AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ಗಾಳಿಪಟದ ಮಾಂಜಾ ದಾರಕ್ಕೆ ಯುವಕನ ಕತ್ತು ಕಟ್; ಚಿಕಿತ್ಸೆ ಫಲಕಾರಿಯಾಗದೇ ಸಾವು

ನಗರದ ಡಂಬಳ ನಾಕಾ ಬಳಿ ಗಾಳಿಪಟ(Kite)ದ "ಮಾಂಜಾ" ದಾರಕ್ಕೆ ಸಿಲುಕಿ ಯುವಕನ ಕತ್ತು ಕಟ್ ಆಗಿತ್ತು. ಬಳಿಕ ಗದಗನ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕಳೆದ ಆರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರವಿ ಎಂಬ ಯುವಕ ಇಂದು (ಜೂ.9) ಚಿಕಿತ್ಸೆ ಫಲಕಾರಿಯಾಗದೆ ಧಾರುಣ ಅಂತ್ಯ ಕಂಡಿದ್ದಾನೆ.

Gadag News: ಗಾಳಿಪಟದ ಮಾಂಜಾ ದಾರಕ್ಕೆ ಯುವಕನ ಕತ್ತು ಕಟ್; ಚಿಕಿತ್ಸೆ ಫಲಕಾರಿಯಾಗದೇ ಸಾವು
ಗಾಳಿಪಟದ ದಾರಕ್ಕೆ ಸಿಲುಕಿ ಯುವಕ ಸಾವು
ಕಿರಣ್ ಹನುಮಂತ್​ ಮಾದಾರ್
|

Updated on:Jun 09, 2023 | 2:49 PM

Share

ಗದಗ: ನಗರದ ಡಂಬಳ ನಾಕಾ ಬಳಿ ಗಾಳಿಪಟ(Kite)ದ “ಮಾಂಜಾ” ದಾರಕ್ಕೆ ಸಿಲುಕಿ ಯುವಕನ ಕತ್ತು ಕಟ್ ಆಗಿತ್ತು. ಬಳಿಕ ಗದಗ(Gadag)ನ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಕಳೆದ ಆರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರವಿ ಎಂಬ ಯುವಕ ಇಂದು (ಜೂ.9) ಚಿಕಿತ್ಸೆ ಫಲಕಾರಿಯಾಗದೆ ಧಾರುಣ ಅಂತ್ಯ ಕಂಡಿದ್ದಾನೆ. ಪಿ.ರವಿ ಮೃತ ಯುವಕ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿಯಾದ ರವಿ. ಗದಗ ನಗರದ ಬಾರ್​ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಕಳೆದ ಭಾನುವಾರ(ಜೂ.4) ಕಾರ ಹುಣ್ಣಿಮೆಯಂದು ಅವಳಿ ನಗರದಲ್ಲಿ ಗಾಳಿಪಟ ಹಾರಾಡಿಸಲಾಗುತ್ತಿತ್ತು. ಈ ವೇಳೆ ಬೈಕ್ ಮೇಲೆ ಹೋಗುವಾಗ ಗಾಳಿಪಟದ ದಾರ ಆತನ ಕತ್ತು ಸೀಳಿತ್ತು. ಇದೀಗ ಯುವಕ ಸಾವನ್ನಪ್ಪಿದ್ದು, ಮಗನನ್ನು ಕಳೆದುಕೊಂಡು ತಾಯಿ ಕಣ್ಣೀರು ಹಾಕುತ್ತಿದ್ದಾಳೆ. ಈ ಕುರಿತು ಗದಗ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಾಲ್ಕೈದು‌ ಜನರ ಜೀವಕ್ಕೆ ಕುತ್ತು ತಂದ ನಿಷೇಧಿತ ಗಾಳಿಪಟ ಮಾಂಜಾ ದಾರ

ಗದಗ: ಗಾಳಿಪಟ ಹಾರಿಸಲು ಬಳಕೆ ಮಾಡುವ “ಮಾಂಜಾ” ದಾರ ನಿಷೇಧ ಕಾಗದದಲ್ಲಷ್ಟೇ ಉಳಿದಿದೆ. ಅಪಾಯಕಾರಿ ಮಾಂಜಾ ದಾರ ಮಾರಾಟ, ಬಳಕೆ ನಗರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು, ಫ್ಯಾನ್ಸಿ ಸ್ಟೋರ್‌ಗಳು, ಸಣ್ಣಪುಟ್ಟ ಅಂಗಡಿಗಳಲ್ಲಿ ಈ ದಾರವು ಸುಲಭವಾಗಿ ಸಿಗುತ್ತಿದೆ. ಇವುಗಳು ಪ್ರಾಣಿ-ಪಕ್ಷಿಗಳು ಮಾತ್ರವಲ್ಲದೆ ಮನುಷ್ಯರ ಪ್ರಾಣಕ್ಕೂ ಕಂಟಕವಾಗಿವೆ. ಗದಗ-ಬೆಟಗೇರಿ ಅವಳಿ ನಗರದ ರಸ್ತೆಯಲ್ಲಿ ಹರಿತವಾದ ಗಾಳಿಪಟ ದಾರದಿಂದ ಬೈಕ್ ಸವಾರರ ಕತ್ತು, ಕಾಲು, ಕೈಗೆ ಗಾಯವಾಗಿದೆ. ಕಾರಹುಣ್ಣಿಮೆ ಒಂದೇ ದಿನ ಓರ್ವ ರೈಲ್ವೇ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ 6 ವರ್ಷದ ಬಾಲಕ ಸಾವು

ಇನ್ನು ಬ್ಯಾನ್ ಆದ ಮಾಂಝಾ ದಾರದಿಂದ ಗಾಳಿಪಟ ಹಾರಾಟ ಮಾಡಲಾಗುತ್ತಿದೆ. ಇದರಿಂದ ಪಕ್ಷಿಗಳಿಗೆ ಮತ್ತು ಮನುಷ್ಯರ ಜೀವಕ್ಕೆ ಕುತ್ತು ಇದೆ. ಇದನ್ನು ಮಾರಾಟ ಮತ್ತು ಬಳಕೆ ಮಾಡದಂತೆ ತಡೆಗಟ್ಟಬೇಕೆಂದು ಸಂಘಟನೆಗಳು 15 ದಿನಗಳ ಹಿಂದೆಯೇ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆದರೂ ಕೂಡ ಜಿಲ್ಲಾಡಳಿತ ಡೋಂಟ್​ ಕೇರ್​ ಎಂದಿದೆ. ಆದರೀಗ ಗಾಳಿಪಟದ ದಾರಕ್ಕೆ ಅಮಾಯಕ ಯುವಕ ಬಲಿಯಾಗಿದ್ದು ಮಾತ್ರ ಶೋಚನೀಯ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Fri, 9 June 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?