AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ದೀಪಾವಳಿ ಹಬ್ಬಕ್ಕೆಂದು ಬೆಳೆದ ಹೂವು; ಗಾಳಿ, ಮಳೆಗೆ ಸಂಪೂರ್ಣ ನಾಶ

ಇನ್ನೇನು ಹೂವುಗಳನ್ನು ಕಟಾವು ಮಾಡಿ, ಮಾರಾಟ ಮಾಡಬೇಕು ಎನ್ನುವ ಸಮಯದಲ್ಲಿ ಹೂವಿನ ಗಿಡಗಳು ನೆಲಕಚ್ಚಿವೆ. ಹೀಗಾಗಿ ನಮಗೆ ಬಹಳ ಹಾನಿಯಾಗಿದೆ. ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತ ಮಹಿಳೆ ಒತ್ತಾಯ ಮಾಡಿದ್ದಾರೆ. ಇಷ್ಟು ದಿನ ಮಳೆ ಇಲ್ಲದೇ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಆದ್ರೆ, ಈಗ ಸುರಿದ ಮಳೆ ಹೂವು ಬೆಳೆಗಾರರನ್ನು ಕಂಗಾಲಾಗಿಸಿದೆ.

ಗದಗ: ದೀಪಾವಳಿ ಹಬ್ಬಕ್ಕೆಂದು ಬೆಳೆದ ಹೂವು; ಗಾಳಿ, ಮಳೆಗೆ ಸಂಪೂರ್ಣ ನಾಶ
ಮಳೆ ಗಾಳಿಗೆ ನೆಲಕಚ್ಚಿದ ಹೂವು ಬೆಳೆ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Nov 11, 2023 | 6:09 PM

Share

ಗದಗ, ನ.11: ಸುಂದರ ಹೂವಿನ ತೋಟ ಸಂಪೂರ್ಣ ನೆಲಕಚ್ಚಿದೆ. ಜಮೀನಿನಲ್ಲಿ ಹೂವಿನ ಹಾಸಿಗೆ ಹಾಸಿದಂತಾಗಿದೆ. ದೀಪಾವಳಿ(Deepavali) ಹಬ್ಬದಲ್ಲಿ ಬಂಪರ್ ಬೆಲೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ವರುಣದೇವ ಶಾಕ್ ನೀಡಿದ್ದಾನೆ. ಹೌದು, ಗದಗ(Gadag) ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಳೆಗೆ ಹೂವಿನ ತೋಟಗಳು ಸಂಪೂರ್ಣ ಹಾನಿಯಾಗಿವೆ. ಸಾಲ ಸೂಲ ಮಾಡಿ ಬೆಳೆದ ಹೂವು(Flower), ರೈತರ ಕಣ್ಮುಂದೆ ನಾಶವಾಗಿದ್ದು, ನೋಡಿ ಗೋಳಾಡುತ್ತಿದ್ದಾರೆ. ಹೀಗಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಅಂದಹಾಗೇ ಗದಗ ತಾಲೂಕಿನ ಲಕ್ಕುಂಡಿ, ಸಂಭಾಪುರ, ಕಂದಪೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಅತೀ ಹೆಚ್ಚು ಹೂವು ಬೆಳೆಯಲಾಗುತ್ತದೆ. ಅದರಲ್ಲೂ ಹಿಂದೂಗಳ ದೊಡ್ಡ ಹಬ್ಬವಾದ ದೀಪಾವಳಿ ಹಬ್ಬಕ್ಕೆಂದು ಹೂವಿನ ತೋಟಗಳು ಮಾಡಿರುತ್ತಾರೆ. ಪ್ರತಿ ವರ್ಷ ದೀಪಾವಳಿ ಹಬ್ಬಕ್ಕೆ ರೈತರು ಹೂವು ಮಾರಾಟ ಮಾಡಿ ಲಾಭ ಮಾಡಿಕೊಳ್ಳುತ್ತಿದ್ದರು. ಆದ್ರೆ, ಎರಡು ದಿನಗಳಿಂದ ಗಾಳಿ ಹಾಗೂ ಮಳೆಗೆ ಸೇವಂತಿ ಹೂವಿನ ತೋಟಗಳು ನಾಶವಾಗಿವೆ.

ಸೂಕ್ತ ಪರಿಹಾರಕ್ಕೆ ಸರ್ಕಾರಕ್ಕೆ ಮನವಿ

ಇನ್ನೇನು ಹೂವುಗಳನ್ನು ಕಟಾವು ಮಾಡಿ, ಮಾರಾಟ ಮಾಡಬೇಕು ಎನ್ನುವ ಸಮಯದಲ್ಲಿ ಹೂವಿನ ಗಿಡಗಳು ನೆಲಕಚ್ಚಿವೆ. ಹೀಗಾಗಿ ನಮಗೆ ಬಹಳ ಹಾನಿಯಾಗಿದೆ. ಸೂಕ್ತವಾದ ಪರಿಹಾರ ನೀಡಬೇಕು ಎಂದು ರೈತ ಮಹಿಳೆ ಒತ್ತಾಯ ಮಾಡಿದ್ದಾರೆ. ಇಷ್ಟು ದಿನ ಮಳೆ ಇಲ್ಲದೇ ಭೀಕರ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ಆದ್ರೆ, ಈಗ ಸುರಿದ ಮಳೆ ಹೂವು ಬೆಳೆಗಾರರನ್ನು ಕಂಗಾಲಾಗಿಸಿದೆ. ಅಷ್ಟೋ ಇಷ್ಟೋ ನೀರಾವರಿ ಮಾಡಿಕೊಂಡು ಹೂವು ಬೆಳೆದ ಬದುಕು ಕಟ್ಟಿಕೊಳ್ಳುವ ರೈತರಿಗೆ ಈಗ ಭಾರಿ ಹಾನಿಯಾಗಿದೆ. ಒಂದು ಎಕರೆ‌ ಹೂವು ಬೆಳೆಯಲು ರೈತರು ಒಂದು ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಇನ್ನೆನ್ನೂ ದೀಪಾವಳಿ ಹಬ್ಬ ಬಂತು ಬಂಪರ್ ಬೆಲೆ ಸಿಗುತ್ತೆ ಎಂದು ಹೂವು ಕಟಾವು ಮಾಡದೆ ಜಮೀನಿನಲ್ಲಿ ಹಾಗೇ ಬಿಟ್ಟಿದ್ರು. ಆದ್ರೆ ಗಾಳಿ, ಮಳೆಗೆ ಸಿಲುಕಿ ಹೂವಿನ ತೋಟಗಳು ನೆಲಕ್ಕುರುಳಿವೆ.

ಇದನ್ನೂ ಓದಿ:ಬಾಗಲಕೋಟೆ: ನಿರಂತರ ಮಳೆಯಿಂದ ನೂರಾರು ಎಕರೆ ಬೆಳೆ ನಾಶ: ಉಕ್ಕಿ ಹರಿಯುತ್ತಿರುವ ಹಳ್ಳ; ಗದಗ-ಬಾಗಲಕೋಟೆ ರಾಜ್ಯ ಹೆದ್ದಾರಿ ಸಂಪರ್ಕ ಕಡಿತ

ನೂರಾರು ಎಕರೆ ಬೆಳೆದ ಹೂವು ನಾಶ

ನೂರಾರು ಎಕರೆ ಬೆಳೆದ ರೈತರ ಹೂವಿನ ತೋಟಗಳಿಗೆ ಹಾನಿಯಾಗಿದ್ದು, ಹೂವು ಹಾಳಾಗಿದೆ. ಮಾರ್ಕೆಟ್​ಗೆ ತಂದರೂ ಸೂಕ್ತ ಬೆಲೆ ಸಿಗುತ್ತಿಲ್ಲ. 10,20,30 ರೂಪಾಯಿಗೆ ಕೆಜಿ ಮಾರಾಟ ಆಗುತ್ತಿದೆ. ಇಷ್ಟೊಂದು ಹಾನಿಯಾದ್ರು ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈತರಿಗೆ ಮಳೆ ಬಂದರೂ ಕಷ್ಟ, ಮಳೆ ಬರದಿದ್ರೂ ಕಷ್ಟ ಎಂಬಂತಾಗಿದೆ. ಇಷ್ಟು ಮಳೆ ಇಲ್ಲದೇ ಭೀಕರ ಬರದಿಂದ ಎಲ್ಲ ಬೆಳೆಗಳು ಕಳೆದುಕೊಂಡು ರೈತರು ಕಂಗಾಲಾಗಿದ್ದರು. ಬರಗಾಲದ ನಡುವೆ ನೀರಾವರಿ ಮಾಡಿ, ಹೂವು ಬೆಳೆದ ರೈತರು ಮಳೆಯ ಹೊಡೆತಕ್ಕೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದಾರೆ. ದೀಪಾವಳಿ ಹಬ್ಬ ನಮ್ಮ ಬಾಳಿನಲ್ಲಿ ಬೆಳಕು ತರುತ್ತದೆ ಎಂದು ಅಂದುಕೊಂಡ ರೈತರ ಪಾಲಿಗೆ ಕತ್ತಲು ಆವರಿಸಿದೆ. ಇನ್ನಾದರೂ ಸರ್ಕಾರ, ಗದಗ ಜಿಲ್ಲಾಡಳಿತ ಹೂ ಬೆಳೆಗಾರರಿಗೆ ಸಹಾಯ ಹಸ್ತ ನೀಡಲಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!