AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ನಿರಂತರ ಮಳೆಗೆ ಗದಗ ಜಿಲ್ಲೆಯ ಜನರು ತತ್ತರಿಸುತ್ತಿದ್ದಾರೆ. ಕೆಲವರ ಮನೆಗಳು ಸೋರಲಾರಂಭಿವಿವೆ. ಅದರಂತೆ ಬಾಣಂತಿಯೊಬ್ಬರು, ಆಶ್ರಯ ಪಡೆಯಲು ಗಂಡನ ಮನೆ ಬಿಟ್ಟು ತವರು ಮನೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನೂರಾರು ಮನೆಗಳು ಮಳೆಗೆ ಸೋರುತ್ತಿವೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on: Jul 27, 2023 | 8:36 PM

Share

ಗದಗ, ಜುಲೈ 27: ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಕಂಗಾಲಾಗಿದ್ದಾರೆ. ಲಕ್ಕುಂಡಿ ಗ್ರಾಮದಲ್ಲಿ ನೂರಾರು ಮನೆಗಳು ಸೋರುತ್ತಿದೆ. ಈ ಪೈಕಿ ಮನೆಯೊಂದರ ಬಾಣಂತಿ, ಗಂಡನ ಮನೆ ಸೋರುತ್ತಿದ್ದ ಹಿನ್ನೆಲೆ ದೇವಸ್ಥಾನದಲ್ಲಿ ಎರಡು ದಿನ ಆಶ್ರಯ ಪಡೆದು ಇದೀಗ ತವರು ಮನೆಗೆ ತೆರಳಿದ್ದಾರೆ.

ನಿರಂತರ ಮಳೆಗೆ ಲಕ್ಕುಂಡಿ ಗ್ರಾಮದಲ್ಲಿ ಹತ್ತಾರು ಮನೆಗಳು ಸೋರುತ್ತಿದ್ದು, ಬಾಣಂತಿ ಪವಿತ್ರಾ ಅವರ ಗಂಡನ ಮನೆಯೂ ಇದರಲ್ಲಿ ಒಂದಾಗಿದೆ. ಮನೆ ಜರಿಯುವ ಆತಂಕ ಪವಿತ್ರಾಳ ಕುಟುಂಬಸ್ಥರನ್ನು ಕಾಡುತ್ತಿದೆ. ಹೀಗಾಗಿ ಮಳೆ ಕಡಿಮೆಯಾಗುವ ವರೆಗೆ ತವರು ಮನೆಯಲ್ಲೇ ಆಶ್ರಯ ಪಡೆಯುವುದಾಗಿ ಪವಿತ್ರಾ ಹೇಳಿದ್ದಾರೆ. ಇತ್ತ, ಈಕೆಯ ಪತಿ ದೇವಸ್ಥಾನದಲ್ಲಿ ವಾಸ್ತವ್ಯ ಹೂಡುವಂತಾಗಿದೆ.

ಇದನ್ನೂ ಓದಿ: Uttara Kannada:ಅಬ್ಬರದ ಮಳೆಗೆ ಸಂಪರ್ಕ ಕಡಿತ, ಹೃದಯಾಘಾತವಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸಪಟ್ಟ ಕುಟುಂಬಸ್ಥರು

ಲಕ್ಕುಂಡಿ ಗ್ರಾಮದ ಅನೇಕ ಕುಟುಂಬಗಳು ಮನೆಗಳು ಸೋರುತ್ತಿರುವ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಲ್ಲಿ ಅಡುಗೆ ಮಾಡಲು ಕೂಡಲು ಕಷ್ಟಸಾಧ್ಯವಾಗುತ್ತಿದೆ. ಹಲವರ ಮನೆಗಳ ಮೇಲ್ಛಾವಣಿಗೆ ಪ್ಲಾಸ್ಟಿಕ್​ ಹಾಳೆಗಳನ್ನು ಹಾಕಲಾಗಿದೆ. ಆದರೂ ಮನೆಗಳು ಸೋರುತ್ತಿವೆ. ಇಂತಹ ಪರಿಸ್ಥಿತಿ ಎದುರಿಸುತ್ತಿದ್ದರೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿಲ್ಲ. ಇನ್ನಾದರೂ ನೆರವಿಗೆ ದಾವಿಸಂತೆ ಗ್ರಾಮಸ್ಥ ವೀರುಪಾಕ್ಷ ಮನವಿ ಮಾಡಿದ್ದಾರೆ. ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗೆ ಕಾಳಜಿ ಕೇಂದ್ರ ತೆರೆಯುವ ಮೂಲಕ ಜಿಲ್ಲಾಡಳಿತ ಮಾನವೀಯತೆ ತೋರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ