AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ರೂ ಕುಸಿದ ಕೊತ್ತಂಬರಿ ಬೆಲೆ: ರೈತರು ಕಂಗಾಲು, ನೂರಾರು ಎಕರೆಯಲ್ಲಿ ಬೆಳೆದ ಸೊಪ್ಪು ನಾಶ

Gadag News: ಸರಿಯಾಗಿ ಮಳೆಯಿಲ್ಲದೆ ಮತ್ತು ಜೊತೆಗೆ ಮಾರ್ಕೆರ್ಟ್​ನಲ್ಲಿ ಸಹ ಬೆಲೆ ಸಿಗದೆ, ಒಂದು ಕಟ್ಟು ಕೊತ್ತಂಬರಿ ಕೇವಲ 1 ರೂ. ಗೆ ಮಾತ್ರ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಆಘಾತ ಎದುರಾಗಿದ್ದು, ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಸುತ್ತಮುತ್ತಲಿನ ನೂರಾರು ಎಕರೆ ಕೊತ್ತಂಬರಿ ಬೆಳೆವನ್ನು ರೈತರು ನಾಶ ಮಾಡಿದ್ದಾರೆ. 

1 ರೂ ಕುಸಿದ ಕೊತ್ತಂಬರಿ ಬೆಲೆ: ರೈತರು ಕಂಗಾಲು, ನೂರಾರು ಎಕರೆಯಲ್ಲಿ ಬೆಳೆದ ಸೊಪ್ಪು ನಾಶ
ಬೆಳೆದ ಕೊತ್ತಂಬರಿ ಸೊಪ್ಪು ನಾಶ ಮಾಡಿದ ರೈತರು
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Aug 25, 2023 | 3:15 PM

Share

ಗದಗ, ಆಗಸ್ಟ್​ 25: ಮಳೆಯಿಲ್ಲ, ಜೊತೆಗೆ ಮಾರ್ಕೆಟ್​​ನಲ್ಲಿ ಬೆಲೆ ಇಲ್ಲ ಎಂದು ಜಿಲ್ಲೆಯ ರೋಣ ತಾಲೂಕಿನ ಬೆಳವಣಿಕೆ ಗ್ರಾಮದ ಸುತ್ತಮುತ್ತಲಿನ ನೂರಾರು ಎಕರೆ ಕೊತ್ತಂಬರಿ ಬೆಳೆವನ್ನು (Coriander) ರೈತರು ನಾಶ ಮಾಡಿದ್ದಾರೆ. ಕಳೆದ ವರ್ಷ ಒಂದು ಕಟ್ಟು ಸೊಪ್ಪಿಗೆ 140-180 ರೂ. ಮಾರಾಟವಾಗಿತ್ತು. ಹೀಗಾಗಿ ಈ ವರ್ಷವೂ ಲಾಭ ಸಿಗಬಹುದೆಂಬ ನಿರೀಕ್ಷೆಯಲ್ಲಿ ರೈತರು ಅತೀ ಹೆಚ್ಚು ಕೊತ್ತೊಂಬರಿ ಬೆಳೆದಿದ್ದರು. ಆದರೆ ಸರಿಯಾಗಿ ಮಳೆಯಿಲ್ಲದೆ ಮತ್ತು ಜೊತೆಗೆ ಮಾರ್ಕೆರ್ಟ್​ನಲ್ಲಿ ಸಹ ಬೆಲೆ ಸಿಗದೆ, ಒಂದು ಕಟ್ಟು ಕೊತ್ತಂಬರಿ ಕೇವಲ 1 ರೂ. ಮಾತ್ರ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಆಘಾತ ಎದುರಾಗಿದೆ.

ಒಂದು ಎಕರೆಗೆ ಸುಮಾರು 15 ರಿಂದ 20 ಸಾವಿರ ರೂ. ಖರ್ಚು ಮಾಡಿ ರೈತರು ಕೊತ್ತಂಬರಿ ಸೊಪ್ಪು ಬೆಳೆದಿದ್ದಾರೆ. ಉತ್ತಮ ಬೆಲೆ ಸಿಕ್ಕಿದ್ದರೆ 50 ರಿಂದ 80 ಸಾವಿರ ರೂ. ವರೆಗೆ ಲಾಭ ಸಿಗುತಿತ್ತು. ಆದರೆ ಈಗ ಕೂಲಿ ಕೆಲಸ ಮಾಡುವವರ ಖರ್ಚು ಸಹ ಹೊರೆಯಾಗುತ್ತಿದೆ.

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬದ ದಿನವಾದ ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಪವರ್​​ ಕಟ್​​

ಇನ್ನೊಂದೆಡೆ ತಮಿಳುನಾಡು ಆಂಧ್ರಪ್ರದೇಶದಲ್ಲಿ ಸಹ ಕೊತ್ತಂಬರಿ ಸೊಪ್ಪು ಹೆಚ್ಚು ಬೆಳೆಯಲಾಗುತ್ತಿದೆ. ಇದರಿಂದ ನಮ್ಮ ರೈತರ ಕೊತ್ತಂಬರಿಗೆ ಬೇಡಿಕೆ ಕಡಿಮೆಯಾಗಿದೆ. ಹೀಗಾಗಿ ಕೊತ್ತಂಬರಿ ಹರಗಿ ಹಿಂಗಾರು ಬೆಳೆಗೆ ರೈತರು ಸಿದ್ಧತೆಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಸರ್ಕಾರಕ್ಕೆ ಹೊಸ ಟೆನ್ಷನ್: ಎನ್​​ಇಪಿ ರದ್ದತಿಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

ಇತ್ತೀಚೆಗೆ ಕೊತ್ತಂಬರಿ ಸೊಪ್ಪಿನ ಬೆಲೆ 100ಕ್ಕೆ ಏರಿಕೆ ಆಗಿತ್ತು. ಆವಕ ಕಡಿಮೆಯಾಗಿದ್ದೇ ಬೆಲೆ ಹೆಚ್ಚಳಕ್ಕೆ ಕಾರಣ ಎನ್ನಲಾಗಿತ್ತು.

ಕುಸಿದ ಕಿಚನ್​ ಕ್ವೀನ್ ಬೆಲೆ!

ಜೂನ್​ ತಿಂಗಳಿಂದ ನಿರಂತವಾಗಿ ಏರಿಕೆ ಕಂಡಿದ್ದ ಟೊಮೆಟೊ ಬೆಲೆ ಏರಿಕೆಯಾದಷ್ಟೇ ಜೋರಾಗಿ ಇಳಿಕೆಯಾಗಿದೆ. ಎರಡು ತಿಂಗಳಲ್ಲಿ ಹದಿನೈದು ಕೆಜಿ ಬಾಕ್ಸ್​ ಟೊಮೆಟೊ 2700ರ ವರೆಗೂ ಏರಿಕೆ ಕಂಡಿತ್ತು. ಈಗ ಅಷ್ಟೇ ವೇಗವಾಗಿ ಇಳಿಕೆಯಾಗಿದೆ. ಸದ್ಯ ಮಾರುಕಟ್ಟೆಗೆಯಲ್ಲಿ ಮತ್ತೆ ಯಾವಾಗ ಇಂಥ ದಾಖಲೆ ಬೆಲೆ ಬರುತ್ತದೋ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:11 pm, Fri, 25 August 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ