AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವರಾಜ ಬೊಮ್ಮಾಯಿ ಕ್ಷೇತ್ರವೇ ಅಭಿವೃದ್ಧಿಯಾಗಿಲ್ಲ, ರಾಜ್ಯದ ಅಭಿವೃದ್ಧಿ ಎಲ್ಲಿಂದ ಆಗುತ್ತೆ; ಸರ್ಕಾರದ ವಿರುದ್ಧ ಕಿಡಿಕಾರಿದ ದಿಂಗಾಲೇಶ್ವರಶ್ರೀ

ಮೊದಲು ಅಧಿಕಾರಿಗಳ ಮೂಲಕ ಲಂಚ ವಸೂಲಿ ಆಗುತ್ತಿತ್ತು. ಈಗ ಜನಪ್ರತಿನಿಧಿಗಳೇ ವಸೂಲಿ ಮಾಡುತ್ತಾರೆಂದು ಆರೋಪ ಮಾಡಿರುವ ದಿಂಗಾಲೇಶ್ವರ ಸ್ವಾಮೀಜಿ, ನಾಡಿನ ಮಠಾಧೀಶರು, ವಿಚಾರವಾದಿಗಳು ಸತ್ಯ ಹೇಳಬೇಕು.

ಬಸವರಾಜ ಬೊಮ್ಮಾಯಿ ಕ್ಷೇತ್ರವೇ ಅಭಿವೃದ್ಧಿಯಾಗಿಲ್ಲ, ರಾಜ್ಯದ ಅಭಿವೃದ್ಧಿ ಎಲ್ಲಿಂದ ಆಗುತ್ತೆ; ಸರ್ಕಾರದ ವಿರುದ್ಧ ಕಿಡಿಕಾರಿದ ದಿಂಗಾಲೇಶ್ವರಶ್ರೀ
ದಿಂಗಾಲೇಶ್ವರ ಸ್ವಾಮೀಜಿ
TV9 Web
| Edited By: sandhya thejappa|

Updated on:Apr 19, 2022 | 9:20 AM

Share

ಗದಗ: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕ್ಷೇತ್ರವೇ ಅಭಿವೃದ್ಧಿಯಾಗಿಲ್ಲ, ಇನ್ನು ರಾಜ್ಯದ ಅಭಿವೃದ್ಧಿ ಎಲ್ಲಿಂದ ಆಗುತ್ತೆ ಅಂತ ಗದಗದಲ್ಲಿ ಮುಖ್ಯಮಂತ್ರಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ (Dingaleshwar Swamiji) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬೊಮ್ಮಾಯಿ ಕ್ಷೇತ್ರದಲ್ಲಿಯೇ ರಸ್ತೆಗಳು ಸರಿಯಾಗಿಲ್ಲ. ಇನ್ನು ಉತ್ತರ ಕರ್ನಾಟಕದ ಪರಿಸ್ಥಿತಿ ಹೇಗೆ ಚೆನ್ನಾಗಿರುತ್ತದೆ. ಚುನಾವಣೆ ಸಮಯದಲ್ಲಿ ಯದ್ವಾತದ್ವಾ ಹಣವನ್ನು ಚೆಲ್ಲುತ್ತಾರೆ. ಭ್ರಷ್ಟಾಚಾರ ಮಾಡಿ ದಾರಿ ತಪ್ಪುವುದಲ್ಲದೆ, ಜನರ ದಾರಿ ತಪ್ಪಿಸ್ತಾರೆ. ನಾಡಿನ ಬಗ್ಗೆ ಕಾಳಜಿ ಇದ್ದರೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ. ಟೆಂಡರ್ಗಳು ಜನಪ್ರತಿನಿಧಿಗಳ ಬೆಂಬಲಿಗರಿಗೆ ಮಾತ್ರ ಸಿಗುತ್ತದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದುಡ್ಡು, ಅನುದಾನ ಬಳಕೆಯಲ್ಲಿ ದುಡ್ಡು. ಹೀಗೆ ಪ್ರತಿಯೊಂದರಲ್ಲಿ ಲಂಚವಿದೆ ಅಂತ ದಿಂಗಾಲೇಶ್ವರಶ್ರೀಗಳು ಹೇಳಿದ್ದಾರೆ.

ಮೊದಲು ಅಧಿಕಾರಿಗಳ ಮೂಲಕ ಲಂಚ ವಸೂಲಿ ಆಗುತ್ತಿತ್ತು. ಈಗ ಜನಪ್ರತಿನಿಧಿಗಳೇ ವಸೂಲಿ ಮಾಡುತ್ತಾರೆಂದು ಆರೋಪ ಮಾಡಿರುವ ದಿಂಗಾಲೇಶ್ವರ ಸ್ವಾಮೀಜಿ, ನಾಡಿನ ಮಠಾಧೀಶರು, ವಿಚಾರವಾದಿಗಳು ಸತ್ಯ ಹೇಳಬೇಕು. ವೀರಶೈವ ಮಠಗಳಿಗೆ ರಾಜ್ಯ ಸರ್ಕಾರ ಅನುದಾನ ಕೊಟ್ಟಿಲ್ಲ. ಮಠಾಧೀಶರು ಮನವಿ ಮಾಡಿದರೂ ಅನುದಾನ ಕೊಟ್ಟಿಲ್ಲ. ಹೊಗಳುಭಟ್ಟರಿಗೆ, ಧಮ್ಕಿ ಹಾಕುವವರಿಗೆ ಅನುದಾನ ನೀಡುತ್ತಾರೆ ಎಂದು ಸಿಎಂ ವಿರುದ್ಧ ಗುಡುಗಿದ್ದಾರೆ.

ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿರುವ ದಿಂಗಾಲೇಶ್ವರಶ್ರೀ, ರಾಜ್ಯ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರದ ಕಮಿಷನ್ ದಂಧೆ ರಾಜ್ಯದ ಜನತೆಗೆ ಗೊತ್ತಿದೆ. ರಾಜ್ಯದಲ್ಲಿ ಇತ್ತೀಚೆಗೆ ಭ್ರಷ್ಟಾಚಾರ ಮಿತಿಮೀರಿ ಹೋಗುತ್ತಿದೆ. ಆದರೆ ಯಾರೂ ಕೂಡ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿಲ್ಲ. ಏಕೆ ಬಾಯಿಮುಚ್ಚಿಕೊಂಡಿದ್ದಾರೆಂಬುದು ನನಗೆ ಗೊತ್ತಾಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸರ್ಕಾರ ಅಧಿಕಾರಿಗಳ ಮೂಲಕ ಕಮಿಷನ್ ಪಡೆಯುತ್ತಿದೆ. ಬಾಲೆಹೊಸೂರು ಮಠದ ಯಾತ್ರಿ ನಿವಾಸಕ್ಕೆ ರಾಜ್ಯ ಸರ್ಕಾರ 75 ಲಕ್ಷ ರೂ. ಮಂಜೂರು ಮಾಡಿತ್ತು. ಅನುದಾನ ಬಿಡುಗಡೆಗೆ 25 ಲಕ್ಷ ಕಮಿಷನ್ ಕೇಳುತ್ತಾರೆ. ರಾಜ್ಯ ಸರ್ಕಾರದ ವ್ಯವಸ್ಥೆ 30 ಪರ್ಸೆಂಟೇಜ್​ಗೆ ಬಂದು ನಿಂತಿದೆ. ಇದು ಕೇವಲ ನಮ್ಮ ಮಠದ ವಿಚಾರ ಮಾತ್ರವಲ್ಲ. ಇಡೀ ರಾಜ್ಯದ ಸ್ಥಿತಿ ಹೀಗೆಯೇ ಇದೆ. ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಭ್ರಷ್ಟಾಚಾರಕ್ಕೆ ಕಡಿವಾಣ ಹಾಕದಿದ್ದರೆ ರಾಜ್ಯ ಉದ್ಧಾರವಾಗಲ್ಲ ಅಂತ ಅಭಿಪ್ರಾಯಪಟ್ಟರು.

ಅಧಿಕಾರ ಇಲ್ಲದಿದ್ದಾಗ ಭ್ರಷ್ಟಾಚಾರದ ವಿರುದ್ಧ ಮಾತಾಡ್ತಾರೆ. ಆದರೆ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರದಲ್ಲಿ ತೊಗುತ್ತಾರೆ. ನಮ್ಮ ಮಠದ ಕಾಮಗಾರಿಯನ್ನು ಲ್ಯಾಂಡ್ ಆರ್ಮಿಗೆ ನೀಡಿತ್ತು. ಕಾಮಗಾರಿ ಆರಂಭಿಸಲು 25 ಲಕ್ಷ ಕಮಿಷನ್ ಕೇಳಿದ್ದಾರೆ. ಕಮಿಷನ್ ನೀಡದಿದ್ದರೆ ಕೆಲಸ ಆರಂಭಿಸಲ್ಲ ಎಂದಿದ್ದರು. ನಾನು 100 ಬಾರಿ ಭೇಟಿಯಾದರೂ ಅನುದಾನ ರಿಲೀಸ್ ಆಗಿಲ್ಲ. ನಮ್ಮನ್ನು ಸಾಲಗಾರರ ರೀತಿಯಲ್ಲಿ ಸುತ್ತಾಡಿಸುತ್ತಿದ್ದಾರೆ. ಹಳ್ಳಿಯಿಂದ ದಿಲ್ಲಿಯವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಆದರ್ಶ ವ್ಯಕ್ತಿ ಅಂತಾರೆ. ಆದರೆ ಅವರು ಏಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತಿಲ್ಲ ಅಂತ ಟಿವಿ9ಗೆ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ

Mukesh Ambani Birthday: ಭಾರತದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಬಾಲ್ಯ, ಐಷಾರಾಮಿ ನಿವಾಸದ ಕುರಿತ ಕುತೂಹಲಕರ ಮಾಹಿತಿ

ಕಲಬುರಗಿಯಲ್ಲಿ 545 ಪಿಎಸ್‌ಐಗಳ ನೇಮಕಾತಿಯಲ್ಲಿ ಭಾರೀ ಅಕ್ರಮ; 8 ಜನ ಅರೆಸ್ಟ್, ಎಸ್ಕೇಪ್ ಆದವರಿಗಾಗಿ ತಲಾಶ್

Published On - 9:15 am, Tue, 19 April 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ