AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ದೀಪಾವಳಿ ಹಬ್ಬಕ್ಕೆಂದು ಬೆಳೆದ ಹೂವು; ಗಾಳಿ, ಮಳೆಗೆ ಸಂಪೂರ್ಣ ನಾಶ

ಇನ್ನೇನು ಹೂವುಗಳನ್ನು ಕಟಾವು ಮಾಡಿ, ಮಾರಾಟ ಮಾಡಬೇಕು ಎನ್ನುವ ಸಮಯದಲ್ಲಿ ಹೂವಿನ ಗಿಡಗಳು ನೆಲಕಚ್ಚಿವೆ. ಹೀಗಾಗಿ ನಮಗೆ ಬಹಳ ಹಾನಿಯಾಗಿದೆ. ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತ ಮಹಿಳೆ ಒತ್ತಾಯ ಮಾಡಿದ್ದಾರೆ. ಇಷ್ಟು ದಿನ ಮಳೆ ಇಲ್ಲದೇ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಆದ್ರೆ, ಈಗ ಸುರಿದ ಮಳೆ ಹೂವು ಬೆಳೆಗಾರರನ್ನು ಕಂಗಾಲಾಗಿಸಿದೆ.

ಗದಗ: ದೀಪಾವಳಿ ಹಬ್ಬಕ್ಕೆಂದು ಬೆಳೆದ ಹೂವು; ಗಾಳಿ, ಮಳೆಗೆ ಸಂಪೂರ್ಣ ನಾಶ
ಮಳೆ ಗಾಳಿಗೆ ನೆಲಕಚ್ಚಿದ ಹೂವು ಬೆಳೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 11, 2023 | 6:09 PM

Share

ಗದಗ, ನ.11: ಸುಂದರ ಹೂವಿನ ತೋಟ ಸಂಪೂರ್ಣ ನೆಲಕಚ್ಚಿದೆ. ಜಮೀನಿನಲ್ಲಿ ಹೂವಿನ ಹಾಸಿಗೆ ಹಾಸಿದಂತಾಗಿದೆ. ದೀಪಾವಳಿ(Deepavali) ಹಬ್ಬದಲ್ಲಿ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣದೇವ ಶಾಕ್ ನೀಡಿದ್ದಾನೆ. ಹೌದು, ಗದಗ(Gadag) ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಗೆ ಹೂವಿನ ತೋಟಗಳು ಸಂಪೂರ್ಣ ಹಾನಿಯಾಗಿವೆ. ಸಾಲ ಸೂಲ ಮಾಡಿ ಬೆಳೆದ ಹೂವು(Flower), ರೈತರ ಕಣ್ಮುಂದೆ ನಾಶವಾಗಿದ್ದು, ನೋಡಿ ಗೋಳಾಡುತ್ತಿದ್ದಾರೆ. ಹೀಗಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಅಂದಹಾಗೇ ಗದಗ ತಾಲೂಕಿನ ಲಕ್ಕುಂಡಿ, ಸಂಭಾಪುರ, ಕಂದಪೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಅತೀ ಹೆಚ್ಚು ಹೂವು ಬೆಳೆಯಲಾಗುತ್ತದೆ. ಅದರಲ್ಲೂ ಹಿಂದೂಗಳ ದೊಡ್ಡ ಹಬ್ಬವಾದ ದೀಪಾವಳಿ ಹಬ್ಬಕ್ಕೆಂದು ಹೂವಿನ ತೋಟಗಳು ಮಾಡಿರುತ್ತಾರೆ. ಪ್ರತಿ ವರ್ಷ ದೀಪಾವಳಿ ಹಬ್ಬಕ್ಕೆ ರೈತರು ಹೂವು ಮಾರಾಟ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದರು. ಆದ್ರೆ, ಎರಡು ದಿನಗಳಿಂದ ಗಾಳಿ ಹಾಗೂ ಮಳೆಗೆ ಸೇವಂತಿ ಹೂವಿನ ತೋಟಗಳು ನಾಶವಾಗಿವೆ.

ಸೂಕ್ತ ಪರಿಹಾರಕ್ಕೆ ಸರ್ಕಾರಕ್ಕೆ ಮನವಿ

ಇನ್ನೇನು ಹೂವುಗಳನ್ನು ಕಟಾವು ಮಾಡಿ, ಮಾರಾಟ ಮಾಡಬೇಕು ಎನ್ನುವ ಸಮಯದಲ್ಲಿ ಹೂವಿನ ಗಿಡಗಳು ನೆಲಕಚ್ಚಿವೆ. ಹೀಗಾಗಿ ನಮಗೆ ಬಹಳ ಹಾನಿಯಾಗಿದೆ. ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತ ಮಹಿಳೆ ಒತ್ತಾಯ ಮಾಡಿದ್ದಾರೆ. ಇಷ್ಟು ದಿನ ಮಳೆ ಇಲ್ಲದೇ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಆದ್ರೆ, ಈಗ ಸುರಿದ ಮಳೆ ಹೂವು ಬೆಳೆಗಾರರನ್ನು ಕಂಗಾಲಾಗಿಸಿದೆ. ಅಷ್ಟೋ ಇಷ್ಟೋ ನೀರಾವರಿ ಮಾಡಿಕೊಂಡು ಹೂವು ಬೆಳೆದ ಬದುಕು ಕಟ್ಟಿಕೊಳ್ಳುವ ರೈತರಿಗೆ ಈಗ ಭಾರಿ ಹಾನಿಯಾಗಿದೆ. ಒಂದು ಎಕರೆ‌ ಹೂವು ಬೆಳೆಯಲು ರೈತರು ಒಂದು ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಇನ್ನೆನ್ನೂ ದೀಪಾವಳಿ ಹಬ್ಬ ಬಂತು ಬಂಪರ್ ಬೆಲೆ ಸಿಗುತ್ತೆ ಎಂದು ಹೂವು ಕಟಾವು ಮಾಡದೆ ಜಮೀನಿನಲ್ಲಿ ಹಾಗೇ ಬಿಟ್ಟಿದ್ರು. ಆದ್ರೆ ಗಾಳಿ, ಮಳೆಗೆ ಸಿಲುಕಿ ಹೂವಿನ ತೋಟಗಳು ನೆಲಕ್ಕುರುಳಿವೆ.

ಇದನ್ನೂ ಓದಿ:ಬಾಗಲಕೋಟೆ: ನಿರಂತರ ಮಳೆಯಿಂದ ನೂರಾರು ಎಕರೆ ಬೆಳೆ ನಾಶ: ಉಕ್ಕಿ ಹರಿಯುತ್ತಿರುವ ಹಳ್ಳ; ಗದಗ-ಬಾಗಲಕೋಟೆ ರಾಜ್ಯ ಹೆದ್ದಾರಿ ಸಂಪರ್ಕ ಕಡಿತ

ನೂರಾರು ಎಕರೆ ಬೆಳೆದ ಹೂವು ನಾಶ

ನೂರಾರು ಎಕರೆ ಬೆಳೆದ ರೈತರ ಹೂವಿನ ತೋಟಗಳಿಗೆ ಹಾನಿಯಾಗಿದ್ದು, ಹೂವು ಹಾಳಾಗಿದೆ. ಮಾರ್ಕೆಟ್​ಗೆ ತಂದರೂ ಸೂಕ್ತ ಬೆಲೆ ಸಿಗುತ್ತಿಲ್ಲ. 10,20,30 ರೂಪಾಯಿಗೆ ಕೆಜಿ ಮಾರಾಟ ಆಗುತ್ತಿದೆ. ಇಷ್ಟೊಂದು ಹಾನಿಯಾದ್ರು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ಮಳೆ ಬಂದರೂ ಕಷ್ಟ, ಮಳೆ ಬರದಿದ್ರೂ ಕಷ್ಟ ಎಂಬಂತಾಗಿದೆ. ಇಷ್ಟು ಮಳೆ ಇಲ್ಲದೇ ಭೀಕರ ಬರದಿಂದ ಎಲ್ಲ ಬೆಳೆಗಳು ಕಳೆದುಕೊಂಡು ರೈತರು ಕಂಗಾಲಾಗಿದ್ದರು. ಬರಗಾಲದ ನಡುವೆ ನೀರಾವರಿ ಮಾಡಿ, ಹೂವು ಬೆಳೆದ ರೈತರು ಮಳೆಯ ಹೊಡೆತಕ್ಕೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾರೆ. ದೀಪಾವಳಿ ಹಬ್ಬ ನಮ್ಮ ಬಾಳಿನಲ್ಲಿ ಬೆಳಕು ತರುತ್ತದೆ ಎಂದು ಅಂದುಕೊಂಡ ರೈತರ ಪಾಲಿಗೆ ಕತ್ತಲು ಆವರಿಸಿದೆ. ಇನ್ನಾದರೂ ಸರ್ಕಾರ, ಗದಗ ಜಿಲ್ಲಾಡಳಿತ ಹೂ ಬೆಳೆಗಾರರಿಗೆ ಸಹಾಯ ಹಸ್ತ ನೀಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!