Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲವಾದಿ ಸಮಾಜದಿಂದ ಹಕ್ಕೊತ್ತಾಯ: ಸಮಾಜದ ಅಭಿವೃದ್ಧಿಗೆ ಅನುದಾನ, 5 ಎಕರೆ ಜಮೀನಿಗಾಗಿ ಬೇಡಿಕೆ

ಚಲವಾದಿ ಸಮಾಜ ಸುಮಾರು 25 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಹೀಗಾಗಿ ಸರಕಾರ ನಮ್ಮ ಸಮಾಜದ ಸಹಾಯಕ್ಕೆ ಬರಬೇಕು. ಜಿಲ್ಲೆಯಲ್ಲಿ ಸಮಾಜದ ಅಭಿವೃದ್ಧಿಗಾಗಿ ಐದು ಕೋಟಿ ರೂ. ಅನುದಾನ ಹಾಗೂ ಐದು ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಚಲವಾದಿ ಸಮಾಜದಿಂದ ಸಚಿವರಿಗೆ ಹಕ್ಕೊತ್ತಾಯ ಮಾಡಲಾಗಿದೆ.

ಚಲವಾದಿ ಸಮಾಜದಿಂದ ಹಕ್ಕೊತ್ತಾಯ: ಸಮಾಜದ ಅಭಿವೃದ್ಧಿಗೆ ಅನುದಾನ, 5 ಎಕರೆ ಜಮೀನಿಗಾಗಿ ಬೇಡಿಕೆ
ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮೀಜಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Sep 03, 2023 | 7:52 PM

ಗದಗ, ಸೆಪ್ಟೆಂಬರ್​ 3: ಜಿಲ್ಲೆಯಲ್ಲಿ ಚಲವಾದಿ ಸಮಾಜ (Chalavadi Samaja) ಸುಮಾರು 25 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಶಿಕ್ಷಣದಲ್ಲಿ ಸರಕಾರಿ ನೌಕರಿಯಲ್ಲಿ ಹಾಗೂ ಆರ್ಥಿಕವಾಗಿ ಬಹಳ ಹಿಂದುಳಿದಿದ್ದೇವೆ. ಹೀಗಾಗಿ ಸರಕಾರ ನಮ್ಮ ಸಮಾಜದ ಸಹಾಯಕ್ಕೆ ಬರಬೇಕು. ಜಿಲ್ಲೆಯಲ್ಲಿ ಸಮಾಜದ ಅಭಿವೃದ್ಧಿಗಾಗಿ ಐದು ಕೋಟಿ ರೂ. ಅನುದಾನ ಹಾಗೂ ಐದು ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಚಲವಾದಿ ಸಮಾಜದಿಂದ ಸಚಿವರಿಗೆ ಹಕ್ಕೊತ್ತಾಯ ಮಾಡಲಾಗಿದೆ. ನಗರದ ಹೊರವಲಯದಲ್ಲಿನ ಪಂಡಿತ ಭೀಮಸೇನ ಜೋಷಿ ರಂಗಮಂದಿರದಲ್ಲಿ ಗದಗ ಜಿಲ್ಲಾ ಚಲವಾದಿ ಸಮಾಜದ ಚಿಂತನಾ ಸಮಾವೇಶ ನಡೆಸಲಾಯಿತು.

ಗದಗ ನಗರದಲ್ಲಿಯೇ ಚಲವಾದಿ ಸಮುದಾಯಕ್ಕೆ ಐನೂರು ಮನೆಗಳನ್ನ ಮಂಜೂರು ಮಾಡಬೇಕು ಅಂತ ಒತ್ತಾಯ ಮಾಡಲಾಗಿದೆ.

ಇದನ್ನೂ ಓದಿ: ಗದಗ: ಹಳ್ಳಿಗುಡಿಯಲ್ಲಿ ಪ್ಯಾಸೆಂಜರ್ ವಿಶೇಷ ರೈಲು ನಿಲುಗಡೆ ಸೌಲಭ್ಯಕ್ಕೆ ಚಾಲನೆ

ಈ ವೇಳೆ ಭಾಷಣ ಮಾಡಿದ ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮೀಜಿ, ಸಂವಿಧಾನ ಉಳಿದರೆ ಶೋಷಿತರು, ದಮಣಿತರಿಗೆ ಉಳಿಗಾಲವಿದೆ. ಶಾಸನ ಮಾಡುವ ಜಾಗದಲ್ಲಿ ಶೋಷಿತರು ಹೋಗಬೇಕು ಅಂತ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಬಯಸಿದ್ದರು. ಈಗ ಆ ಜಾಗದಲ್ಲಿ ಹೆಚ್.ಸಿ.ಮಹಾದೇವಪ್ಪನಂತರು ಹೋಗಿ ಕೂತಿದ್ದಾರೆ. ಹೀಗಾಗಿ ಸಂವಿಧಾನ ಆಶಯದಂತೆ ಶಾಸನ ಮಾಡುವ ಜಾಗದಲ್ಲಿ ಭಾರತದ ಪ್ರಜಾಪ್ರಭುತ್ವವನ್ನು, ಸಾರ್ವಭೌಮತ್ವನ್ನ ಬಹುತ್ವವನ್ನ ಅಖಂಡತೆಯನ್ನ ಎತ್ತಿಹಿಡಿಯುವಂತ ಗೌರವಿಸುವಂತರು ಹೋಗಬೇಕು ಎಂದು ಹೇಳಿದರು.

ಇದನ್ನೂ ಓದಿ: ಗದಗ-ಬೇಟಗೇರಿ ನಗರ ಸಭೆಯಲ್ಲಿ ಗೋಲ್ಮಾಲ್​; ಕಾನೂನ ಬಾಹಿರ ಕಾಮಗಾರಿ ಟೆಂಡರ್ ಮಾಡಿ ಕೋಟ್ಯಾಂತರ ಹಣ ಲೂಟಿಗೆ ಪ್ಲಾನ್

ಇವತ್ತು ದೇಶದಲ್ಲಿ ಒಂದು ಚುನಾವಣೆ, ಒಂದು ದೇಶ, ಒಂದೇ ಧರ್ಮ, ಒಂದೇ ಸಂಸ್ಕೃತಿ ಎಂಬಂತಹ ಸಂವಿಧಾನ ಬಾಹಿರದ ಕೆಲಸಗಳನ್ನ ಜನ ಅರ್ಥ ಮಾಡಿಕೊಳ್ಳಬೇಕು ಅಂತ ಕೇಂದ್ರ ಸರಕಾರದ ಕಾರ್ಯಕ್ರಮಗಳ ವಿರುದ್ಧ ಹರಿಹಾಯ್ದರು.

ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಹೆಚ್.ಕೆ.ಪಾಟೀಲ್ ಹಾಗೂ ಶಾಸಕರಾದ ಅಬ್ಬಯ್ಯ ಪ್ರಸಾದ್, ಜಿಎಸ್ ಪಾಟೀಲ್, ಮೈಸೂರಿನ ಜ್ಞಾನ ಪ್ರಕಾಶ ಸ್ವಾಮೀಜಿ ಹಾಗೂ ಎಂಎಲ್.ಸಿ ಸಲೀಂ ಅಹ್ಮದ್ ಅವರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್