ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ

ನಿರಂತರ ಮಳೆಗೆ ಗದಗ ಜಿಲ್ಲೆಯ ಜನರು ತತ್ತರಿಸುತ್ತಿದ್ದಾರೆ. ಕೆಲವರ ಮನೆಗಳು ಸೋರಲಾರಂಭಿವಿವೆ. ಅದರಂತೆ ಬಾಣಂತಿಯೊಬ್ಬರು, ಆಶ್ರಯ ಪಡೆಯಲು ಗಂಡನ ಮನೆ ಬಿಟ್ಟು ತವರು ಮನೆಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ಲಕ್ಕುಂಡಿ ಗ್ರಾಮದಲ್ಲಿ ಮಳೆಗೆ ಸೋರುತ್ತಿರುವ ಮನೆಗಳು; ತವರಿಗೆ ಹೋದ ಬಾಣಂತಿ, ದೇವಸ್ಥಾನದಲ್ಲಿ ಪತಿ ವಾಸ್ತವ್ಯ
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ನೂರಾರು ಮನೆಗಳು ಮಳೆಗೆ ಸೋರುತ್ತಿವೆ
Edited By: Rakesh Nayak Manchi

Updated on: Jul 27, 2023 | 8:36 PM

ಗದಗ, ಜುಲೈ 27: ಜಿಲ್ಲೆಯಲ್ಲಿ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಗ್ರಾಮೀಣ ಭಾಗದ ಜನರು ಕಂಗಾಲಾಗಿದ್ದಾರೆ. ಲಕ್ಕುಂಡಿ ಗ್ರಾಮದಲ್ಲಿ ನೂರಾರು ಮನೆಗಳು ಸೋರುತ್ತಿದೆ. ಈ ಪೈಕಿ ಮನೆಯೊಂದರ ಬಾಣಂತಿ, ಗಂಡನ ಮನೆ ಸೋರುತ್ತಿದ್ದ ಹಿನ್ನೆಲೆ ದೇವಸ್ಥಾನದಲ್ಲಿ ಎರಡು ದಿನ ಆಶ್ರಯ ಪಡೆದು ಇದೀಗ ತವರು ಮನೆಗೆ ತೆರಳಿದ್ದಾರೆ.

ನಿರಂತರ ಮಳೆಗೆ ಲಕ್ಕುಂಡಿ ಗ್ರಾಮದಲ್ಲಿ ಹತ್ತಾರು ಮನೆಗಳು ಸೋರುತ್ತಿದ್ದು, ಬಾಣಂತಿ ಪವಿತ್ರಾ ಅವರ ಗಂಡನ ಮನೆಯೂ ಇದರಲ್ಲಿ ಒಂದಾಗಿದೆ. ಮನೆ ಜರಿಯುವ ಆತಂಕ ಪವಿತ್ರಾಳ ಕುಟುಂಬಸ್ಥರನ್ನು ಕಾಡುತ್ತಿದೆ. ಹೀಗಾಗಿ ಮಳೆ ಕಡಿಮೆಯಾಗುವ ವರೆಗೆ ತವರು ಮನೆಯಲ್ಲೇ ಆಶ್ರಯ ಪಡೆಯುವುದಾಗಿ ಪವಿತ್ರಾ ಹೇಳಿದ್ದಾರೆ. ಇತ್ತ, ಈಕೆಯ ಪತಿ ದೇವಸ್ಥಾನದಲ್ಲಿ ವಾಸ್ತವ್ಯ ಹೂಡುವಂತಾಗಿದೆ.

ಇದನ್ನೂ ಓದಿ: Uttara Kannada:ಅಬ್ಬರದ ಮಳೆಗೆ ಸಂಪರ್ಕ ಕಡಿತ, ಹೃದಯಾಘಾತವಾದ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಹರಸಾಹಸಪಟ್ಟ ಕುಟುಂಬಸ್ಥರು

ಲಕ್ಕುಂಡಿ ಗ್ರಾಮದ ಅನೇಕ ಕುಟುಂಬಗಳು ಮನೆಗಳು ಸೋರುತ್ತಿರುವ ಸಮಸ್ಯೆ ಎದುರಿಸುತ್ತಿದ್ದಾರೆ. ಮನೆಗಳಲ್ಲಿ ಅಡುಗೆ ಮಾಡಲು ಕೂಡಲು ಕಷ್ಟಸಾಧ್ಯವಾಗುತ್ತಿದೆ. ಹಲವರ ಮನೆಗಳ ಮೇಲ್ಛಾವಣಿಗೆ ಪ್ಲಾಸ್ಟಿಕ್​ ಹಾಳೆಗಳನ್ನು ಹಾಕಲಾಗಿದೆ. ಆದರೂ ಮನೆಗಳು ಸೋರುತ್ತಿವೆ. ಇಂತಹ ಪರಿಸ್ಥಿತಿ ಎದುರಿಸುತ್ತಿದ್ದರೂ ಜಿಲ್ಲಾಡಳಿತವು ಸ್ಥಳಕ್ಕೆ ಆಗಮಿಸಿಲ್ಲ. ಇನ್ನಾದರೂ ನೆರವಿಗೆ ದಾವಿಸಂತೆ ಗ್ರಾಮಸ್ಥ ವೀರುಪಾಕ್ಷ ಮನವಿ ಮಾಡಿದ್ದಾರೆ. ಸಮಸ್ಯೆ ಎದುರಿಸುತ್ತಿರುವ ಕುಟುಂಬಗಳಿಗೆ ಕಾಳಜಿ ಕೇಂದ್ರ ತೆರೆಯುವ ಮೂಲಕ ಜಿಲ್ಲಾಡಳಿತ ಮಾನವೀಯತೆ ತೋರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Follow Us