AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹ್ವಾನ ಪತ್ರಿಕೆಯಲ್ಲಿ ಸ್ವಾಮೀಜಿ ಹೆಸರಿಲ್ಲ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭುಗಿಲೆದ್ದ ಭಿನ್ನಮತ

ಶ್ರೀಗಳು ಮುಂಡರಗಿ ತಾಲೂಕು ಪರಿಷತ್ತಿನ ಕಟ್ಟಡ ನಿರ್ಮಾಣಕ್ಕೆ 6 ಗುಂಟೆ ಜಾಗ ದಾನವಾಗಿ ನೀಡಿದ್ದಾರೆ. ನಾಡೋಜ ಬಿರುದು ಪಡೆದಿರುವ ಜಿಲ್ಲೆಯ ಏಕೈಕ ವ್ಯಕ್ತಿಯೂ ಹೌದು. ಶ್ರೀಗಳನ್ನು ಸಮ್ಮೇಳನಕ್ಕೆ ಆಹ್ವಾನಿಸದಿರುವುದು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

ಆಹ್ವಾನ ಪತ್ರಿಕೆಯಲ್ಲಿ ಸ್ವಾಮೀಜಿ ಹೆಸರಿಲ್ಲ: ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭುಗಿಲೆದ್ದ ಭಿನ್ನಮತ
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳದ ದೃಶ್ಯ
preethi shettigar
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Feb 28, 2021 | 2:05 PM

Share

ಗದಗ: ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಂಡರಗಿ ಅನ್ನದಾನೇಶ್ವರ ಸಂಸ್ಥಾನ ಮಠದ ನಾಡೋಜ ಡಾ. ಅನ್ನದಾನೀಶ್ವರ ಸ್ವಾಮೀಜಿಯನ್ನು ಆಹ್ವಾನಿಸದ ವಿಚಾರ ದೊಡ್ಡ ಚರ್ಚೆಯಾಗುತ್ತಿದೆ. ಸಾಹಿತ್ಯ ಬಳಗದಲ್ಲಿ ಇದೇ ಕಾರಣಕ್ಕೆ ಒಡಕುಂಟಾಗಿದೆ. ಸ್ವಹಿತಾಸಕ್ತಿ ಹಿನ್ನೆಲೆಯಲ್ಲಿ ಎರಡು ಮೂರು ಬಾರಿ ಜಿಲ್ಲಾ ಪರಿಷತ್ತಿನಿಂದ ಶ್ರೀಗಳಿಗೆ ಅವಮಾನಿಸಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಕಾರಣದಿಂದ ಇಂದು ನಡೆದ ಸಮ್ಮೇಳನದಲ್ಲಿ ಶ್ರೀಗಳು ಭಾಗಿಯಾಗಿಲ್ಲ. ಹೀಗಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಿನ್ನಮತ ಭುಗಿಲೆದ್ದಿದೆ.

ನಾಡೋಜ ಅನ್ನದಾನೇಶ್ವರ ಶ್ರೀಗಳನ್ನು ಆಹ್ವಾನಿಸದೇ ಇರುವುದಕ್ಕೆ ಸಾಹಿತ್ಯ ಬಳಗದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಸಾಹಿತ್ಯ ಪರಿಷತ್ತಿನ ಕೆಲ ಸದಸ್ಯರಿಂದ ರಾಜೀನಾಮೆ ಬೆದರಿಕೆ ಕೂಡ ಬಂದಿದೆ. ಆಗ ಎಚ್ಚೆತ್ತು ಮತ್ತೊಮ್ಮೆ ಆಹ್ವಾನ ಪತ್ರಿಕೆ ಮರು ಪ್ರಕಟಿಸಲಾಗಿತ್ತು. ಆದರೆ ಈ ಯಡವಟ್ಟಿನ ರಾಜಕೀಯವೇ ಬೇಡ ಎಂದು ನಾಡೋಜ ಡಾ. ಅನ್ನದಾನೀಶ್ವರ ಶ್ರೀಗಳು ಇಂದು ಸಮ್ಮೇಳನದಲ್ಲಿ ಭಾಗಿಯಾಗಿಲ್ಲ. ಅಷ್ಟೇ ಅಲ್ಲ ಸಾಹಿತ್ಯ ಸಮ್ಮೇಳನದ ರಾಜಕೀಯ ರಾಡಿಯ ಗುದ್ದಾಟದಲ್ಲಿ ಜಿಲ್ಲೆಯ ಬಹುತೇಕ ಮಠಾಧೀಶರು ಭಾಗಿಯಾಗಿಲ್ಲ. ಇದು ಸಾಕಷ್ಟು ಸಾಹಿತ್ಯಾಸಕ್ತರ ಅಸಮಾಧಾನಕ್ಕೆ ಕಾರಣವಾಗಿದೆ.

ಮುಂಡರಗಿ ಅನ್ನದಾನೀಶ್ವರ ಸ್ವಾಮೀಜಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ನೂರಾರು ಸಾಹಿತ್ಯ ಕೃತಿಗಳು ಹಾಗೂ ಗ್ರಂಥಗಳನ್ನು ರಚಿಸಿದ್ದಾರೆ. ಅಂಥವರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಪ್ರಕಟಿಸದಿರುವುದಕ್ಕೆ ಸಾಹಿತ್ಯ ಬಳಗದಲ್ಲಿ ಭಿನ್ನಮತ ಉಂಟಾಗಿದೆ. ಶ್ರೀಗಳಿಗೆ ಅವಮಾನಿಸಲಾಗಿದೆ ಎಂದು ಮುಂಡರಗಿ ಅನ್ನದಾನೀಶ್ವರ ಸಂಸ್ಥಾನ ಮಠದ ನರಸಾಪುರದ ಶಾಖಾ ಮಠದ ಶ್ರೀಗಳಾಗಿರುವ ಶ್ರೀ ವೀರೇಶ್ವರ ದೇವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

kannada sahitya parishat 1

ಗದಗದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಶ್ರೀಗಳು ಮುಂಡರಗಿ ತಾಲೂಕು ಪರಿಷತ್ತಿನ ಕಟ್ಟಡ ನಿರ್ಮಾಣಕ್ಕೆ 6 ಗುಂಟೆ ಜಾಗ ದಾನವಾಗಿ ನೀಡಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿಯೇ ‘ನಾಡೋಜ’ ಬಿರುದನ್ನು ಪಡೆದಿರುವ ಏಕೈಕ ವ್ಯಕ್ತಿಯಾಗಿರುವ ಸ್ವಾಮೀಜಿಗಳಿಗೆ ಜಿಲ್ಲಾ ಸಾಹಿತ್ಯ ಪರಿಷತ್ತು ಅವಮಾನ ಮಾಡಿದೆ. ಜೊತೆಗೆ ಸುಮಾರು 100 ಕ್ಕೂ ಹೆಚ್ಚು ಗ್ರಂಥಗಳನ್ನು ಶ್ರೀಗಳು ರಚಿಸಿದ್ದಾರೆ. ಶ್ರೀಗಳ ಕೆಲಸದ ಬಗ್ಗೆಯೇ ಅಧ್ಯಯನ ಮಾಡಿರುವ ಮೂವರು ಪಿಎಚ್​ಡಿ ಪಡೆದಿದ್ದಾರೆ. ಇನ್ನು ಈ ಹಿಂದೆಯೂ ಸಹ ಕೊರೊನಾ ಸಮಯದಲ್ಲಿ ಸಮ್ಮೇಳನ ಆಯೋಜನೆ ಮಾಡಲಾಗಿದ್ದು, ಆ ವೇಳೆಯೂ ಸಹ ಆಮಂತ್ರಣ ಪತ್ರಿಕೆಯಲ್ಲಿ ಶ್ರೀಗಳ ಹೆಸರು ಪ್ರಕಟಿಸರಲಿಲ್ಲ. ಎರಡನೇ ಬಾರಿಗೆ ಇದೇ ತಪ್ಪನ್ನ ಪುನಃ ಮಾಡಿ ಜಿಲ್ಲಾ ಸಾಹಿತ್ಯ ಪರಿಷತ್ತು ಶ್ರೀಗಳ ಘನತೆಗೆ ದಕ್ಕೆ ತಂದಿದೆ ಎಂದು ಅನ್ನದಾನೀಶ್ವರ ಶ್ರೀಗಳ ಶಿಷ್ಯರಾದ ವಿರೇಶ್ವರ ದೇವ್ರು ಅಸಮಾಧಾನ ಹೊರಹಾಕಿದ್ದಾರೆ.

 kannada sahitya parishat

ಅನ್ನದಾನೇಶ್ವರ ಸಂಸ್ಥಾನ ಮಠದ ನಾಡೋಜ ಡಾ. ಅನ್ನದಾನೀಶ್ವರ ಮಹಾಸ್ವಾಮಿಜಿ

ಸದ್ಯ ಆಮಂತ್ರಣ ಪತ್ರಿಕೆಯನ್ನ ಮರು ಪ್ರಕಟಿಸಿ ಶ್ರೀಗಳಿಗೆ ಆಹ್ವಾನ ನೀಡಲಾಗಿದೆ. ಸಮಾರೋಪ ಸಮಾರಂಭಕ್ಕೆ ಸಾನ್ನಿಧ್ಯ ವಹಿಸಿಕೊಳ್ಳಲು ಮನವಿ ಮಾಡಿಕೊಳ್ಳಲಾಗಿದೆ. ಪೂಜ್ಯರಿಗೆ ಅವಮಾನಿಸುವುದು ನಮ್ಮ ಉದ್ದೇಶ ಆಗಿರಲಿಲ್ಲ ಆದರೆ ಕಣ್ತಪ್ಪಿನಿಂದಾಗಿ ಈ ರೀತಿ ಆಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶರಣು ಗೋಗೇರಿ ಹೇಳಿದ್ದಾರೆ.

ಸದ್ಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬಿರುಕು ಮೂಡಿದ್ದು, ಮುಂಬರುವ ಸಾಹಿತ್ಯ ಪರಿಷತ್ತಿನ ಚುನಾವಣೆ ಹಿನ್ನೆಲೆಯಲ್ಲಿಯೇ ಸ್ವಹಿತಾಸಕ್ತಿ ಪ್ರದರ್ಶನ ನಡೆಯುತ್ತಿದೆ ಎನ್ನುವ ಬಲವಾದ ಆರೋಪ ಕೇಳಿಬರುತ್ತಿದೆ.ಒಟ್ಟಿನಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೆ ಆದ ಕೊಡುಗೆ ನೀಡಿರುವ ಶ್ರೀಗಳಿಗೆ ಜಿಲ್ಲಾ ಸಾಹಿತ್ಯ ಪರಿಷತ್ತು ಸರಿಯಾದ ಗೌರವ ನೀಡಿಲ್ಲ ಎನ್ನುವುದು ಸದ್ಯ ಸಾರ್ವಜನಿಕ ವಲಯದಲ್ಲಿ ಕೇಳಿವರುತ್ತಿರುವ ಮಾತು.

ಇದನ್ನೂ ಓದಿ: ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಮಾರ್ಚ್​ 9ರ ಬಳಿಕ ಹೊಸ ದಿನಾಂಕ ನಿಗದಿ: ಅರವಿಂದ ಲಿಂಬಾವಳಿ

Published On - 2:02 pm, Sun, 28 February 21

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್ ಪಲ್ಟಿ, ಓರ್ವ ಸಾವು
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ