ಗದಗ: ಹಣಕಾಸಿನ‌ ವಿಚಾರಕ್ಕೆ ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ, ಏಳು ಜನರಿಗೆ ಗಾಯ

ಮೈನುದ್ದೀನ ತಹಶೀಲ್ದಾರ ಹಾಗೂ ಸಬೀಲ ಬಂಕಾಪೂರ ನಡುವೆ ಲಕ್ಷ್ಮೇಶ್ವರದ ಬಸ್ ನಿಲ್ದಾಣ ಬಳಿ ವ್ಯವಹಾರ ನಡೆದಿತ್ತು. ಮೈನುದ್ದೀನ ಸಬೀಲನಿಗೆ ಕೊಟ್ಟ ದುಡ್ಡುನ್ನು ಮರಳಿ ಕೇಳಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಬಳಿಕ ಆಸ್ಪತ್ರೆ ಬಳಿ ಕುಟುಂಬಸ್ಥರ ನಡುವೆ ಜಗಳ ನಡೆದಿದೆ.

ಗದಗ: ಹಣಕಾಸಿನ‌ ವಿಚಾರಕ್ಕೆ ಕುಟುಂಬಗಳ ನಡುವೆ ಮಾರಕಾಸ್ತ್ರಗಳಿಂದ ಹೊಡೆದಾಟ, ಏಳು ಜನರಿಗೆ ಗಾಯ
ಹಲ್ಲೆಯಲ್ಲಿ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow us
| Updated By: ಆಯೇಷಾ ಬಾನು

Updated on: Aug 05, 2023 | 2:24 PM

ಗದಗ, ಆ. 05: ಹಣಕಾಸಿನ ‌ವಿಚಾರವಾಗಿ ನಡೆದ ಎರಡು ಕುಟುಂಬಗಳ ನಡುವಿನ ಕಲಹ ವಿಕೋಪಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಿನ್ನೆ ರಾತ್ರಿ ಮೈನುದ್ದೀನ ತಹಶೀಲ್ದಾರ ಹಾಗೂ ಸಬೀಲ ಬಂಕಾಪೂರ ನಡುವೆ ಹಣಕಾಸಿನ ವಿಚಾರವಾಗಿ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ಹೋಗಿ ಹೊಡೆದಾಡಿಕೊಂಡಿದ್ದಾರೆ.

ಮೈನುದ್ದೀನ ತಹಶೀಲ್ದಾರ ಹಾಗೂ ಸಬೀಲ ಬಂಕಾಪೂರ ನಡುವೆ ಲಕ್ಷ್ಮೇಶ್ವರದ ಬಸ್ ನಿಲ್ದಾಣ ಬಳಿ ವ್ಯವಹಾರ ನಡೆದಿತ್ತು. ಮೈನುದ್ದೀನ ಸಬೀಲನಿಗೆ ಕೊಟ್ಟ ದುಡ್ಡುನ್ನು ಮರಳಿ ಕೇಳಿದಾಗ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಇದಾದ ಬಳಿಕ ಹಲ್ಲೆಗೊಳಗಾದ ಮೈನುದ್ದೀನ ಲಕ್ಷ್ಮೇಶ್ವರದ ಸರಕಾರಿ ಆಸ್ಪತ್ರೆಗೆ ಹೋದಾಗ ಸಬೀಲ ಬಂಕಾಪೂರನ ಸಂಬಂಧಿಕರಾದ ನೌಶಾದ್ ಮೈನುದ್ದೀನ ಆಡೂರ, ಅಬ್ದುಲ್ ಅಲಿಯಾಸ್ ಅಬ್ದುಲ್ ರಜಾಕ್ ಮೈನುದ್ದೀನ ಆಡೂರು, ಇಸ್ಮಾಯಿಲ್ ಆಡೂರ, ಅತ್ತಾರ ಅಲಿಯಾಸ್ ಅಬ್ದುಲ್ ಸತ್ತಾರ ಆಡೂರ, ಸುಲೇಮಾನ್ ಆಡೂರ ಸೇರಿದಂತೆ ಇನ್ನೂ ಅನೇಕರು ಆಸ್ಪತ್ರೆ ಬಳಿ ಮತ್ತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಕೈಯಲ್ಲಿ ರಾಡ್, ಚಾಕು ಹಾಗೂ ಬಡಿಗೆಗಳಿಂದ ಮೈನುದ್ದೀನ ಹಾಗೂ ಆತನ ಸಹೋದರರಾದ ಇರ್ಫಾನ್, ಶಾಬುದ್ದೀನ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎಂದು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, 0109/2023 ಕಲಂ 143,147,148, 323,307, 504, ರೆ.ವಿ 149 IPC ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಜೈಲಿನಿಂದ ಹೊರಬಂದ ಕಲವೇ ಗಂಟೆಗಳಲ್ಲಿ ರೌಡಿಶೀಟರ್ ಹತ್ಯೆ ಪ್ರಕರಣ; ಪರಪ್ಪನ ಅಗ್ರಹಾರ ಠಾಣೆಯಲ್ಲಿ ದೂರು ದಾಖಲು

ಪ್ರತಿದೂರು ದಾಖಲು

ಹಳೆಯ ದ್ವೇಷ ಸಾಧಿಸುತ್ತಾ ಬಂದಿರುವ ಶಾಬುದ್ದೀನ ತಂದೆ ಮಲಿಕಸಾಬ ತಹಶೀಲ್ದಾರ, ಮೈನುದ್ದೀನ ತಹಶೀಲ್ದಾರ, ಇರ್ಫಾನ್ ತಹಶೀಲ್ದಾರ, ಬರಕತ್ ಅಲಿ ಡೋಂಗರಿ‌ ಮುಳಗುಂದ, ಮಕ್ಬೂಲಸಾಬ ಮುಳಗುಂದ ಹಾಗೂ ಇತರರು ಸೇರಿ ನಮ್ಮ ಜೊತೆಗೆ ಆಗಾಗ ತಂಟೆ ತಕರಾರು ದ್ವೇಷ ಇಟ್ಟುಕೊಂಡು ಶುಕ್ರವಾರ ರಾತ್ರಿ ಲಕ್ಷ್ಮೇಶ್ವರದ ಸರಕಾರಿ ಆಸ್ಪತ್ರೆ ಎದುರಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ್ದಾರೆ ಎಂದು ನೌಶಾದ್ ತಂದೆ ಮೈನುದ್ದೀನ ಆಡೂರ ಎಂಬುವರು ದೂರು ನೀಡಿದ್ದು, 0110/2023, ಕಲಂ 143, 147,148,323,324, 307, 504, ರೆ.ವಿ 149 IPC ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡವರು ಲಕ್ಷ್ಮೇಶ್ವರ ಸರಕಾರಿ ಆಸ್ಪತ್ರೆಗೆ ದಾಖಲಾದರೆ, ಇನ್ನುಳಿದ ಕೆಲವರು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗದಗ ಜಿಲ್ಲೆಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!