AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಬಳಿಕ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗ್ತಾರೆ: ಕೆಎಸ್​ ಈಶ್ವರಪ್ಪ

ಕೇಂದ್ರ ಸರ್ಕಾರದಿಂದ ಸಿಬಿಐ, ಐಟಿ, ಇಡಿ ದುರ್ಬಳಕೆ ಆರೋಪ ವಿಚಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಚಿವ ಕೆಎಸ್​ ಈಶ್ವರಪ್ಪ, ಲೋಕಸಭೆ ಚುನಾವಣೆ ಬಳಿಕ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್​​ ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ. ಡಿಕೆ ಶಿವಕುಮಾರ್​​ಗೆ ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿದೆ. ಆದರೆ ಎಫ್​ಐಆರ್​ ವಿತ್ ಡ್ರಾ ಮಾಡಿಲ್ಲ ಎಂದಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ಡಿಕೆ ಶಿವಕುಮಾರ್ ಮತ್ತೆ ಜೈಲಿಗೆ ಹೋಗ್ತಾರೆ: ಕೆಎಸ್​ ಈಶ್ವರಪ್ಪ
ಮಾಜಿ ಸಚಿವ ಕೆ ಎಸ್ ಈಶ್ವರಪ್ಪ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 30, 2023 | 7:22 PM

Share

ಗದಗ, ನವೆಂಬರ್​​ 30: ಲೋಕಸಭೆ ಚುನಾವಣೆ ಬಳಿಕ ಮತ್ತೆ ಡಿಸಿಎಂ ಡಿಕೆ ಶಿವಕುಮಾರ್​​ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ (KS Eshwarappa) ಬಾಂಬ್​ ಸಿಡಿಸಿದ್ದಾರೆ. ಕೇಂದ್ರ ಸರ್ಕಾರದಿಂದ ಸಿಬಿಐ, ಐಟಿ, ಇಡಿ ದುರ್ಬಳಕೆ ಆರೋಪ ವಿಚಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಮನೆಯಲ್ಲಿ ಸಿಬಿಐ ರೇಡ್ ಆದಾಗ ನೂರಾರು ಕೋಟಿ ರೂ. ಅಕ್ರಮ‌ ದಾಖಲೆಗಳು ಸಿಕ್ತು. ವಿಚಾರಣೆ ಮುಗಿದು ಚಾರ್ಜಶಿಟ್ ಹಾಕುವಂಥ ಸಂದರ್ಭ ಇತ್ತು. ತಮ್ಮ ಕೈಯಲ್ಲಿ ಸರ್ಕಾರ ಇದೆ ಅಂತಾ ಹೈಕಮಾಂಡ್ ಒತ್ತಡಕ್ಕೆ ಒಳಗಾಗಿದ್ದರು ಎಂದಿದ್ದಾರೆ.

ಹೈಕಮಾಂಡ್ ಕೈಗೊಂಬೆಯಾಗಿ ಡಿಕೆ ಶಿವಕುಮಾರ್​ ಮೇಲಿನ ಕೇಸನ್ನು ವಿತ್ ಡ್ರಾ ಮಾಡಿದರು. ತಾತ್ಕಾಲಿಕ ರಿಲೀಫ್ ಅಷ್ಟೇ ಸಿಕ್ಕಿದೆ. ಆದರೆ ಎಫ್​ಐಆರ್​ ವಿತ್ ಡ್ರಾ ಮಾಡಿಲ್ಲ. ಲೋಕಸಭೆ ಚುನಾವಣೆ ಬಳಿಕ ಮತ್ತೆ  ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಆಂತರಿಕ‌ ಕಿತ್ತಾಟದಿಂದ ರಾಜ್ಯ ಸರ್ಕಾರದ ಆಡಳಿತ ಅಯೋಮಯವಾಗಿದೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕೆ

ಐಟಿ, ಇಡಿ, ಸಿಬಿಐ ಇವೆಲ್ಲ ಸ್ವಾಯತ್ತ ಸಂಸ್ಥೆಗಳು. ಹಾಗಾದರೆ ಕಾಂಗ್ರೆಸ್‌ನಲ್ಲಿದ್ದು ಎಷ್ಟು ಬೇಕಾದರೂ ಲೂಟಿ‌ ಮಾಡಬಹುದಾ. ಯಾವುದೇ‌ ಕಾರಣಕ್ಕೂ ಕಾಂಗ್ರೆಸ್​ನವರನ್ನು ಮುಟ್ಟಬಾರದು ಅಂತ‌ ಇದೆಯಾ ಎಂದು ಪ್ರಶ್ನಿಸಿದ್ದಾರೆ. ಇಡೀ ದೇಶದಲ್ಲಿ ಸಿಬಿಐನವರು ಎಲ್ಲ ಪಕ್ಷದವರನ್ನ ಮುಟ್ಟಿದ್ದಾರೆ. ಸಾವಿರಾರು‌ ಕೋಟಿ ರೂ. ಸಿಗುತ್ತಿರುವುದು ಕಾಂಗ್ರೆಸ್​ನಲ್ಲಿ ಎಂದು ಕಿಡಿಕಾರಿದ್ದಾರೆ.

ಜಗದೀಶ್ ಶೆಟ್ಟರ್ ವಾಪಸ್ ಬಿಜೆಪಿಗೆ ಬರುತ್ತಾರೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಬಿಜೆಪಿಗೆ ಬರಬೇಕು ಎನ್ನುವ ಅಪೇಕ್ಷೆಯಿದೆ. ಜಗದೀಶ ಶೆಟ್ಟರ್​ ನನ್ನ ಆತ್ಮೀಯ ಸ್ನೇಹಿತ. ಅವರಪ್ಪ ಕೂಡ ಬಿಜೆಪಿಯಲ್ಲಿದ್ದವರು. ಜನಸಂಘದಿಂದ ಕಾಲದಿಂದಲೂ‌ ಬಂದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಇನ್ನೇನು ಸ್ವಲ್ಪ ದಿನಕ್ಕೆ ನಮ್ಮ ಕಡೆಗೆ ಬರುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Loksabha Elections 2024: ಈ ಬಾರಿ ಪ್ರತಾಪ್ ಸಿಂಹಗೆ ಕೈತಪ್ಪುತ್ತಾ ಮೈಸೂರು ಲೋಕಸಭಾ ಟಿಕೆಟ್?

ಕರ್ನಾಟದಲ್ಲಿ ಕಾಂಗ್ರೆಸ್ ಬಿಟ್ಟರೆ ದೇಶದಲ್ಲಿ ಎಲ್ಲಿದೆ. ಅಲ್ಲೊಂದು,‌ ಇಲ್ಲೊಂದು, ಮತ್ತೊಂದು ಅಂತ ಹುಡುಕಬೇಕಷ್ಟೇ. ಕಾಂಗ್ರೆಸ್ ಹೋಗಿದ್ದಕ್ಕಾದರೂ ಶೆಟ್ಟರ್​ ಕಾಂಗ್ರೆಸ್ ಪರವಾಗಿ ಮಾತನಾಡಬೇಕು. ಕಾಂಗ್ರೆಸ್ ಹೋಗಿರೋ ಶೆಟ್ಟರ ಬಿಜೆಪಿಯನ್ನ ಹೊಗಳೋಕಾಗುತ್ತಾ? ನನಗಂತೂ ಜಗದೀಶ ಶೆಟ್ಟರ್ ಬಿಜೆಪಿಗೆ ಬರುವ ಅಪೇಕ್ಷೆ ಇದೆ. ಅವರು ಬಂದರೆ ಬಹಳ ಸಂತೋಷ.

ಶೆಟ್ಟರ ಕಾಂಗ್ರೆಸ್​ಗೆ ಹೋದಾಗ ನನಗೆ ತುಂಬಾ ನೋವಾಗಿತ್ತು. ಬಹಿರಂಗವಾಗಿ ಪತ್ರವನ್ನೂ ಬರೆದಿದ್ದೆ. ನಿಮ್ಮ ತಂದೆ ಸ್ವರ್ಗದಲ್ಲಿದ್ದಾರೆ. ನೀವು ಕಾಂಗ್ರೆಸ್​ಗೆ ಹೋದಮೇಲೆ ನಿಮ್ಮ ತಂದೆ ಆತ್ಮಕ್ಕೆ ಶಾಂತಿ ಸಿಗುತ್ತಾ? ಗೋಹತ್ಯೆ ನಿಷೇಧ, ಮತಾಂತರ ಬಗ್ಗೆ ನಿವೇನು ಮಾತಾಡ್ತೀರಿ ಎಂದು ಪ್ರಶ್ನಿಸಿದ್ದರು.

ರಾಜ್ಯ ಸರ್ಕಾರ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಭೀಕರ ಬರ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೂರು ರೂ. ಕೂಡ ಬರ ಪರಿಹಾರ ಬಿಡುಗಡೆ ಮಾಡಿಲ್ಲ. ಗದಗ ಡಿಸಿ ವೈಶಾಲಿ ಅವ್ರೇ ಹೇಳಿದ್ದಾರೆ. ಗದಗ ಡಿಸಿ ಜೊತೆ ನಾನು ಮಾತನಾಡಿದ್ದೇನೆ. ಬರ ಪರಿಹಾರ ಬಂದಿಲ್ಲ ಅಂತ ಹೇಳಿದ್ದಾರೆ. ಶಿವಮೊಗ್ಗಾ ತಾಲೂಕಿಗೂ ಕೇಳಿದ್ದೇನೆ ಅಲ್ಲೂ ಬಂದಿಲ್ಲ ಎಂದಿದ್ದಾರೆ.

ಗ್ಯಾರಂಟಿಗಳಿಗೆ ದುಡ್ಡು ಹಾಕಿ ಮರ್ಯಾದೆ ಉಳಿಸಿಕೊಳ್ಳು ಕಷ್ಟ ಆಗಿದೆ. ಲೋಕಸಭೆ ಚುನಾವಣೆವರೆಗೂ ಹೇಗಾದರೂ ಮಾಡಿ‌ ಮರ್ಯಾದೇ ಉಳಿಸಿಕೊಳ್ಳಬೇಕು ಅಂತ ಒದ್ದಾಡುತ್ತಿದ್ದಾರೆ. ಬರದಲ್ಲಿ ಜನ ಸಾಯಿಲಿ, ನೇಣು ಹಾಕಿಕೊಂಡು ಸಾಯಿಲಿ ರೈತ್ರು ಏನೂ ಸಂಬಂಧ ಇಲ್ಲ. ವಿಧಾನಸಭೆ ಮೋಸ ಮಾಡಿ ಗೆದ್ದಿದ್ದೇವೆ. ಇದೇ ಮೋಸ ಲೋಕಸಭೆಗೆ ತೋರಿಸಿ ಜನ ಸಾಯಿಲಿ ಅಂತಾರೆ. ಅಲ್ಲಿವರೆಗೂ ಸರ್ಕಾರ ಇರುತ್ತೋ ಇಲ್ವೋ ಗೋತ್ತಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ