AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪತ್ತಗುಡ್ಡ.. ಮೂರು ದಿನದಲ್ಲಿ 5 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿ

ಅದು ಉತ್ತರ ಕರ್ನಾಟಕದ ಸಹ್ಯಾದ್ರಿ. ಅಪಾರ ಆಯುರ್ವೇದ ಔಷಧಿ ಸಸ್ಯಗಳ ತಾಣ. ಆದ್ರೆ ಹಸಿರು ಕಾಶಿಗೆ ಕಂಟಕ ಎದುರಾಗಿದೆ. ಈಗಾಗಲೇ ಗಣಿ ಹಾಗೂ ಭೂಗಳ್ಳರಿಂದ ನಶಿಸಿ ಹೋಗಿರೋ ಗುಡ್ಡಕ್ಕೆ ಬೆಂಕಿ ಆಪತ್ತು ತಂದಿದೆ. ಮೂರೇ ದಿನದಲ್ಲಿ ಸುಮಾರು 5 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪತ್ತಗುಡ್ಡ.. ಮೂರು ದಿನದಲ್ಲಿ 5 ಸಾವಿರ ಹೆಕ್ಟೇರ್​ಗೂ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿ
ಕಪ್ಪತ್ತಗುಡ್ಡದಲ್ಲಿ ಕಾಣಿಸಿಕೊಂಡ ಬೆಂಕಿ
ಆಯೇಷಾ ಬಾನು
|

Updated on: Mar 04, 2021 | 8:03 AM

Share

ಗದಗ: ಉತ್ತರ‌ ಕರ್ನಾಟದ ಸಸ್ಯಕಾಶಿ, ಅಪಾರ ಆಯುರ್ವೇದ ಔಷಧಿಗಳ ಸಸ್ಯತಾಣ ಕಪ್ಪತ್ತಗುಡ್ಡಕ್ಕೆ ಬೆಂಕಿಯ ಕಂಟಕ ಎದುರಾಗಿದೆ. ಗದಗ ಜಿಲ್ಲೆಯ ಕಪ್ಪತ್ತಗುಡ್ಡ ಸತತ 3 ದಿನಗಳಿಂದ ಬೆಂಕಿಯಲ್ಲಿ ಬೆಂದು ಹೋಗಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಕಪ್ಪತ್ತಗುಡ್ಡ ಅಕ್ಷರಶಃ ಕಾದ ಕಬ್ಬಿಣವಾಗಿದೆ.

ಕಪ್ಪತ್ತಗುಡ್ಡಕ್ಕೆ ಕಿಡಿಗೇಡಿಗಳಿಂದ ಬೆಂಕಿ? ಕಾಡ್ಗಿಚ್ಚಿನಿಂದ ಔಷಧಿ ಕಾಡು ಹಾಗೂ ಪ್ರಾಣಿ, ಪಕ್ಷಿಗಳು ನಲುಗಿ ಹೋಗಿವೆ. ಹೀಗೆ 5 ಸಾವಿರ ಹೆಕ್ಟೇರ್ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಪ್ರತಿವರ್ಷವೂ ಬೇಸಿಗೆ ಆರಂಭವಾದ್ರೆ ಸಾಕು ಕಪ್ಪತ್ತಗುಡ್ಡಕ್ಕೆ ಬೆಂಕಿ ಕಂಟಕ ಶುರುವಾಗುತ್ತೆ. ಹಿಂದೆ ಬೆಂಕಿ ದುರಂತಕ್ಕೆ ಕುತಂತ್ರ, ಕೈವಾಡ ಇತ್ತು. ಆದ್ರೆ, ಈ ಬಾರಿ ಸ್ಥಳೀಯರಿಂದಲೇ ಕಂಟಕ ಎದುರಾಗಿದೆ ಅನ್ನೋ ಅರೋಪ ಕೇಳಿ ಬಂದಿದೆ. ಮುಂಡರಗಿ ತಾಲೂಕಿನ ಡೋಣಿ ತಾಂಡಾದ ಬಳಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಅಂತಾ ಆರೋಪಿಸಲಾಗಿದೆ. ಮೊದಲು ಒಂದು ಕಡೆಗೆ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು ಮತ್ತೆ ಬೇರೆ ಬೇರೆ ಪ್ರದೇಶದಲ್ಲಿ 10 ಕಡೆ ಬೆಂಕಿ ಇಟ್ಟಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗುತ್ತಿದೆ. ಹೀಗೆ ಹಗಲು, ರಾತ್ರಿ ಎನ್ನದೆ ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

kappata gudda

ಗದಗದ ಕಪ್ಪತ್ತಗುಡ್ಡ

ಅರಣ್ಯ ಇಲಾಖೆಗೆ ದೊಡ್ಡ ಸವಾಲು ಕಪ್ಪತ್ತಗುಡ್ಡಕ್ಕೆ ಬೆಂಕಿ ಕಾಟ ಹೊಸದೇನಲ್ಲ. ಬೆಂಕಿ ಬೀಳಬಾರದು ಅಂತಾನೆ ಅರಣ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಮುಂಜಾಗ್ರತೆ ವಹಿಸಿದ್ದಾರೆ. ಈ ಹಿಂದೆ ಫೈರ್​ಲೈನ್ ಕಾಮಗಾರಿ ನಡೆಸಲಾಗ್ತಿತ್ತು. ಅದರೆ ಕೊರೊನಾ ಕಾರಣ ಸಿಬ್ಬಂದಿ ಕಡಿತಗೊಳಿಸಿದ್ದರಿಂದ ಪೂರ್ಣ ಪ್ರಮಾಣದಲ್ಲಿ ಫೈರ್​ಲೈನ್ ಮಾಡಲಾಗಿಲ್ಲ. ಹೀಗಾಗಿ ಈ ಬಾರಿ ಬೆಂಕಿ ಕೆನ್ನಾಲಿಗೆಯನ್ನ ತಣ್ಣಗಾಗಿಸೋದು ಅರಣ್ಯ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಕಪ್ಪತ್ತಗುಡ್ಡ ಉಳಿಸಬೇಕೆಂದರೆ ಸ್ಥಳಿಯರೂ ಇಲ್ಲಿ ಕೈಜೋಡಿಸಬೇಕು ಅನ್ನೋದು ಪರಿಸರ ಪ್ರೇಮಿಗಳ ಆಗ್ರಹವಾಗಿದೆ.

kappata gudda

ಕಪ್ಪತ್ತಗುಡ್ಡ

ಕಪ್ಪತ್ತಗುಡ್ಡಕ್ಕೆ ನಿರಂತರವಾಗಿ ಕಂಟಕ ಎದುರಾಗ್ತಿದೆ. ಅದರಲ್ಲೂ ಬೇಸಿಗೆಯ ಸಮಯದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಲುಗುವ ಹಸಿರುಧಾಮಕ್ಕೆ ರಕ್ಷಾಕವಚ ಇಲ್ಲದಂತಾಗಿದೆ. ಮತ್ತೊಂದ್ಕಡೆ ಬೇಲಿಯೇ ಎದ್ದು ಹೊಲಮೇಯ್ದಂತೆ ಸ್ಥಳಿಯರೇ ಕೃತ್ಯ ಎಸಗುತ್ತಿದ್ದಾರಾ ಅನ್ನೋ ಅನುಮಾನ ಮೂಡಿದೆ. ಹೀಗಾಗಿ ಉತ್ತರ ಕರ್ನಾಟಕದ ಹಸಿರು ಧಾಮವಾದ ಕಪ್ಪತ್ತಗುಡ್ಡವನ್ನ ರಕ್ಷಣೆ ಮಾಡಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕಿದೆ.

kappata gudda

ಕಪ್ಪತ್ತಗುಡ್ಡ

ಇದನ್ನೂ ಓದಿ: ಕಪ್ಪತಗುಡ್ಡ ವ್ಯಾಪ್ತಿಯಲ್ಲಿ ನಿಲ್ಲದ ಕಲ್ಲುಗಣಿಗಾರಿಕೆ, ನೋಟಿಸ್ ನೀಡಿದ್ರೂ ಡೋಂಟ್ ಕೇರ್..

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ