AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಸ್ವಾಮೀಜಿಗಾಗಿ ಎರಡು ಸಮಾಜದ ನಡುವೆ ವೈಮನಸ್ಸು: ಸಲ್ಲೇಖನ ವೃತ್ತ ಆರಂಭಿಸಿದ ಶ್ರೀಗಳು

ಲಕ್ಷ್ಮೇಶ್ವರ ತಾಲೂಕಿನ ಆದರಹಳ್ಳಿಯ ಗವಿಮಠದ ಸ್ವಾಮೀಜಿಗಾಗಿ ಎರಡು ಸಮಾಜದ ನಡುವೆ ವೈಮನಸ್ಸು ಉದ್ಭವಿಸಿದೆ.ಅಕ್ರಮವನ್ನು ಬಯಲು ಮಾಡಿದ್ದಕ್ಕೆ ತಮ್ಮನ್ನು ಮಠದಿಂದ ಹೊರಹಾಕಲಾಗಿದೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ. ಭಕ್ತರು ಮತ್ತು ಭೋವಿ ಸಮಾಜದ ನಡುವೆ ವೈಮನಸ್ಸು ಹೆಚ್ಚಾಗಿದ್ದು, ಸ್ವಾಮೀಜಿ ನ್ಯಾಯಕ್ಕಾಗಿ ಧರಣಿ ನಡೆಸುತ್ತಿದ್ದಾರೆ. ರಾಜಕೀಯ ಹಸ್ತಕ್ಷೇಪದ ಆರೋಪಗಳು ಕೇಳಿಬಂದಿವೆ.

ಗದಗ: ಸ್ವಾಮೀಜಿಗಾಗಿ ಎರಡು ಸಮಾಜದ ನಡುವೆ ವೈಮನಸ್ಸು: ಸಲ್ಲೇಖನ ವೃತ್ತ ಆರಂಭಿಸಿದ ಶ್ರೀಗಳು
ಕುಮಾರ್ ಮಹಾರಾಜ ಸ್ವಾಮೀಜಿ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Mar 08, 2025 | 1:03 PM

Share

ಗದಗ, ಮಾರ್ಚ್ 08: ಲಕ್ಷ್ಮೇಶ್ವರ (Laxmeshwar) ತಾಲೂಕಿನ ಆದರಹಳ್ಳಿ ಗ್ರಾಮದ ಐತಿಹಾಸಿಕ ಗವಿಮಠಕ್ಕೆ (Gavimath) ಕುಮಾರ್ ಮಹಾರಾಜ ಸ್ವಾಮೀಜಿಯವರನ್ನು ನೇಮಕ ಮಾಡಲಾಗಿದೆ. ಆದರೆ, ಸ್ವಾಮೀಜಿ ವಿರುದ್ಧ ಆರೋಪವೊಂದು ಕೇಳಿಬಂದಿದೆ. ಗವಿಮಠದ ಸುತ್ತಲೂ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಾರೆಂದು ಭೋವಿ ಸಮಾಜದವರ ವಿರುದ್ಧ ಸ್ವಾಮೀಜಿ ಪೊಲೀಸರಿಗೆ ದೂರು ನೀಡಿ ಅರೆಸ್ಟ್ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ವಾಮೀಜಿ, “ಅವರ ಅಕ್ರಮ ಬಯಲು ಮಾಡಿದಕ್ಕೆ ನನ್ನನ್ನು ಮಠದಿಂದ ಹೊರಕ್ಕೆ ಕಳಿಸಿದ್ದಾರೆ. ಇದರಲ್ಲಿ, ಸ್ಥಳೀಯ ರಾಜಕೀಯ ನಾಯಕನ ಕೈವಾಡವಿದೆ. ನಮ್ಮನ್ನು ಮಠದಿಂದ ಓಡಿಸಲು ಯತ್ನಿಸಲಾಗಿದೆ. ಹೀಗಾಗಿ, ನ್ಯಾಯ ಸಿಗುವವರಿಗೆ ನಾನು ಸೇವಾಲಾಲ್ ಮಂದಿರದಲ್ಲಿ ಧರಣಿ ಮಾಡುತ್ತೇನೆ. ಸಲ್ಲೇಖನ ವೃತ್ತ ಆರಂಭ ಮಾಡಿದ್ದೇನೆ” ಎಂದು ಸ್ವಾಮೀಜಿ ಹೇಳಿದ್ದಾರೆ.

“ಸ್ವಾಮೀಜಿ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮವನ್ನು ಬಯಲು ಮಾಡಿದ್ದಾರೆ. ಕಲ್ಲುಗಣಿಗಾರಿಕೆ, ಮರಳು ದಂಧೆ ಮಾಡುವವರ ವಿರುದ್ಧ ಹೋರಾಟ ಮಾಡಿದರು. ಹೀಗಾಗಿ, ಸ್ವಾಮೀಜಿ ಮೇಲೆ ವಿನಾಕಾರಣ ಒಂದು ಸಮುದಾಯದವರು ಆರೋಪ ಮಾಡುತ್ತಿದ್ದಾರೆ. ನಮಗೆ ಏನಾದರೂ ಸಮಸ್ಯೆಯಾದರೂ ಸ್ವಾಮೀಜಿ ಮುಂದೆ ಬರುತ್ತಿದ್ದರು. ರಾಜಕಾರಣಿಗಳು ಕೈವಾಡದಿಂದ ಹೀಗೆ ಮಾಡುತ್ತಿದ್ದಾರೆ. ನಮ್ಮ ಸ್ವಾಮೀಜಿಯನ್ನು ಮಠದಿಂದ ಹೊರಕ್ಕೆ ಹಾಕಿ, ಕೊಠಡಿಗೆ ಬೀಗ ಹಾಕಿದ್ದಾರೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡೆಸಿದ್ದಾರೆ.

ಇದನ್ನೂ ಓದಿ
Image
ಅಕ್ರಮ ಮರಳು ದಂಧೆಕೋರರ ಅಟ್ಟಹಾಸ: ಪ್ರಶ್ನೆ ಮಾಡಿದ ರೈತನಿಗೆ ಹಲ್ಲೆ
Image
ಗದಗ ಬೆಟಗೇರಿ ನಗರಸಭೆ ಅಧಿಕಾರಕ್ಕೆ ಬಿಜೆಪಿ, ಕಾಂಗ್ರೆಸ್ ಪೈಪೋಟಿ
Image
ಗದಗನಲ್ಲಿ ಮೀಟರ್ ಬಡ್ಡಿ ದಂಧೆಕೋರರ ಮನೆ ಮೇಲೆ ಪೊಲೀಸರ ದಾಳಿ, 9 ಮಂದಿ ವಶಕ್ಕೆ
Image
ಮರ್ಯಾದೆ ಹತ್ಯೆ ಕೇಸ್​: 6 ವರ್ಷದ ಬಳಿಕ 4 ಅಪರಾಧಿಗಳಿಗೆ ಗಲ್ಲು ಶಿಕ್ಷೆ 

“ಕುಮಾರ ಮಹಾರಾಜ ಸ್ವಾಮೀಜಿಯನ್ನು ಗವಿಮಠಕ್ಕೆ ನಾವೇ ಕರೆದುಕೊಂಡು ಬಂದಿದ್ದೇವೆ. ಆಗ ಬಂಜಾರ ಸಮಾಜ ವಿರೋಧ ಮಾಡಿತ್ತು. ಆದರೂ, ಸ್ವಾಮೀಜಿ ಇರಲಿ ಅಂತ ಕರೆದುಕೊಂಡು ಬಂದು ಲಕ್ಷಾಂತರ ರೂಪಾಯಿ ದೇಣಿಗೆ ನೀಡಿದ್ದೇವೆ. ಅದರ ಲೆಕ್ಕ ಕೂಡ ಇಲ್ಲ. ಸ್ವಾಮೀಜಿ ಮಠವನ್ನು ಅಭಿವೃದ್ಧಿ ಮಾಡುವುದನ್ನು ಬಿಟ್ಟು ನಮ್ಮವರ ಮೇಲೆ ದೂರು ನೀಡಿ ಕಿರುಕುಳ ನೀಡುತ್ತಿದ್ದಾರೆ. ನಾವು ನೂರಾರು ವರ್ಷಗಳಿಂದ ಕಲ್ಲು ಒಡೆದು ಜೀವನ ಮಾಡುತ್ತಿದ್ದೇವೆ. ಈವಾಗ ನಮ್ಮ ಕುಲಕಸುಬವನ್ನು ಅಕ್ರಮ ಕಲ್ಲುಗಣಿಗಾರಿಕೆ ಅಂತ ದೂರು ನೀಡುತ್ತಿದ್ದಾರೆ. ಸ್ವಾಮೀಜಿ ಗ್ರಾಮದಲ್ಲಿ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಮಗೆ ಈ ಸ್ವಾಮೀಜಿ ಬೇಡ, ಹೀಗಾಗಿ ಅವರ ಕೊಠಡಿಗೆ ಬೀಗ್ ಹಾಕಿದ್ದೇವೆ ಎಂದು ಭೋವಿ ಸಮಾಜದ ತಿಮ್ಮವ್ವ ಹೇಳಿದ್ದಾರೆ.

ಇದನ್ನೂ ಓದಿ: ಬಾಲಕಿಯನ್ನು ಕರೆದ್ಯೊಯ್ದು ಸುಲೇಮಾನ್ ಅತ್ಯಾಚಾರ: ವಿಡಿಯೋ ಮಾಡಿದ ಅಲ್ತಾಫ್ ಅರೆಸ್ಟ್!

ಒಟ್ಟಿನಲ್ಲಿ, ಸ್ವಾಮೀಜಿಗಾಗಿ ಎರಡು ಸಮಾಜದ ನಡುವೆ ವೈಮನಸ್ಸು ಆರಂಭವಾಗಿದೆ. ಸ್ವಾಮೀಜಿ ನ್ಯಾಯ ಸಿಗುವವರಿಗೆ ಸಲ್ಲೇಖನ ವೃತ್ತ ಆರಂಭ ಮಾಡಿದ್ದಾರೆ. ಪರ ಹಾಗೂ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಸ್ವಾಮೀಜಿ ಕದನ ಎಲ್ಲಿಗೆ ಹೋಗಿ ತಲುಪುತ್ತದೆ ಕಾದು ನೋಡಬೇಕಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು