AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಹಗಲು ಕೆಇಬಿಯಲ್ಲಿ ದಿನಗೂಲಿ ಕೆಲಸ; ರಾತ್ರಿ ರೈತರ ಜಮೀನುಗಳಲ್ಲಿ ವಿದ್ಯುತ್ ತಂತಿ ಕಳ್ಳತನ; ಮೂವರ ಬಂಧನ

ಹಗಲಿನಲ್ಲಿ ಕೆಇಬಿ ಕೆಲಸ ಮಾಡಿ, ರಾತ್ರಿ ವೇಳೆ ರೈತರ ಜಮೀನುಗಳಲ್ಲಿ ಅಳವಡಿಸಿದ್ದ ಬೆಲೆ ಬಾಳುವ ಅಲ್ಯೂಮಿನಿಯಂ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಲಕ್ಷ್ಮೇಶ್ವರ ಪೊಲೀಸರು ಬಂಧಿಸಿದ್ದಾರೆ.

Gadag News: ಹಗಲು ಕೆಇಬಿಯಲ್ಲಿ ದಿನಗೂಲಿ ಕೆಲಸ; ರಾತ್ರಿ ರೈತರ ಜಮೀನುಗಳಲ್ಲಿ ವಿದ್ಯುತ್ ತಂತಿ ಕಳ್ಳತನ; ಮೂವರ ಬಂಧನ
ಆರೋಪಿಗಳ ಬಂಧನ
ಕಿರಣ್ ಹನುಮಂತ್​ ಮಾದಾರ್
|

Updated on: Jun 23, 2023 | 5:17 PM

Share

ಗದಗ: ಹಗಲು ಕೆಇಬಿ(KEB)ಯಲ್ಲಿ ಕೆಲಸ ಮಾಡಿ, ರಾತ್ರಿ ಹೊತ್ತು ರೈತರ ಜಮೀನುಗಳಲ್ಲಿ ಅಳವಡಿಸಿದ್ದ ವಿದ್ಯುತ್ ತಂತಿಗಳನ್ನ ಕಳ್ಳತನ(Theft) ಮಾಡುತ್ತಿದ್ದ ಮೂವರು ಕಳ್ಳರನ್ನ ಇದೀಗ ಲಕ್ಷ್ಮೇಶ್ವರ(Laxmeshwar) ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ ಶೆಟ್ಟಣ್ಣನವರ್​(31), ಜಗದೀಶ್​ ಹನಮಂತಪ್ಪ ಕನಕಮ್ಮನವರ(22), ತಿಪ್ಪಣ್ಣ ಮಲಕಪ್ಪ ಕಾಳೆ(31) ಬಂಧಿತ ಆರೋಪಿಗಳು. ಹೌದು ತಾಲೂಕಿನ ರೈತರ ಜಮೀನುಗಳಲ್ಲಿ ಹಾಕಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಅಲ್ಯೂಮಿನಿಯಂ ವಿದ್ಯುತ್ ತಂತಿಯನ್ನ ಕಳ್ಳತನ ಮಾಡಿದ ಕಳ್ಳರನ್ನು ಬಂಧಿಸುವ ಮೂಲಕ ಲಕ್ಷ್ಮೇಶ್ವರ ಠಾಣೆಯ ಪೊಲೀಸರು ರೈತರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಕೆಲ ದಿನಗಳಿಂದ ಲಕ್ಷ್ಮೇಶ್ವರ ತಾಲೂಕಿನಾದ್ಯಂತ ರೈತರ ಭೂಮಿಗಳಲ್ಲಿನ ಬೆಲೆಬಾಳುವ ಕೇಬಲ್, ವೈರ್‌ಗಳು ಕಳ್ಳತನವಾಗುತ್ತಿರುವ ಕುರಿತು ಹಲವು ದೂರುಗಳು ಬಂದಿದ್ದವು. ಈ ಹಿನ್ನಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಸಿಪಿಐ ಮಾರ್ಗದರ್ಶನದಲ್ಲಿ ಪಟ್ಟಣದ ಪಿಎಸ್‌ಐ ಯೊಸೆಫ್ ಜಮೂಲಾ, ವ್ಹಿ ಜಿ ಪವಾರ ನೇತೃತ್ವದ ಪೊಲೀಸರ ತಂಡ ಕಳ್ಳರ ಚಲನವಲನವನ್ನ ಪತ್ತೆ ಮಾಡಿ, ಅವರನ್ನು ಬಂಧಿಸುವಲ್ಲಿ ಇದೀಗ ಯಶಸ್ವಿಯಾಗಿದೆ.

ಇದನ್ನೂ ಓದಿ:Bengaluru News: ಬೈಕ್​ ಕಳ್ಳತನ ಮಾಡ್ತಿದ್ದ ಐವರ ಬಂಧನ; 20 ಲಕ್ಷ ರೂ. ಮೌಲ್ಯದ 22 ಬೈಕ್, ಒಂದು ಆಟೋ ಜಪ್ತಿ

ಮೂವರ ಕಳ್ಳರು ಬಂಧನ

ಖಚಿತ ಮಾಹಿತಿ ಮೇರೆಗೆ ಎಎಸ್‌ಐ ಎನ್​. ಎ ಮೌಲ್ವಿ, ಸಿಬ್ಬಂದಿಗಳಾದ ಎಂ ಡಿ ಲಮಾಣಿ, ಡಿ ಎಸ್ ನಧಾಪ್, ಜಿ ಆರ್ ಗ್ರಾಮಪುರೋಹಿತ ಅವರು ಹೂವಿನಶಿಗ್ಲಿ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ಮೂವರು ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 880 ಕೆಜಿ ತೂಕದ ಅಂದಾಜು 2ಲಕ್ಷ 47 ಸಾವಿರ ರೂ ಬೆಲೆಬಾಳುವ ಅಲ್ಯೂಮಿನಿಯಂ ತಂತಿ ಮತ್ತು ಕೃತ್ಯಕ್ಕೆ ಬಳಸಿದ ಸುಮಾರು 2 ಲಕ್ಷ 50 ಸಾವಿರ ರೂಪಾಯಿಯ ಟಾಟಾ ಏಸ್ ವಾಹನವನ್ನ ಜಪ್ತಿ ಮಾಡಿದ್ದಾರೆ. ಇನ್ನು ತನಿಖೆ ವೇಳೆ ಇವರು ‘ ಜಿಲ್ಲೆಯ ಸಮೀಪದ ನಾರಾಯಣಪೂರ, ಸುಗ್ನಳ್ಳಿ ಸೇರಿ ಅನೇಕ ಗ್ರಾಮಗಳಲ್ಲಿ ಕೃತ್ಯವನ್ನು ನಡೆಸಿರುವ ಬಗ್ಗೆ ತಿಳಿದು ಬಂದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ