Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶೋತ್ಸವ ನಡೆಯಿತು. ಈ ವೇಳೆ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಬಾರಿ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯ ಮಾದರಿ ಪ್ರದರ್ಶನ ಮಾಡಿದರು. ವಿಕ್ರಂ ಲ್ಯಾಂಡರ್ ಮತ್ತು ರೋವರ್ ಮಾದರಿ ಲ್ಯಾಂಡ್ ಆಗುವ ದೃಶ್ಯ ಪ್ರದರ್ಶನ ಮಾಡಲಾಯಿತು.

ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ
ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶೋತ್ಸವದಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: Rakesh Nayak Manchi

Updated on: Sep 19, 2023 | 9:39 PM

ಗದಗ, ಸೆ.19: ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶ ಚತುರ್ಥಿ (Ganesh Chaturthi) ಪ್ರಯುಕ್ತ ಮಹಾಂತೇಶ್ವರ ಯುವಕ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಗಣೇಶೋತ್ಸವ ಸಮಿತಿಯು ಗಣೇಶ ಮೂರ್ತಿ‌ ಪ್ರತಿಷ್ಠಾಪನೆ‌ ಮಾಡಿತು. ಈ ವೇಳೆ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಬಾರಿ ಯಶಸ್ವಿಯಾದ ಚಂದ್ರಯಾನ-3 (Chandrayaan-3) ಉಡಾವಣೆಯ ಮಾದರಿ ಪ್ರದರ್ಶನ ಮಾಡಿದರು.

ಇಂತಹದೊಂದು ಕುತೂಹಲಕಾರಿ ರೋಮಾಂಚನ ಸನ್ನಿವೇಶವನ್ನು ನೋಡಲು ಅನೇಕರು ಆಗಮಿಸಿದರು. ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಮತ್ತು ರೋವರ್ ಮಾದರಿ ಲ್ಯಾಂಡ್ ಆಗುವ ದೃಶ್ಯ ಪ್ರದರ್ಶನ ಆಗುತ್ತಿದ್ದಂತೆ ಗಣಪನ ದರ್ಶನ ಪಡೆದು ಕೃಪೆಗೆ ಪಾತ್ರರಾಗಲು ಬಂದವರು ಚಪ್ಪಾಳೆ ತಟ್ಟಿ ಯುವ ಕಲಾವಿದರಿಗೆ ಪ್ರೋತ್ಸಾಹಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದ ಸಂಭ್ರಮ; ಕಾಶಿ ವಿಶ್ವನಾಥ ದೇಗುಲದ ಮಾದರಿಯಲ್ಲಿ ಗಂಗಾರತಿ, ಇಲ್ಲಿದೆ ವಿಡಿಯೋ

ಗ್ರಾಮದ ಜನರು ತಂಡೋಪತಂಡವಾಗಿ ಗಣೇಶನಿಗೆ ಅಕ್ಷತೆ ಕಾಳು ಹಾಕಲು ಬಂದು ಚಂದ್ರಯಾನ ಪ್ರದರ್ಶನವನ್ನು ನಿಬ್ಬೆರಗಾಗಿ ವೀಕ್ಷಿಸಿದರು. ಬಾಹ್ಯಾಕಾಶದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದು ಚಲಿಸುತ್ತಾ ಏನೆಲ್ಲ ಕಾರ್ಯಾಚರಣೆ ಮಾಡುತ್ತದೆ ಎಂಬುದರ ಕುರಿತು ಸನ್ನಿವೇಶ ಪ್ರದರ್ಶನಗೊಂಡಿತು.

ಈ ವೇಳೆಯಲ್ಲಿ ಚಂದ್ರಯಾನ-3 ಯಶಸ್ವಿಗೊಳಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇಲ್ಲಿ ಇದನ್ನು ತಯಾರಿಸಿದ ಯುವ ಕಲಾವಿದರಾದ ನಾಗರಾಜ ಕಡಗದ, ಪ್ರವೀಣ ವಾಲಿ, ಅಂದಾನಪ್ಪ ಬಳಗೇರ, ಆನಂದ ಕೊಪ್ಪದ, ಅಭಿ ವಾಲಿ ಇವರಿಗೆ ಧನ್ಯವಾದ ಅರ್ಪಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು