AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಹಳ್ಳದಲ್ಲಿ ಸಿಲುಕಿರುವ ನಾಲ್ವರು ಕಾರ್ಮಿಕರು! ರಕ್ಷಣಾ ಕಾರ್ಯಕ್ಕೆ ಮುಂದಾದ ಅಗ್ನಿಶಾಮಕ ದಳದ ಸಿಬ್ಬಂದಿ

ಭಾರೀ ಮಳೆಗೆ ಜಿಲ್ಲೆಯ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದೆ. ಉಕ್ಕಿ ಹರಿಯುವ ಹಳ್ಳದಿಂದ ಕುರ್ಲಗೇರಿ ಗ್ರಾಮದಿಂದ ನರಗುಂದ, ಗದಗ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಡಿತವಾಗಿದೆ. ಇನ್ನು ಹಮ್ಮಿಗಿ-ಗುಮ್ಮಗೋಳ ಮಾರ್ಗದಲ್ಲಿರುವ ಸೇತುವೆ ಜಲಾವೃತವಾಗಿದೆ.

ಗದಗ ಹಳ್ಳದಲ್ಲಿ ಸಿಲುಕಿರುವ ನಾಲ್ವರು ಕಾರ್ಮಿಕರು! ರಕ್ಷಣಾ ಕಾರ್ಯಕ್ಕೆ ಮುಂದಾದ ಅಗ್ನಿಶಾಮಕ ದಳದ ಸಿಬ್ಬಂದಿ
ಹಳ್ಳದಲ್ಲಿ ಸಿಲುಕಿರುವ ಕಾರ್ಮಿಕರು
TV9 Web
| Edited By: |

Updated on:May 21, 2022 | 12:27 PM

Share

ಗದಗ: ನಿರಂತರ ಮಳೆಗೆ (Rain) ರಾಜ್ಯದಲ್ಲಿ ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ಮನೆಗಳು (House) ಕುಸಿದು ಜನರು ಪರದಾಡುತ್ತಿದ್ದರೆ, ಇನ್ನು ಕೆಲವೆಡೆ ಭಾರೀ ಪ್ರಮಾಣದ ನೀರಿನಿಂದ ಊರುಗಳ ಮಧ್ಯೆ ಸಂಪರ್ಕ ಕಡಿತವಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ ಗ್ರಾಮದ ಬಳಿ ನಾಲ್ವರು ಕಾರ್ಮಿಕರು ಹಳ್ಳದಲ್ಲಿ ಸಿಲುಕಿದ್ದಾರೆ. ಕಾರ್ಮಿಕರು ನಿನ್ನೆ ರಾತ್ರಿ ಸೇತುವೆ ನಿರ್ಮಾಣ ಕಾಮಗಾರಿಗೆ ತೆರಳಿದ್ದರು. ಇಂದು ಬೆಳ್ಳಂಬೆಳಗ್ಗೆ ಬೆಣ್ಣೆ ಹಳ್ಳದಲ್ಲಿ ನೀರು ಹೆಚ್ಚಾದ ಹಿನ್ನೆಲೆ ರಸ್ತೆ ಸಂಪರ್ಕ ಕಡಿತವಾಗಿದೆ. ಹಳ್ಳದ ನಡುಗಡ್ಡೆಯಲ್ಲಿ ಸಿಲುಕಿರುವ ನಾಲ್ವರು ಕಾರ್ಮಿಕರನ್ನ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಲು ಮುಂದಾಗಿದೆ.

ಉಕ್ಕಿ ಹರಿಯುತ್ತಿರುವ ಬೆಣ್ಣೆ ಹಳ್ಳ: ಭಾರೀ ಮಳೆಗೆ ಜಿಲ್ಲೆಯ ಬೆಣ್ಣೆ ಹಳ್ಳ ಉಕ್ಕಿ ಹರಿಯುತ್ತಿದೆ. ಉಕ್ಕಿ ಹರಿಯುವ ಹಳ್ಳದಿಂದ ಕುರ್ಲಗೇರಿ ಗ್ರಾಮದಿಂದ ನರಗುಂದ, ಗದಗ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಡಿತವಾಗಿದೆ. ಇನ್ನು ಹಮ್ಮಿಗಿ-ಗುಮ್ಮಗೋಳ ಮಾರ್ಗದಲ್ಲಿರುವ ಸೇತುವೆ ಜಲಾವೃತವಾಗಿದೆ. ಸಿಂಗಟಾಲೂರು ಬ್ಯಾರೇಜ್ ಭರ್ತಿ ಹಿನ್ನೆಲೆ ಸೇತುವೆ ಮುಳುಗಡೆಯಾಗಿದೆ.

ಇದನ್ನೂ ಓದಿ: Stagflation: ಸ್ಟ್ಯಾಗ್​ಫ್ಲೇಷನ್ ಆತಂಕದಲ್ಲಿ ಇಳಿಜಾರಿನತ್ತ ಸಾಗುತ್ತಿರುವ ರೂಪಾಯಿ ಮೌಲ್ಯ; ಏನಿದು ಅರ್ಥಶಾಸ್ತ್ರ ಪರಿಭಾಷೆ ಗೊತ್ತಾ?

ಇದನ್ನೂ ಓದಿ
Image
ಬೆಳ್ತಂಗಡಿಯಲ್ಲಿ ಗೋಡಂಬಿ ಅಕಾರದ ಮೊಟ್ಟೆ ಇಡುತ್ತಿರುವ ಕೋಳಿ; ಫೋಟೋಗಳು ಇಲ್ಲಿವೆ
Image
Viral Video: ಛಾಯಾಗ್ರಾಹಕರ ಮುಂದೆ ಕಿರುಚುತ್ತಾ ಅರೆ ಬೆತ್ತಲೆಯಾದ ಮಹಿಳೆ: ಮುಂದೆ ಆಗಿದ್ದೇನು?
Image
ಬಾಗಲಕೋಟೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ, ಮಳೆಯಿಂದ ಜಿಲ್ಲೆಯಲ್ಲಿ 114 ಮನೆಗಳು ಹಾನಿ
Image
ಚುನಾವಣೆ ವೇಳೆ ಮತ ಕೇಳೋಕೆ ಬಂದರೆ ಬುದ್ಧಿ ಕಲಿಸುತ್ತೇವೆ; ಕೊಪ್ಪಳ ಮಹಿಳೆ ವಿಡಿಯೋ ವೈರಲ್

ತಡೆಗೋಡೆ ಕುಸಿತ: ದೇವನಹಳ್ಳಿ: ಕಳೆರ ಮೂರು ದಿನಗಳಿಂದ ಭಾರಿ ಗಾಳಿ, ಮಳೆಯಾಗುತ್ತಿರುವ ಹಿನ್ನೆಲೆ, ಮೇಲ್ಸೇತುವೆ ತಡೆಗೋಡೆ ಮತ್ತು ಮಣ್ಣು ಕುಸಿದಿದೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೇಲ್ಸೇತುವೆ ಈ‌ ಹಿಂದೆಯು ಉದ್ಘಾಟನೆಗೂ ಮುನ್ನ ಕುಸಿತವಾಗಿತ್ತು. ನಂತರ ತೇಪೆ ಹಾಕಿ ಉದ್ಘಾಟನೆ ಮಾಡಿದ್ದರು. ಇದೀಗ ಮೂರನೆ ಬಾರಿಗೆ ಮತ್ತೆ ಕುಸಿದಿದೆ. ಮಣ್ಣು ಕುಸಿದಿರುವ ಕಾರಣ ವಾಹನ ಸವಾರರಲ್ಲಿ ಆತಂಕ ಹೆಚ್ಚಾಗಿದೆ. ಮೇಲ್ಸೇತುವೆಯ ಒಂದು ಬದಿಯ ರಸ್ತೆ ಸಂಚಾರ ಬಂದ್ ಆಗಿದೆ.

ಪರಿಹಾರ ಬಿಡುಗಡೆಗೆ ಸಿದ್ಧತೆ: ಇನ್ನು ಬೆಂಗಳೂರಿನಲ್ಲಿ ರಣಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಪರಿಹಾರ ಬಿಡುಗಡೆಗೆ ಸಿದ್ಧತೆ ನಡೆಯುತ್ತಿದೆ. ಸಿಎಂ ಮಳೆ ಹಾನಿಗೆ 25 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಸರ್ವೆ ಮೂಲಕ ಹಾನಿಗೊಳಗಾದ 3,453 ಮನೆಗಳ ಗುರುತು ಮಾಡಿ 8,63,25,000 ರೂಪಾಯಿ ಪರಿಹಾರ ನೀಡಲಾಗುತ್ತದೆ. ಸದ್ಯ ಬಿಬಿಎಂಪಿ ಅಧಿಕಾರಿಗಳು ಮನೆಗಳ ಸರ್ವೆ ಮಾಡುತ್ತಿದ್ದಾರೆ ಎಂದು ಬಿಬಿಎಂಪಿ ಕಲ್ಯಾಣ ಇಲಾಖೆ ವಿಶೇಷ ಆಯುಕ್ತ ಶರತ್​ ಮಾಹಿತಿ ನೀಡಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:18 pm, Sat, 21 May 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ