AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಷ್ಟು ವರ್ಷವಾದ್ರೂ ಕರ್ನಾಟಕ ಕನ್ನಡಮಯವಾಗಿಲ್ಲ; ಅಸಮಾಧಾನ ಹೊರಹಾಕಿದ ಸಿಎಂ

ಕನ್ನಡ ಭಾಷೆಗೆ ಪುರಾತನ ಇತಿಹಾಸಿ ಇದೆ. ಎಲ್ಲ ಭಾಷೆಗಳಲ್ಲೂ‌ ಕನ್ನಡವೂ‌ ಒಂದು ಹೆಮ್ಮೆ ಅನಿಸುತ್ತೆ. ಎಲ್ಲರೂ ಪ್ರತಿಜ್ಞೆ ಮಾಡಬೇಕು, ನಾನೆಲ್ಲಾ ಕನ್ನಡದಲ್ಲೇ ಮಾತನಾಡಬೇಕು, ಕಲಿಯಬೇಕೆಂದು. ಇಷ್ಟು ವರ್ಷವಾದ್ರೂ ಕರ್ನಾಟಕ ಇನ್ನು ಕನ್ನಡ ಮಯವಾಗಿಲ್ಲ ಎಂದು ಸಿಎಂ ಅಸಮಾಧಾನ ಹೊರಹಾಕಿದರು.

ಇಷ್ಟು ವರ್ಷವಾದ್ರೂ ಕರ್ನಾಟಕ ಕನ್ನಡಮಯವಾಗಿಲ್ಲ; ಅಸಮಾಧಾನ ಹೊರಹಾಕಿದ ಸಿಎಂ
ಸಿದ್ದರಾಮಯ್ಯ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Nov 03, 2023 | 5:34 PM

Share

ಗದಗ, ನ.03: ಕರ್ನಾಟಕ ರಾಜ್ಯ ನಾಮಕರಣಕ್ಕೆ 50ರ ಸಂಭ್ರಮ ಹಿನ್ನಲೆ ಗದಗ(Gadag) ನಗರದಲ್ಲಿ ಅದ್ಧೂರಿ ಕನ್ನಡ ಹಬ್ಬ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ(Siddaramaiah) ಅವರು ‘ ತ್ಯಾಗ ಬಲಿದಾನದ ಫಲವಾಗಿ ವಿಶಾಲ ಕರ್ನಾಟಕ ನೋಡುತ್ತಿದ್ದೇವೆ. ಈ ಸಂದರ್ಭದಲ್ಲಿ ಏಕೀಕರಣಕ್ಕಾಗಿ ಹೋರಾಟ ಮಾಡಿದ ಎಲ್ಲರನ್ನೂ ಸ್ಮರಿಸುತ್ತೇನೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷವಾಗಿದೆ‌. ಹೀಗಾಗಿ ಕರ್ನಾಟಕ ಸಂಭ್ರಮ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ನಿನ್ನೆ ಹಂಪಿಯಲ್ಲಿ ಆರಂಭ ಆಗಿದ್ದು, ಇಂದು ಗದಗ ಜಿಲ್ಲೆಗೆ ತಲುಪಿದೆ ಎಂದರು.

‘ನವೆಂಬರ್ 1 ನಮ್ಮೆಲ್ಲಾ ಹೆಮ್ಮೆಯ ದಿನ. 1956 ರಲ್ಲಿ ಭಾಷಾವಾರು ರಾಜ್ಯ ವಿಂಗಂಡನೆಯಾದಾಗ ಎಲ್ಲರನ್ನು ಒಗ್ಗೂಡಿಸಿ ರಾಜ್ಯ ರಚನೆ ಮಾಡಲಾಯಿತು. ಕನ್ನಡ ಮಾತನಾಡುವ ಜನ ಒಂದೂಗೂಡಿ ರಾಜ್ಯ ಏಕೀಕರಣ ಆಗಿದೆ. ಮೊದಲು ಮೈಸೂರ ರಾಜ್ಯ ಎಂದು ಕರೆಯಲಾಗುತ್ತಿತ್ತು. 1973 ರಲ್ಲಿ ಕರ್ನಾಟಕ ರಾಜ್ಯ ಎಂದು ಮರುನಾಮಕರಣ ಮಾಡಲಾಯಿತು. ತ್ಯಾಗ ಬಲಿದಾನ ಫಲವಾಗಿ ವಿಶಾಲ ಕರ್ನಾಟಕವನ್ನ ನಾವು ಇವತ್ತು ನೋಡುತ್ತೇವೆ. ಏಕೀರಣ ಹೋರಾಟ ಮಾಡಿದವರ ಎಲ್ಲರನ್ನೂ ಸ್ಮರಿಸುತೇನೆ ಎಂದು ಹೇಳಿದರು.

ಇದನ್ನೂ ಓದಿ:ಗದಗ: ಕರ್ನಾಟಕ ಸಂಭ್ರಮ ಮೆರವಣಿಗೆಯಲ್ಲಿ ಶಿವಕುಮಾರ್, ಸಿದ್ದರಾಮಯ್ಯರಿಂದ ‘ಅಂತರ’ ಕಾಯ್ದುಕೊಂಡಿದ್ದು ಆಕಸ್ಮಿಕವೋ?

ಅಂದಿನ‌ ಸಿಎಂ ದೇವರಾಜು ಅರಸು‌ ಅವರು ಮೈಸೂರಿನವರು ಆದರೂ ಮೈಸೂರ ರಾಜ್ಯ ಬದಲು ಮಾಡಿ‌ ಕರ್ನಾಟಕ ಎಂದು ನಾಮಕರಣ ಮಾಡಿದರು. ಅಂದು ಕೆ.ಎಚ್ ಪಾಟೀಲ್ ಸಚಿವರಾಗಿದ್ದರು. ದೇವರಾಜ್​ ಅರಸು, ಜಯಚಾಮರಾಜೇಂದ್ರೆ ಒಡೆಯರ್​ ಹಲವರು ಗದಗನಲ್ಲಿ‌ಜೋತಿ ಸ್ವೀಕಾರ ಮಾಡಿದರು. ಸಾಹಿತ್ಯ ಸಮ್ಮೆಳನದ ಅಧ್ಯಕ್ಷರಾಗಿದ್ದ ಕೆ.ಎಚ್ ಪಾಟೀಲ್​ ಅವರು ಕರ್ನಾಟಕ ರಾಜ್ಯ ಆಗಬೇಕು ಎOದು ಸಮ್ಮೇಳನದಲ್ಲಿ ನಿರ್ಣಯ ಮಾಡಿದರು. ಅಂದು ಕೆ ಎಚ್ ಪಾಟೀಲ್​, ಇಂದು ಅವರ ಪುತ್ರ ಎಚ್ ಪಾಟೀಲ್ ಈ ಕಾರ್ಯಕ್ರಮ‌ ಮಾಡಿದರು. ಅಷ್ಟೇ ಅಲ್ಲ, ಅಂದು‌ ಮೈಸೂರು ಜಿಲ್ಲೆಯ ದೇವರಾಜ್​ ಅರಸು ಅವರು ಸಿಎಂ ಆಗಿದ್ರು, ಈಗ ಅದೇ ಜಿಲ್ಲೆಯ ನಾನು ಸಿಎಂ ಆಗಿದ್ದೇನೆ ಎಷ್ಟು ಕಾಕತಾಳಿಯ ಎಂದರು.

ಭಾಷಣ ವೇಳೆ ಡಿಸಿಎಂ ಡಿಕೆ ಹೆಸರನ್ನೇ ಮರೆತ ಸಿಎಂ ಸಿದ್ದರಾಮಯ್ಯ

ಇನ್ನು ಭಾಷಣದ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ​ ಹೆಸರನ್ನೇ ಸಿಎಂ ಸಿದ್ದರಾಮಯ್ಯ ಮರೆತಿದ್ದಾರೆ. ಹೌದು, ಭಾಷಣ ಆರಂಭಿಸುವಾಗ ಗಣ್ಯರ ಹೆಸರನ್ನು ಪ್ರಸ್ತಾಪಿಸಿದ ಅವರು ‘ಈ ವೇಳೆ ಡಿ.ಕೆ.ಶಿವಕುಮಾರ್​ ಹೆಸರನ್ನೇ ಮರೆತಿದ್ದರು. ಕೂಡಲೇ ಭೈರತಿ ಸುರೇಶ್ ಹೋಗಿ ನೆನಪಿಸಿದ ಬಳಿಕ ಡಿಕೆ ಅವರ ಹೆಸರನ್ನು ಹೇಳಿದ್ದಾರೆ. ಶಿವಕುಮಾರ್ ಹೆಸರು ಹೇಳುತ್ತಿದ್ದಂತೆ ಜನರು ಘೋಷಣೆ ಕೂಗಿದ್ದಾರೆ.

ಇಷ್ಟು ವರ್ಷವಾದ್ರೂ ಕರ್ನಾಟಕ ಕನ್ನಡ ಮಯವಾಗಿಲ್ಲ

ಕನ್ನಡ ಭಾಷೆಗೆ ಪುರಾತನ ಇತಿಹಾಸಿ ಇದೆ. ಎಲ್ಲ ಭಾಷೆಗಳಲ್ಲೂ‌ ಕನ್ನಡವೂ‌ ಒಂದು ಹೆಮ್ಮೆ ಅನಿಸುತ್ತೆ. ಎಲ್ಲರೂ ಪ್ರತಿಜ್ಞೆ ಮಾಡಬೇಕು, ನಾನೆಲ್ಲಾ ಕನ್ನಡದಲ್ಲೇ ಮಾತನಾಡಬೇಕು, ಕಲಿಯಬೇಕೆಂದು. ಇಷ್ಟು ವರ್ಷವಾದ್ರೂ ಕರ್ನಾಟಕ ಇನ್ನು ಕನ್ನಡ ಮಯವಾಗಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಕನ್ನಡ ವಾತಾವರಣ ನಿರ್ಮಾಣ ಮಾಡಬೇಕು. ಎಲ್ಲಾದರೂ ಇರು ಹೇಗಾದರೂ ಇರು, ಮೊದಲು ಕನ್ನಡದವನಾಗಿರು ಎಂದು ಕುವೆಂಪು ಅವರು ಹೇಳಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Fri, 3 November 23

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ