AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag crime: ಪ್ರೇಮ ವಿವಾಹವಾಗಿದ್ದ ವೈದ್ಯೆ ಆತ್ಮಹತ್ಯೆ: ಮಗಳ ಸಾವಿಗೆ ವೈದ್ಯ ಗಂಡನೇ ಕಾರಣ ಅಂತ ಪೋಷಕರ ಆರೋಪ, ನಡೆದಿದ್ದೇನು?

ಗದಗ: ನಿತ್ಯವೂ ಗಂಡ ಹೆಂಡತಿ ಜಗಳ ಆಡ್ತಿದ್ರಂತೆ . ನಿನ್ನೆಯೂ ಜಗಳಾವಾಡಿದ್ದಾರಂತೆ. ಆದ್ರೆ ಗಂಡ ಹೆಂಡತಿ ನಡುವಿನ ಜಗಳ ಪತ್ನಿ ಡಾ. ಗೀತಾ ಸಾವಿನಲ್ಲಿ ಅಂತ್ಯವಾಗಿದೆ. ಸಾವಿನ ಸುದ್ದಿ ತಿಳಿದು ಗೀತಾ ಕುಟುಂಬಸ್ಥರು ಹುಲಕೋಟಿಗೆ ದೌಡಾಯಿಸಿದ್ದಾರೆ. ಮಗಳ ಸಾವಿಗೆ ಪತಿ ಡಾ ಕುಶಾಲನೇ ಕಾರಣ ಅಂತ ಆರೋಪಿಸಿದ್ದಾರೆ.

Gadag crime: ಪ್ರೇಮ ವಿವಾಹವಾಗಿದ್ದ ವೈದ್ಯೆ ಆತ್ಮಹತ್ಯೆ: ಮಗಳ ಸಾವಿಗೆ ವೈದ್ಯ ಗಂಡನೇ ಕಾರಣ ಅಂತ ಪೋಷಕರ ಆರೋಪ, ನಡೆದಿದ್ದೇನು?
ಪ್ರೇಮ ವಿವಾಹವಾಗಿದ್ದ ವೈದ್ಯೆ ಆತ್ಮಹತ್ಯೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Oct 26, 2023 | 2:54 PM

Share

ಅವರಿಬ್ಬರೂ ವೈದ್ಯರು. ವ್ಯಾಸಂಗ ಮಾಡುವಾಗಲೇ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತಂತೆ. ಬಳಿಕ ಇಬ್ಬರು ಮದುವೆಯಾಗಿದ್ದಾರೆ (love marriage). ಇಬ್ಬರು ಸರ್ಕಾರಿ ವೈದ್ಯರಾಗಿದ್ರು. ಸುಂದರ ಸಂಸಾರಕ್ಕೆ ಎರಡು‌ ಮುದ್ದಾದ ಮಕ್ಕಳಿದ್ರು. ಆದ್ರೆ ಯಾರ ವಕ್ರದೃಷ್ಠಿ ಬಿತ್ತೋ ಗೋತ್ತಿಲ್ಲ. ಪದೇ ಪದೇ ಗಂಡ ಹೆಂಡತಿ ನಡುವೆ ಜಗಳ ಆಗ್ತಾಯಿತ್ತು. ಆದ್ರೆ, ಇವತ್ತು ಗುರುವಾರ ಹೆಂಡತಿ ಸಾವಿನಲ್ಲಿ ಜಗಳ ಅಂತ್ಯವಾಗಿದೆ. ಆದ್ರೆ, ಗಂಡನೇ ಕೊಂದಿದ್ದಾನೆ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಮನೆಯಲ್ಲಿ ವೈದ್ಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ( suicide) ಮಾಡಿಕೊಂಡಿದ್ದಾಳೆ. ವೈದ್ಯೆಯ ಸಾವಿನ ಸುತ್ತ ಹತ್ತಾರು ಅನುಮಾನ ಮೂಡುತ್ತಿವೆ. ಕುಟುಂಬಸ್ಥರ ಆಕ್ರೋಶ, ಕಣ್ಣೀರು. ಪೊಲೀಸರ ಪರಿಶೀಲನೆ. ಹೌದು ಈ ಎಲ್ಲ ದೃಶ್ಯಗಳು ಕಂಡಿದ್ದು, ಗದಗ ತಾಲೂಕಿನ (Gadag) ಹುಲಕೋಟಿ (hulkoti) ಗ್ರಾಮದಲ್ಲಿ.

ಹುಲಕೋಟಿ ಗ್ರಾಮದ ಮನೆಯಲ್ಲಿ ಸರ್ಕಾರಿ ವೈದ್ಯೆ ಡಾ. ಗೀತಾ ಕೋರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು ಎಂದು ವಿಷಯ ಹುಲಕೋಟಿ ಗ್ರಾಮದಲ್ಲಿ ಹಬ್ಬುತ್ತಿದ್ದಂತೆ ನೂರಾರು ಜನ್ರು ಜಮಾಯಿಸಿದ್ರು. ಅಂದ್ಹಾಗೆ ಬಿಎಎಂಎಸ್ ಮುಗಿಸಿದ್ದ ಡಾ. ಗೀತಾ ಗದಗನಲ್ಲಿ (ಆರ್‌ಬಿ‌ಎಸ್‌ಕೆ) ರಾಷ್ಟ್ರೀಯ ಬಾಲ ಸಾಂಸ್ಥೆ ಕಾರ್ಯಕ್ರಮದ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪತಿ ಡಾ. ಕುಶಾಲ್ ಕೋರಿ ಬಿಎಎಂಎಸ್ ಗದಗ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಆಯುಷ್ಯ‌ ಇಲಾಖೆ ವೈದ್ಯಾಧಿಕಾರಿ ಆಗಿ ಸೇವೆ ಮಾಡ್ತಾಯಿದ್ದಾರೆ. ಡಾ. ಗೀತಾ ಮತ್ತು ಡಾ. ಕುಶಾಲ್ ಇಬ್ಬರೂ ಫ್ರೇಂಡ್ಸ್. ಗೆಳೆತನ ಪ್ರೀತಿಗೆ ತಿರುಗಿ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರಂತೆ. ಬಳಿಕ ಮದುವೆಯಾಗಿದ್ದಾರೆ. ಸುಂದರ ಸಂಸಾರ ಮಾಡಿದ್ದಾರೆ. ಸುಂದರ ಸಂಸಾರಕ್ಕೆ ಎರಡು ಕಣ್ಣುಗಳಿದ್ದಂತೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಇತ್ತಿಚೀಗೆ ಅದ್ಯಾಕೋ ಇಬ್ಬರ ನಡುವೆ ವಿರಸ ಉಂಟಾಗಿತ್ತಂತೆ.

Also Read: ಪುರುಷರು ತಾವು ಪ್ರೀತಿಸಿದವರನ್ನು ಮದುವೆಯಾಗುತ್ತಾರಾ? ಇಲ್ಲವಾ? ಶುರುವಾಗಿದೆ ಹೊಸ ಚರ್ಚೆ

ಹೀಗಾಗಿ ನಿತ್ಯವೂ ಗಂಡ ಹೆಂಡತಿ ನಡುವೆ ಜಗಳ ಆಗ್ತಾಯಿತ್ತಂತೆ. ನಿನ್ನೆಯೂ ಸಾಕಷ್ಟು ಜಗಳಾವಾಡಿದ್ದಾರಂತೆ. ಆದ್ರೆ ಈಗ ಗಂಡ ಹೆಂಡತಿ ನಡುವಿನ ಜಗಳ ಪತ್ನಿ ಡಾ. ಗೀತಾ ಸಾವಿನಲ್ಲಿ ಅಂತ್ಯವಾಗಿದೆ. ಸಾವಿನ ಸುದ್ದಿ ತಿಳಿದು ಗೀತಾ ಕುಟುಂಬಸ್ಥರು ಹುಲಕೋಟಿಗೆ ದೌಡಾಯಿಸಿದ್ದಾರೆ. ಮಗಳ ಸಾವಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಗಳ ಸಾವಿಗೆ ಪತಿ ಡಾ ಕುಶಾಲನೇ ಕಾರಣ ಅಂತ ಆರೋಪಿಸಿದ್ದಾರೆ.

ಮಗಳ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪುಷ್ಠಿ ಎಂಬಂತೆ ಗೋಡೆ ಮೇಲಿನ ಬರಹ ಸಾಕಷ್ಟು ಅನುಮಾನ ಹುಟ್ಟಿಸಿದೆ. ಸಾವಿನ ಬಗ್ಗೆ ಬರೆದು ಯುವ ವೈದ್ಯೆ ನೇಣಿಗೆ ಶರಣಾಗಿದ್ದಾಳೆ. ಆದ್ರೆ, ಪತಿ ಡಾ ಕುಶಾಲ್ ಕೊಲೆ ಮಾಡಿದ್ದಾನೆ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಗೋಡೆಯ ಮೇಲೆ ಸಾವಿನ ಬಗ್ಗೆ ಬರಹವಿದ್ದು, ಅದನ್ನು ಬರೆದವರು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.

ಗದಗ ಗ್ರಾಮೀಣ ಪೊಲೀಸ್ರು ಸಾವಿನ‌ ಬಗ್ಗೆ ತನಿಖೆ ನಡೆಸಿದ್ದಾರೆ. ವೈದ್ಯೆಯ ಸಾವು ಆತ್ಮಹತ್ಯೆಯೋ.. ಕೊಲೆಯೋ ಅಂತ ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ. ಆದ್ರೆ, ಇಬ್ಬರೂ ವೈದ್ಯರಾಗಿದ್ದವರು, ಕಲಿತವರು, ತಿಳಿದವರಾಗಿದ್ರು. ಇಬ್ಬರೂ ತಮ್ಮ ಮುದ್ದಾದ ಮಕ್ಕಳ ಬಗ್ಗೆ ವಿಚಾರ ಮಾಡಿಲ್ಲ. ಗಂಡ ಹೆಂಡತಿ ಜಗಳ ಈಗ ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಆದ್ರೆ, ಏನೂ ಅರಿಯದ, ತಪ್ಪು ಮಾಡದ ಇಬ್ಬರು ಮಕ್ಕಳು ಅನಾಥವಾಗಿರುವುದು ವಿಪರ್ಯಾಸವೇ ಸರಿ.

ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!