AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು 41ನೇ ರೈತ ಹುತಾತ್ಮ ದಿನಾಚರಣೆ; ಗದಗದಲ್ಲಿ ಮತ್ತೆ ರೈತರ ರಣಕಹಳೆ

ಹುತಾತ್ಮ ರೈತ ಈರಪ್ಪ ಕೊಡ್ಲಿಕೊಪ್ಪ ಸ್ಮಾರಕಕ್ಕೆ ರೈತರು, ಮುಖಂಡರು, ರಾಜಕೀಯ ವ್ಯಕ್ತಿಗಳು ನಮನ ಸಲ್ಲಿಸುತ್ತಾರೆ. ಬಳಿಕ ಕಳಸಾ-ಬಂಡೂರಿ ಯೋಜನೆ ಜಾರಿಗೆ ರೈತರು ಹೋರಾಟಕ್ಕೆ ಇಳಿಯಲಿದ್ದಾರೆ.

ಇಂದು 41ನೇ ರೈತ ಹುತಾತ್ಮ ದಿನಾಚರಣೆ; ಗದಗದಲ್ಲಿ ಮತ್ತೆ ರೈತರ ರಣಕಹಳೆ
ಕಳೆದ ಬಾರಿ ನಡೆಸಿದ ಪ್ರತಿಭಟನೆ
TV9 Web
| Updated By: sandhya thejappa|

Updated on: Jul 21, 2021 | 10:30 AM

Share

ಗದಗ: ಇಂದು (ಜುಲೈ 21) 41ನೇ ರೈತ ಹುತಾತ್ಮರ ದಿನಾಚರಣೆ ಹಿನ್ನೆಲೆ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ಮತ್ತೆ ರೈತರ ರಣಕಹಳೆ ಮೊಳಗಲಿದೆ. ಹುತಾತ್ಮ ರೈತ ಈರಪ್ಪ ಕೊಡ್ಲಿಕೊಪ್ಪ ಸ್ಮಾರಕಕ್ಕೆ ರೈತರು, ಮುಖಂಡರು, ರಾಜಕೀಯ ವ್ಯಕ್ತಿಗಳು ನಮನ ಸಲ್ಲಿಸುತ್ತಾರೆ. ಬಳಿಕ ಕಳಸಾ-ಬಂಡೂರಿ ಯೋಜನೆ ಜಾರಿಗೆ ರೈತರು ಹೋರಾಟಕ್ಕೆ ಇಳಿಯಲಿದ್ದಾರೆ. ರೈತ ಸಂಪರ್ಕ ಕೇಂದ್ರದ ಬಳಿ ಬೃಹತ್ ಬಹಿರಂಗ ಸಭೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಲಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ಮಹಾದಾಯಿಗಾಗಿ ರೈತ ಸೇನಾ ಕರ್ನಾಟಕ, ಕರ್ನಾಟಕ ರೈತ ಸೇನಾ, ಕೆಪಿಆರ್​ಎಸ್​, ದಲಿತ ಸಂಘರ್ಷ ಸಮಿತಿ, ಸಿಐಟಿಯು, ಉತ್ತರ ಕರ್ನಾಟಕ ರೈತ ಸಂಘ, ಕಾರ್ಮಿಕ, ಕನ್ನಡಪರ ಸಂಘಟನೆಗಳ ಒಕ್ಕೂಟ, ಜನಾಂದೋಲನಗಳ ಮಹಾಮೈತ್ರಿ, ಕರ್ನಾಟಕ ಜನಶಕ್ತಿ ಸಂಘಟನೆಗಳಿಂದ ಹೋರಾಟ ನಡೆಯಲಿದೆ.

ರಾಷ್ಟ್ರೀಯ ರೈತ ಹೋರಾಟದ ಮೂಂಚೂಣಿ ನಾಯಕರಾದ ಹರಿಯಾಣದ ದೀಪಕ ಲಂಬಾ, ಹಿರಿಯ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ, ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಸೇರಿದಂತೆ ನೂರಾರು ಮುಖಂಡರು, ಸಾವಿರಾರು ರೈತರು ಭಾಗಿಯಾಗಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ನರಗುಂದ ಪಟ್ಟಣದ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ನಂತರ ಹುತಾತ್ಮ ಸ್ಮಾರಕಕ್ಕೆ ಗೌರವ ಸಮರ್ಪಿಸಿ, ರೈತ ಸಂಪರ್ಕ ಕೇಂದ್ರ ಬಳಿ ಬೃಹತ್ ಬಹಿರಂಗ ಸಭೆ ನಡೆಯಲಿದೆ.

ಇದನ್ನೂ ಓದಿ

ಕಾಂಗ್ರೆಸ್ ನಾಯಕರ ದೂರವಾಣಿ ಕದ್ದಾಲಿಕೆ ಪ್ರಕರಣ: ಜುಲೈ 22ರಂದು ಕಾಂಗ್ರೆಸ್ ಶಾಸಕರಿಂದ ರಾಜಭವನ ಮುತ್ತಿಗೆ

ಮುಂಜಾನೆ ಬೆಂಗಳೂರಿನಲ್ಲಿ ಶೂಟೌಟ್; ರೌಡಿಶೀಟರ್ ಬಬ್ಲಿ ಹತ್ಯೆ ಆರೋಪಿಗಳ ಮೇಲೆ ಗುಂಡು, ಇಬ್ಬರ ಬಂಧನ

(Farmers Martyr Day 2021 Gadag Farmers likely to protest today)

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ