AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ

ಗದಗ ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶೋತ್ಸವ ನಡೆಯಿತು. ಈ ವೇಳೆ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಬಾರಿ ಯಶಸ್ವಿಯಾದ ಚಂದ್ರಯಾನ-3 ಉಡಾವಣೆಯ ಮಾದರಿ ಪ್ರದರ್ಶನ ಮಾಡಿದರು. ವಿಕ್ರಂ ಲ್ಯಾಂಡರ್ ಮತ್ತು ರೋವರ್ ಮಾದರಿ ಲ್ಯಾಂಡ್ ಆಗುವ ದೃಶ್ಯ ಪ್ರದರ್ಶನ ಮಾಡಲಾಯಿತು.

ಗದಗ: ಗಣೇಶ ಪ್ರತಿಷ್ಠಾಪನೆಯಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ, ಭಕ್ತರಿಂದ ಚಪ್ಪಾಳೆ ಸುರಿಮಳೆ
ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶೋತ್ಸವದಲ್ಲಿ ಚಂದ್ರಯಾನ-3 ಮಾದರಿ ಪ್ರದರ್ಶನ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Sep 19, 2023 | 9:39 PM

Share

ಗದಗ, ಸೆ.19: ಜಿಲ್ಲೆಯ ರೋಣ ತಾಲೂಕಿನ ಜಕ್ಕಲಿ ಗ್ರಾಮದಲ್ಲಿ ಗಣೇಶ ಚತುರ್ಥಿ (Ganesh Chaturthi) ಪ್ರಯುಕ್ತ ಮಹಾಂತೇಶ್ವರ ಯುವಕ ಸಂಘ ಹಾಗೂ ಶ್ರೀ ವೀರಭದ್ರೇಶ್ವರ ಗಣೇಶೋತ್ಸವ ಸಮಿತಿಯು ಗಣೇಶ ಮೂರ್ತಿ‌ ಪ್ರತಿಷ್ಠಾಪನೆ‌ ಮಾಡಿತು. ಈ ವೇಳೆ ಪ್ರತಿಭಾನ್ವಿತ ಯುವ ಕಲಾವಿದರು ಸೇರಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಬಾರಿ ಯಶಸ್ವಿಯಾದ ಚಂದ್ರಯಾನ-3 (Chandrayaan-3) ಉಡಾವಣೆಯ ಮಾದರಿ ಪ್ರದರ್ಶನ ಮಾಡಿದರು.

ಇಂತಹದೊಂದು ಕುತೂಹಲಕಾರಿ ರೋಮಾಂಚನ ಸನ್ನಿವೇಶವನ್ನು ನೋಡಲು ಅನೇಕರು ಆಗಮಿಸಿದರು. ಚಂದ್ರಯಾನ-3 ವಿಕ್ರಂ ಲ್ಯಾಂಡರ್ ಮತ್ತು ರೋವರ್ ಮಾದರಿ ಲ್ಯಾಂಡ್ ಆಗುವ ದೃಶ್ಯ ಪ್ರದರ್ಶನ ಆಗುತ್ತಿದ್ದಂತೆ ಗಣಪನ ದರ್ಶನ ಪಡೆದು ಕೃಪೆಗೆ ಪಾತ್ರರಾಗಲು ಬಂದವರು ಚಪ್ಪಾಳೆ ತಟ್ಟಿ ಯುವ ಕಲಾವಿದರಿಗೆ ಪ್ರೋತ್ಸಾಹಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬದ ಸಂಭ್ರಮ; ಕಾಶಿ ವಿಶ್ವನಾಥ ದೇಗುಲದ ಮಾದರಿಯಲ್ಲಿ ಗಂಗಾರತಿ, ಇಲ್ಲಿದೆ ವಿಡಿಯೋ

ಗ್ರಾಮದ ಜನರು ತಂಡೋಪತಂಡವಾಗಿ ಗಣೇಶನಿಗೆ ಅಕ್ಷತೆ ಕಾಳು ಹಾಕಲು ಬಂದು ಚಂದ್ರಯಾನ ಪ್ರದರ್ಶನವನ್ನು ನಿಬ್ಬೆರಗಾಗಿ ವೀಕ್ಷಿಸಿದರು. ಬಾಹ್ಯಾಕಾಶದಲ್ಲಿ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿದು ಚಲಿಸುತ್ತಾ ಏನೆಲ್ಲ ಕಾರ್ಯಾಚರಣೆ ಮಾಡುತ್ತದೆ ಎಂಬುದರ ಕುರಿತು ಸನ್ನಿವೇಶ ಪ್ರದರ್ಶನಗೊಂಡಿತು.

ಈ ವೇಳೆಯಲ್ಲಿ ಚಂದ್ರಯಾನ-3 ಯಶಸ್ವಿಗೊಳಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇಲ್ಲಿ ಇದನ್ನು ತಯಾರಿಸಿದ ಯುವ ಕಲಾವಿದರಾದ ನಾಗರಾಜ ಕಡಗದ, ಪ್ರವೀಣ ವಾಲಿ, ಅಂದಾನಪ್ಪ ಬಳಗೇರ, ಆನಂದ ಕೊಪ್ಪದ, ಅಭಿ ವಾಲಿ ಇವರಿಗೆ ಧನ್ಯವಾದ ಅರ್ಪಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್
ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್
ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಕ್ಯಾಪ್ಟನ್
ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಕ್ಯಾಪ್ಟನ್
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ನನ್ನ ತಂದೆ ಈಗ ಮೊದಲಿನಂತೆ ಇಲ್ಲ; ಅರ್ಜುನ್ ಸರ್ಜಾ ಬಗ್ಗೆ ಮಗಳು ಐಶ್ವರ್ಯಾ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ವಿರೋಧ ಪಕ್ಷದ ನಾಯಕನಿಂದ ಇಂಥಾ ವರ್ತನೆ ನಿರೀಕ್ಷಿಸಿರಲಿಲ್ಲ ಎಂದ ಬಿಜೆಪಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಬಂಧನ ಭೀತಿ ಬೆನ್ನಲ್ಲೇ ಭೈರತಿ ಬಸವರಾಜ್​​​ ದುಬೈಗೆ ಪರಾರಿ
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಮೈಸೂರಿನಲ್ಲಿ ಪುಟ್ಟ ಬಾಲಕಿಯ ಬ್ಯಾಗಿನೊಳಗೆ ನಾಗರ ಹಾವು ಪ್ರತ್ಯಕ್ಷ!
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಈ ಕಾರಣಕ್ಕೆ ಪುಟ್ಟ ಮಕ್ಕಳಿಗೆ ಕಾಲ್ಗೆಜ್ಜೆ ಹಾಕಲೇಬೇಕು
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದ್ದು, ಎಲ್ಲ ಕಾರ್ಯಗಳಲ್ಲಿ ಜಯ
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಯುವಕನಿಗೆ ಡ್ರಗ್ಸ್ ನೀಡಿ ಬಲವಂತವಾಗಿ ಮದುವೆ ಮಾಡಿದ ವಿಡಿಯೋ ವೈರಲ್
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು
ಅಪ್ಪ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ನಟಿಸಿದ ಬಗ್ಗೆ ಐಶ್ವರ್ಯಾ ಹೇಳಿದ್ದೇನು