AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕಾಣೆಯಾಗಿದ್ದ ಮಹಿಳೆ ಗ್ರಾಮದ ಬಾವಿಯಲ್ಲಿ 3 ದಿನದ ಬಳಿಕ ಪತ್ತೆ!

ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ತೋಟಗಂಟಿ ಗ್ರಾಮದಲ್ಲಿ ವಿಚಿತ್ರ ಘಟನೆ ನಡೆದಿದೆ. ಈ ಘಟನೆಯಿಂದ ಗ್ರಾಮಸ್ಥರು ಅಚ್ಚರಿ ಮತ್ತು ಭಯಭೀತರಾಗಿದ್ದಾರೆ. ನಸುಕಿನ ಜಾವ ಮನೆ ಅಂಗಳದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಏಕಾಏಕಿ ಕಾಣೆಯಾಗಿ, ಮೂರು ದಿನದ ಬಳಿಕ ನೀರಿಲ್ಲ ಬಾವಿಯಲ್ಲಿ ಪತ್ತೆಯಾಗಿದ್ದಾಳೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ವಿವೇಕ ಬಿರಾದಾರ|

Updated on:Aug 30, 2024 | 1:03 PM

Share

ಗದಗ, ಆಗಸ್ಟ್​ 30: ಕಾಣೆಯಾಗಿದ್ದ ಮಹಿಳೆ (Woman) ಮೂರು ದಿನದ ಬಳಿಕ ಬಾವಿಯಲ್ಲಿ (Well) ಪತ್ತೆಯಾದ ಘಟನೆ ಗಜೇಂದ್ರಗಡ (Gajendragad) ತಾಲೂಕಿನ ತೋಟಗಂಟಿ ಗ್ರಾಮದಲ್ಲಿ ನಡೆದಿದೆ. ಪಾರ್ವತಿ (23) ಕಾಣೆಯಾಗಿದ್ದ ಸಂತ್ರಸ್ತೆ. ಪಾರ್ವತಿ ಬಾವಿಯಲ್ಲಿ ಬದುಕಿದ್ದೇ ಪವಾಡ ಎಂದು ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸದ್ಯ ಪಾರ್ವತಿಯವರಿಗೆ ಗದಗ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆರು ತಿಂಗಳ ಹಿಂದಷ್ಟೇ ಪಾರ್ವತಿಯ ಮದುವೆಯಾಗಿದೆ. ಆಗಸ್ಟ್‌ 20 ರಂದು ನಸುಕಿನ ಜಾವ ಮನೆಯ ಅಂಗಳದಲ್ಲಿ ಪಾರ್ವತಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತ ಮಹಿಳೆ, ಏಕಾಏಕಿ ಪಾರ್ವತಿಯವರ ಕುತ್ತಿಗೆ ಹಿಡಿದು ಮನೆ ಬಿಟ್ಟು ಬರುವಂತೆ ಬಲವಂತ ಮಾಡಿದ್ದಾಳೆ. ಅಲ್ಲದೆ, ಕೈ ಬಳೆ, ಕಾಲುಂಗರ ನೀಡುವಂತೆ ಒತ್ತಾಯ ಮಾಡಿದ್ದಾಳೆ. ಬಳಿಕ ಪಾರ್ವತಿ ಅವರ ಕಣ್ಣು ಕಾಣದಂತೆ ಮರೆ ಮಾಡಿ ಕುತ್ತಿಗೆ ಹಿಡಿದು ಎಳೆದುಕೊಡು ಹೋಗಿದ್ದಾಳೆ. ನಂತರ ತಾಳಿ ಕೊಡುವಂತೆ ಕೇಳಿ, ನೀರಿಲ್ಲದ ಬಾವಿಗೆ ತಳ್ಳಿ ಪರಾರಿಯಾಗಿದ್ದಾಳೆ.

ಇದನ್ನೂ ಓದಿ: 14 ವರ್ಷಗಳಿಂದ ಅತಂತ್ರ ಜೀವನ ನಡೆಸುತ್ತಿರೋ ಗೊಮ್ಮಗೋಳ ಗ್ರಾಮಸ್ಥರು

ಘಟನೆ ಸಂಬಂಧ ಸಂತ್ರಸ್ತೆ ಪಾರ್ವತಿ ಮಾತನಾಡಿ, ಕುತ್ತಿಗೆ ಹಿಡಿದು ಮನೆಯ ಅಂಗಳದಿಂದ ನನ್ನನ್ನು ಎಳೆದುಕೊಂಡು ಹೋದಳು. ನಂತರ ತಾಳಿ ಕೇಳಿ ನನ್ನನ್ನು ಬಾವಿಗೆ ತಳ್ಳಿದಳು. ಬಾವಿಗೆ ಬಿದ್ದ ಮರುದಿನ ನನಗೆ ಪ್ರಜ್ಞೆ ಬಂತು. ಆಗ ಕಿರುಚಿದರು ಸಹಾಯಕ್ಕೆ ಯಾರು ಬರಲಿಲ್ಲ. ಆಗಸ್ಟ್​​ 22 ರಂದು ನನ್ನ ಧ್ವನಿ ಕೇಳಿ ಜನರು ಕಾಪಾಡಿದರು. ಆದರೆ, ಯಾರು ನನನ್ನು ಎಳೆದುಕೊಂಡು ಹೋದರು ಎಂಬ ನಿಖರ ಮಾಹಿತಿ ಗೊತ್ತಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:47 pm, Fri, 30 August 24

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು