Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವುಗಳ ಸಾಗಾಟ, ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಥಳಿತ ಆರೋಪ

ಅಕ್ರಮವಾಗಿ ಗೋವುಗಳ ಸಾಗಾಣೆ ಮಾಡುತ್ತಿದ್ದ ಎಂದು ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಥಳಿಸಿರುವ ಆರೋಪ ಕೇಳಿಬಂದಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಗೋವುಗಳ ಸಾಗಾಟ, ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಥಳಿತ ಆರೋಪ
ನರಗುಂದ ಪೊಲೀಸ್​ ಠಾಣೆ
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 10, 2023 | 12:12 PM

ಗದಗ ಸೆ.10: ನರಗುಂದ (Naragund) ಪಟ್ಟಣದ ಹೊರವಲಯದಲ್ಲಿ ಅಕ್ರಮವಾಗಿ ಗೋವುಗಳ (Catteles) ಸಾಗಾಣೆ ಮಾಡುತ್ತಿದ್ದ ಎಂದು ಅನ್ಯಕೋಮಿನ ವ್ಯಕ್ತಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು (Hindu Activists) ಥಳಿಸಿರುವ ಆರೋಪ ಕೇಳಿಬಂದಿದೆ. ಅಷ್ಫಾಕ್ ಬೇಪಾರಿ, ಮೊಹಮ್ಮದ್ ಗೌಸ್ ಬೇಪಾರಿ ಹಲ್ಲೆಗೊಳಗಾದವರು. ಬಸವರಾಜ ಮಮಟಗೇರಿ, ಮಲ್ಲಿಕಾರ್ಜುನ ಹಿರೇಮಠ, ಶರಣಪ್ಪ ಹಂಚಿನಾಳ, ಅಜಯ ಅಣ್ಣಿಗೇರಿ, ದೇವರಾಜು ಕಮ್ಮಾರ ಹಲ್ಲೆ ಮಾಡಿದ ಆರೋಪಿಗಳು. ವಾಹನ ಚಾಲಕ ಮೊಹಮ್ಮದ್ ಗೌಸ್​​ರಿಗೆ  ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೊಹಮ್ಮದ್, ಅಷ್ಫಾಕ್ ಗದಗ ಜಾನುವಾರು ಸಂತೆಯಿಂದ ಎಮ್ಮೆ ಹೇರಿಕೊಂಡು ಟಾಟಾ ಏಸ್ ವಾಹನದಲ್ಲಿ  ನರಗುಂದಕ್ಕೆ ಬರುತ್ತಿದ್ದರು. ಈ ವೇಳೆ ಡಿಸೇಲ್ ಖಾಲಿಯಾಗಿದೆ ಎಂದು ನರಗುಂದ ಹೊರವಲಯದ ಕುರ್ಲಗೇರಿ ಬಳಿ ನಿಂತಿದ್ದಾಗ ಆರೋಪಿಗಳು ಹಲ್ಲೆ ಮಾಡಿದ್ದಾರೆ.  ಮೊಹಮ್ಮದ್ ಗೌಸ್ ಬೇಪಾರಿ ಎಂಬುವರಿನಿಗೆ ತಲೆ, ಹೊಟ್ಟೆ, ಎದೆಯ ಭಾಗಕ್ಕೆ ಗಾಯಗಳಾಗಿದೆ.  ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: ಗೋ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ, ಗುಳೇದಗುಡ್ಡ ಬಂದ್​​​

ಇನ್ನು ನರಗುಂದ ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ ಮಾಡಿದ್ದಾರೆ. ಇಬ್ಬರು ಡಿವೈಎಸ್​ಪಿ ನೇತೃತ್ವದಲ್ಲಿ ಎರಡು ಡಿಆರ್ ತುಕಡಿ ಸೇರಿದಂತೆ 150 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Sun, 10 September 23

ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ