AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶೋತ್ಸವ ನಡೆಯಿತು. ಈ ವೇಳೆ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಬಾರಿ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯ ಮಾದರಿ ಪ್ರದರ್ಶನ ಮಾಡಿದರು. ವಿಕ್ರಂ ಲ್ಯಾಂಡರ್ ಮತ್ತು ರೋವರ್ ಮಾದರಿ ಲ್ಯಾಂಡ್ ಆಗುವ ದೃಶ್ಯ ಪ್ರದರ್ಶನ ಮಾಡಲಾಯಿತು.

ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ
ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶೋತ್ಸವದಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Sep 19, 2023 | 9:39 PM

Share

ಗದಗ, ಸೆ.19: ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶ ಚತುರ್ಥಿ (Ganesh Chaturthi) ಪ್ರಯುಕ್ತ ಮಹಾಂತೇಶ್ವರ ಯುವಕ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಗಣೇಶೋತ್ಸವ ಸಮಿತಿಯು ಗಣೇಶ ಮೂರ್ತಿ‌ ಪ್ರತಿಷ್ಠಾಪನೆ‌ ಮಾಡಿತು. ಈ ವೇಳೆ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಬಾರಿ ಯಶಸ್ವಿಯಾದ ಚಂದ್ರಯಾನ-3 (Chandrayaan-3) ಉಡಾವಣೆಯ ಮಾದರಿ ಪ್ರದರ್ಶನ ಮಾಡಿದರು.

ಇಂತಹದೊಂದು ಕುತೂಹಲಕಾರಿ ರೋಮಾಂಚನ ಸನ್ನಿವೇಶವನ್ನು ನೋಡಲು ಅನೇಕರು ಆಗಮಿಸಿದರು. ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಮತ್ತು ರೋವರ್ ಮಾದರಿ ಲ್ಯಾಂಡ್ ಆಗುವ ದೃಶ್ಯ ಪ್ರದರ್ಶನ ಆಗುತ್ತಿದ್ದಂತೆ ಗಣಪನ ದರ್ಶನ ಪಡೆದು ಕೃಪೆಗೆ ಪಾತ್ರರಾಗಲು ಬಂದವರು ಚಪ್ಪಾಳೆ ತಟ್ಟಿ ಯುವ ಕಲಾವಿದರಿಗೆ ಪ್ರೋತ್ಸಾಹಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದ ಸಂಭ್ರಮ; ಕಾಶಿ ವಿಶ್ವನಾಥ ದೇಗುಲದ ಮಾದರಿಯಲ್ಲಿ ಗಂಗಾರತಿ, ಇಲ್ಲಿದೆ ವಿಡಿಯೋ

ಗ್ರಾಮದ ಜನರು ತಂಡೋಪತಂಡವಾಗಿ ಗಣೇಶನಿಗೆ ಅಕ್ಷತೆ ಕಾಳು ಹಾಕಲು ಬಂದು ಚಂದ್ರಯಾನ ಪ್ರದರ್ಶನವನ್ನು ನಿಬ್ಬೆರಗಾಗಿ ವೀಕ್ಷಿಸಿದರು. ಬಾಹ್ಯಾಕಾಶದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದು ಚಲಿಸುತ್ತಾ ಏನೆಲ್ಲ ಕಾರ್ಯಾಚರಣೆ ಮಾಡುತ್ತದೆ ಎಂಬುದರ ಕುರಿತು ಸನ್ನಿವೇಶ ಪ್ರದರ್ಶನಗೊಂಡಿತು.

ಈ ವೇಳೆಯಲ್ಲಿ ಚಂದ್ರಯಾನ-3 ಯಶಸ್ವಿಗೊಳಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇಲ್ಲಿ ಇದನ್ನು ತಯಾರಿಸಿದ ಯುವ ಕಲಾವಿದರಾದ ನಾಗರಾಜ ಕಡಗದ, ಪ್ರವೀಣ ವಾಲಿ, ಅಂದಾನಪ್ಪ ಬಳಗೇರ, ಆನಂದ ಕೊಪ್ಪದ, ಅಭಿ ವಾಲಿ ಇವರಿಗೆ ಧನ್ಯವಾದ ಅರ್ಪಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಮುದ್ದು ಮಗಳ ಹುಟ್ಟುಹಬ್ಬಕ್ಕೆ ಮುದ್ದಾದ ವಿಡಿಯೋ ಹಂಚಿಕೊಂಡ ರಿಷಬ್ ಶೆಟ್ಟಿ
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಒಬ್ಬರನ್ನೊಬ್ಬರು ತಳ್ಳಿಕೊಂಡು ಕೆಂಡದ ಮೇಲೆ ಬಿದ್ದ ಭಕ್ತರು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
ಗಾಂಜಾ ಅಮಲಿನಲ್ಲಿ ಅಟ್ಟಹಾಸ: ಹೊಸ ಕಾರಿನ ಗ್ಲಾಸ್​​ ಒಡೆದ ಕಿಡಿಗೇಡಿಗಳು
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
Video: ಮಗುವಿಗೆ ಜನ್ಮಕೊಟ್ಟು ಕಸದ ಬುಟ್ಟಿಗೆ ಎಸೆದು ಹೋದ ಬಾಲಕಿ
ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ
ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ
ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ
ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ!
ದೊಡ್ಡಬಳ್ಳಾಪುರ ಬಳಿ ಕಲ್ಲಂಗಡಿ ಕ್ಯಾಂಟರ್ ಪಲ್ಟಿ, ಹಣ್ಣು ಹೊತ್ತೊಯ್ದ ಜನ!
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ಗೊಂಬೆಯನ್ನೇ ಸರ್ವಸ್ವ ಎಂದುಕೊಂಡಿರುವ ಕೋತಿಯಿಂದ ಗೊಂಬೆಯನ್ನು ದೂರ ಮಾಡ್ತಾರಾ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ
ದುಬೈನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ