AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ ಭೀಕರ ಅಪಘಾತ: ಹಸೆಮಣೆ ಏರಬೇಕಿದ್ದ ಇಬ್ಬರು ಪೊಲೀಸ್​ ಕಾನ್ಸ್​​ಟೇಬಲ್​​​ ಸೇರಿ ಮೂವರು ಸಾವು

ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರು ಪೊಲೀಸ್ ಕಾನ್ಸ್ಟೇಬಲ್‌ಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬಳಿಕ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಟಿವಿ9 ಪೊಲೀಸ್ ಸೆಲ್ಯೂಟ್ ಪ್ರಶಸ್ತಿ ಪಡೆದಿದ್ದ ಅರ್ಜುನ್ ನೆಲ್ಲೂರ ಕೂಡ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಗದಗ ಭೀಕರ ಅಪಘಾತ: ಹಸೆಮಣೆ ಏರಬೇಕಿದ್ದ ಇಬ್ಬರು ಪೊಲೀಸ್​ ಕಾನ್ಸ್​​ಟೇಬಲ್​​​ ಸೇರಿ ಮೂವರು ಸಾವು
ಭೀಕರ ಅಪಘಾತ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on:Sep 19, 2025 | 11:15 AM

Share

ಗದಗ, ಸೆಪ್ಟೆಂಬರ್ 19: ಭೀಕರ ರಸ್ತೆ ಅಪಘಾತದಲ್ಲಿ (Accident) ಇಬ್ಬರು ಕಾನ್ಸ್​ಟೇಬಲ್​ಗಳು ಸೇರಿದಂತೆ ಮೂವರು (death) ದುರ್ಮರಣ ಹೊಂದಿರುವಂತಹ ಘಟನೆ ಗದಗ ತಾಲೂಕಿನ ಹರ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ. ಕಾರಿನಲ್ಲಿದ್ದ ಪೊಲೀಸ್​ ಕಾನ್ಸ್​ಟೇಬಲ್​ಗಳಾದ ಅರ್ಜುನ್ ನೆಲ್ಲೂರ(29) ಮತ್ತು ವೀರೇಶ್ ಉಪ್ಪಾರ(31) ಸೇರಿ ಅರ್ಜುನ್ ಚಿಕ್ಕಪ್ಪ ರವಿ ನೆಲ್ಲೂರ(43) ಮೃತರು. ಅರ್ಜುನ್ ನೆಲ್ಲೂರ ಟಿವಿ9 ಪೊಲೀಸ್ ಸೆಲ್ಯೂಟ್ ಅವಾರ್ಡ್​ ಪಡೆದಿದ್ದರು.

ನಡೆದದ್ದೇನು?

ಅರ್ಜುನ್ ನೆಲ್ಲೂರ, ವೀರೇಶ್ ಉಪ್ಪಾರ ಮತ್ತು ರವಿ ನೆಲ್ಲೂರ ಕಾರಿನಲ್ಲಿ ತೆರಳುತ್ತಿದ್ದರು. ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ‌ ಬಳಿಕ ಬಸ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಭೀಕರತೆಗೆ ಕಾರಿನ ಬಿಡಿಭಾಗಗಳು ಚೆಲ್ಲಾಪಿಲ್ಲಿಯಾಗಿವೆ.

ಅಪಘಾತದ ಭಯಾನಕತೆ ಬಿಚ್ವಿಟ್ಟ ಗೋವಾ ಬಸ್ ಚಾಲಕ ಮತ್ತು ನಿರ್ವಾಹಕ

ಟಿವಿ9ಗೆ ಗೋವಾ ಬಸ್ ಚಾಲಕ ದಿಲೀಪ್ ಹಾಗೂ ನಿರ್ವಾಹಕ ಹೀರೇಶ ಅಪಘಾತದ ಭಯಾನಕತೆ ಬಿಚ್ವಿಟ್ಟಿದ್ದಾರೆ. ಕಾರು ವೇಗವಾಗಿ ಬರುತ್ತಿತ್ತು. ಏಕಾಏಕಿ ಡಿವೈಡರ್​ಗೆ ಡಿಕ್ಕಿ ಹೊಡೆದು ಜಂಪ್ ಆಗಿ‌ ಫುಟ್‌ಬಾಲ್​​ನಂತೆ ಬಂದು ಬಸ್​​ಗೆ ಡಿಕ್ಕಿ ಹೊಡೆಯಿತು. ಆಗ ಎದೆ ಝಲ್ ಅಂತು. ಕೆಳಗೆ ಇಳಿದು ನೋಡಿದರೆ ಕಾರ್​​ನಲ್ಲಿ‌ ಇದ್ದ ಮೂವರು ಸಾವನ್ನಪ್ಪಿದ್ದರು ಎಂದು ಹೇಳಿದ್ದಾರೆ.

ಹಸೆಮಣೆ ಏರಬೇಕಿದ್ದವರು ದಾರುಣ ಅಂತ್ಯ

ಇನ್ನು ಘಟನೆಯಲ್ಲಿ ಮೃತಪಟ್ಟ ಮೂವರ ಪೈಕಿ ಇಬ್ಬರು ಕಾನ್ಸ್​ಟೇಬಲ್​ಗಳು ಹಸೆಮಣೆ ಏರಬೇಕಿತ್ತು. ಅರ್ಜುನ ನೆಲ್ಲೂರ ಮತ್ತು ವೀರೇಶ್ ಉಪ್ಪಾರ ಹಸೆಮಣಿ ಏರಬೇಕಿತ್ತು. ಇವರಿಬ್ಬರು ಪೊಲೀಸ್ ಇಲಾಖೆ ಸೇರಿ ಏಳು ವರ್ಷವಾಗಿತ್ತು.

ಇದನ್ನೂ ಓದಿ: ಸಾವಿನಲ್ಲೂ ಮಾನವೀಯತೆ ಮೆರೆದ ಕೆಎಸ್​ಆರ್​ಟಿಸಿ ಚಾಲಕ: ಹೃದಯಾಘಾತವಾದರೂ ಬಸ್ ನಿಲ್ಲಿಸಿ ಪ್ರಯಾಣಿಕರ ರಕ್ಷಣೆ!

ವೀರೇಶ್ ಉಪ್ಪಾರ ಕೊಪ್ಪಳ‌ ಜಿಲ್ಲಾ ಪೊಲೀಸ್​​​ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸಿದರೆ, ಅರ್ಜುನ್ ನೆಲ್ಲೂರ ಹಾವೇರಿ ಜಿಲ್ಲಾ ಪೊಲೀಸ್ ವೈರ್ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು.  ಅರ್ಜುನ್ ನೆಲ್ಲೂರ ಟಿವಿ9 ಪೊಲೀಸ್ ಸೆಲ್ಯೂಟ್ ಅವಾರ್ಡ್​ ಪಡೆದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:50 am, Fri, 19 September 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ