಗೆ ಗದಗ ಜಿಲ್ಲೆಯ ಜನರು ತತ್ತರಿಸುತ್ತಿದ್ದಾರೆ. ಕೆಲವರ ಮನೆಗಳು ಸೋರಲಾರಂಭಿವಿವೆ. ಅದರಂತೆ ಬಾಣಂತಿಯೊಬ್ಬರು, ಆಶ್ರಯ ಪಡೆಯಲು ಗಂಡನ ಮನೆ ಬಿಟ್ಟು ತವರು ಮನೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನೂರಾರು ಮನೆಗಳು ಮಳೆಗೆ ಸೋರುತ್ತಿವೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 27, 2023 | 8:36 PM

Share

ಗದಗ, ಜುಲೈ 27: ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಕಂಗಾಲಾಗಿದ್ದಾರೆ. ಲಕ್ಕುಂಡಿ ಗ್ರಾಮದಲ್ಲಿ ನೂರಾರು ಮನೆಗಳು ಸೋರುತ್ತಿದೆ. ಈ ಪೈಕಿ ಮನೆಯೊಂದರ ಬಾಣಂತಿ, ಗಂಡನ ಮನೆ ಸೋರುತ್ತಿದ್ದ ಹಿನ್ನೆಲೆ ದೇವಸ್ಥಾನದಲ್ಲಿ ಎರಡು ದಿನ ಆಶ್ರಯ ಪಡೆದು ಇದೀಗ ತವರು ಮನೆಗೆ ತೆರಳಿದ್ದಾರೆ.

ನಿರಂತರ ಮಳೆಗೆ ಲಕ್ಕುಂಡಿ ಗ್ರಾಮದಲ್ಲಿ ಹತ್ತಾರು ಮನೆಗಳು ಸೋರುತ್ತಿದ್ದು, ಬಾಣಂತಿ ಪವಿತ್ರಾ ಅವರ ಗಂಡನ ಮನೆಯೂ ಇದರಲ್ಲಿ ಒಂದಾಗಿದೆ. ಮನೆ ಜರಿಯುವ ಆತಂಕ ಪವಿತ್ರಾಳ ಕುಟುಂಬಸ್ಥರನ್ನು ಕಾಡುತ್ತಿದೆ. ಹೀಗಾಗಿ ಮಳೆ ಕಡಿಮೆಯಾಗುವ ವರೆಗೆ ತವರು ಮನೆಯಲ್ಲೇ ಆಶ್ರಯ ಪಡೆಯುವುದಾಗಿ ಪವಿತ್ರಾ ಹೇಳಿದ್ದಾರೆ. ಇತ್ತ, ಈಕೆಯ ಪತಿ ದೇವಸ್ಥಾನದಲ್ಲಿ ವಾಸ್ತವ್ಯ ಹೂಡುವಂತಾಗಿದೆ.

ಇದನ್ನೂ ಓದಿ: Uttara Kannada:ಅಬ್ಬರದ ಮಳೆಗೆ ಸಂಪರ್ಕ ಕಡಿತ, ಹೃದಯಾಘಾತವಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸಪಟ್ಟ ಕುಟುಂಬಸ್ಥರು

ಲಕ್ಕುಂಡಿ ಗ್ರಾಮದ ಅನೇಕ ಕುಟುಂಬಗಳು ಮನೆಗಳು ಸೋರುತ್ತಿರುವ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಲ್ಲಿ ಅಡುಗೆ ಮಾಡಲು ಕೂಡಲು ಕಷ್ಟಸಾಧ್ಯವಾಗುತ್ತಿದೆ. ಹಲವರ ಮನೆಗಳ ಮೇಲ್ಛಾವಣಿಗೆ ಪ್ಲಾಸ್ಟಿಕ್​ ಹಾಳೆಗಳನ್ನು ಹಾಕಲಾಗಿದೆ. ಆದರೂ ಮನೆಗಳು ಸೋರುತ್ತಿವೆ. ಇಂತಹ ಪರಿಸ್ಥಿತಿ ಎದುರಿಸುತ್ತಿದ್ದರೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿಲ್ಲ. ಇನ್ನಾದರೂ ನೆರವಿಗೆ ದಾವಿಸಂತೆ ಗ್ರಾಮಸ್ಥ ವೀರುಪಾಕ್ಷ ಮನವಿ ಮಾಡಿದ್ದಾರೆ. ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗೆ ಕಾಳಜಿ ಕೇಂದ್ರ ತೆರೆಯುವ ಮೂಲಕ ಜಿಲ್ಲಾಡಳಿತ ಮಾನವೀಯತೆ ತೋರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!