AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ರೂ ಕುಸಿದ ಕೊತ್ತಂಬರಿ ಬೆಲೆ: ರೈತರು ಕಂಗಾಲು, ನೂರಾರು ಎಕರೆಯಲ್ಲಿ ಬೆಳೆದ ಸೊಪ್ಪು ನಾಶ

Gadag News: ಸರಿಯಾಗಿ ಮಳೆಯಿಲ್ಲದೆ ಮತ್ತು ಜೊತೆಗೆ ಮಾರ್ಕೆರ್ಟ್​ನಲ್ಲಿ ಸಹ ಬೆಲೆ ಸಿಗದೆ, ಒಂದು ಕಟ್ಟು ಕೊತ್ತಂಬರಿ ಕೇವಲ 1 ರೂ. ಗೆ ಮಾತ್ರ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಆಘಾತ ಎದುರಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಸುತ್ತಮುತ್ತಲಿನ ನೂರಾರು ಎಕರೆ ಕೊತ್ತಂಬರಿ ಬೆಳೆವನ್ನು ರೈತರು ನಾಶ ಮಾಡಿದ್ದಾರೆ. 

1 ರೂ ಕುಸಿದ ಕೊತ್ತಂಬರಿ ಬೆಲೆ: ರೈತರು ಕಂಗಾಲು, ನೂರಾರು ಎಕರೆಯಲ್ಲಿ ಬೆಳೆದ ಸೊಪ್ಪು ನಾಶ
ಬೆಳೆದ ಕೊತ್ತಂಬರಿ ಸೊಪ್ಪು ನಾಶ ಮಾಡಿದ ರೈತರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 25, 2023 | 3:15 PM

Share

ಗದಗ, ಆಗಸ್ಟ್​ 25: ಮಳೆಯಿಲ್ಲ, ಜೊತೆಗೆ ಮಾರ್ಕೆಟ್​​ನಲ್ಲಿ ಬೆಲೆ ಇಲ್ಲ ಎಂದು ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಸುತ್ತಮುತ್ತಲಿನ ನೂರಾರು ಎಕರೆ ಕೊತ್ತಂಬರಿ ಬೆಳೆವನ್ನು (Coriander) ರೈತರು ನಾಶ ಮಾಡಿದ್ದಾರೆ. ಕಳೆದ ವರ್ಷ ಒಂದು ಕಟ್ಟು ಸೊಪ್ಪಿಗೆ 140-180 ರೂ. ಮಾರಾಟವಾಗಿತ್ತು. ಹೀಗಾಗಿ ಈ ವರ್ಷವೂ ಲಾಭ ಸಿಗಬಹುದೆಂಬ ನಿರೀಕ್ಷೆಯಲ್ಲಿ ರೈತರು ಅತೀ ಹೆಚ್ಚು ಕೊತ್ತೊಂಬರಿ ಬೆಳೆದಿದ್ದರು. ಆದರೆ ಸರಿಯಾಗಿ ಮಳೆಯಿಲ್ಲದೆ ಮತ್ತು ಜೊತೆಗೆ ಮಾರ್ಕೆರ್ಟ್​ನಲ್ಲಿ ಸಹ ಬೆಲೆ ಸಿಗದೆ, ಒಂದು ಕಟ್ಟು ಕೊತ್ತಂಬರಿ ಕೇವಲ 1 ರೂ. ಮಾತ್ರ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಆಘಾತ ಎದುರಾಗಿದೆ.

ಒಂದು ಎಕರೆಗೆ ಸುಮಾರು 15 ರಿಂದ 20 ಸಾವಿರ ರೂ. ಖರ್ಚು ಮಾಡಿ ರೈತರು ಕೊತ್ತಂಬರಿ ಸೊಪ್ಪು ಬೆಳೆದಿದ್ದಾರೆ. ಉತ್ತಮ ಬೆಲೆ ಸಿಕ್ಕಿದ್ದರೆ 50 ರಿಂದ 80 ಸಾವಿರ ರೂ. ವರೆಗೆ ಲಾಭ ಸಿಗುತಿತ್ತು. ಆದರೆ ಈಗ ಕೂಲಿ ಕೆಲಸ ಮಾಡುವವರ ಖರ್ಚು ಸಹ ಹೊರೆಯಾಗುತ್ತಿದೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ದಿನವಾದ ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್​​ ಕಟ್​​

ಇನ್ನೊಂದೆಡೆ ತಮಿಳುನಾಡು ಆಂಧ್ರಪ್ರದೇಶದಲ್ಲಿ ಸಹ ಕೊತ್ತಂಬರಿ ಸೊಪ್ಪು ಹೆಚ್ಚು ಬೆಳೆಯಲಾಗುತ್ತಿದೆ. ಇದರಿಂದ ನಮ್ಮ ರೈತರ ಕೊತ್ತಂಬರಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಕೊತ್ತಂಬರಿ ಹರಗಿ ಹಿಂಗಾರು ಬೆಳೆಗೆ ರೈತರು ಸಿದ್ಧತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಇತ್ತೀಚೆಗೆ ಕೊತ್ತಂಬರಿ ಸೊಪ್ಪಿನ ಬೆಲೆ 100ಕ್ಕೆ ಏರಿಕೆ ಆಗಿತ್ತು. ಆವಕ ಕಡಿಮೆಯಾಗಿದ್ದೇ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಲಾಗಿತ್ತು.

ಕುಸಿದ ಕಿಚನ್​ ಕ್ವೀನ್ ಬೆಲೆ!

ಜೂನ್​ ತಿಂಗಳಿಂದ ನಿರಂತವಾಗಿ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಏರಿಕೆಯಾದಷ್ಟೇ ಜೋರಾಗಿ ಇಳಿಕೆಯಾಗಿದೆ. ಎರಡು ತಿಂಗಳಲ್ಲಿ ಹದಿನೈದು ಕೆಜಿ ಬಾಕ್ಸ್​ ಟೊಮೆಟೊ 2700ರ ವರೆಗೂ ಏರಿಕೆ ಕಂಡಿತ್ತು. ಈಗ ಅಷ್ಟೇ ವೇಗವಾಗಿ ಇಳಿಕೆಯಾಗಿದೆ. ಸದ್ಯ ಮಾರುಕಟ್ಟೆಗೆಯಲ್ಲಿ ಮತ್ತೆ ಯಾವಾಗ ಇಂಥ ದಾಖಲೆ ಬೆಲೆ ಬರುತ್ತದೋ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:11 pm, Fri, 25 August 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್