AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಸಾಬೀತು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಕುಡಿಯುವ ನೀರು ತರಲು ಹೋಗುತ್ತಿದ್ದಾಗ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣ 2019ರ ಸೆಪ್ಟೆಂಬರ್​ನಲ್ಲಿ ನಡೆದಿತ್ತು. ಈ ಪ್ರಕರಣ ಗದಗ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಇಂದು ಅಪರಾಧಿಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಲಾಗಿದೆ.

ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಸಾಬೀತು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿ ಶಂಕರಗೌಡನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿದ ಗದಗ ನ್ಯಾಯಾಲಯ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: Rakesh Nayak Manchi|

Updated on:Jul 17, 2023 | 10:19 PM

Share

ಗದಗ, ಜುಲೈ 17: ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಗದಗ (Gadag) ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಡ್ಡದ ಮಲ್ಲಾಪೂರ ಗ್ರಾಮದ ಶಂಕರಗೌಡ ಶಿಕ್ಷೆಗೆ ಗುರಿಯಾದ ಅಪರಾಧಿ.

ಅಪ್ರಾಪ್ತ ಬಾಲಕಿ 2019ರ ಸೆ.5 ರಂದು ಕುಡಿಯುವ ನೀರು ತರಲು ಹೋಗುತ್ತಿದ್ದಾಗ ಆರೋಪಿ ಶಂಕರಗೌಡ, ಬಾಲಕಿಯನ್ನು ರೋಣ ಪೊಲೀಸ್ ಠಾಣಾ ವ್ಯಾಪ್ತಿಯ ಜಮೀನಿನ ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ ಅತ್ಯಾಚಾರ ಮಾಡಿದ್ದನು. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಗುನ್ನಾ ನಂ.129/2019 ಕಲಂ 323-376(2 (ಐ), 376(3)-504-506 IPC ಕಲಂ 4&6ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಗದಗ: ಸಿಂಜೆಂಟಾ ವಿರುದ್ಧ ರೈತರ ವಿನೂತನ ಪ್ರತಿಭಟನೆ, ಸೂರ್ಯಕಾಂತಿ ಎಸ್​ಬಿ-293 ಹೈಬ್ರಿಡ್ ಬೀಜ ಮಾರಾಟಕ್ಕೆ ತಡೆ

ಅತ್ಯಾಚಾರ ಸಂಬಂಧ ಅಂದಿನ ಸಿಪಿಐ ಎಂ.ಐ. ನಡುವಿನಮನಿ ಅವರು ಪ್ರಕರಣ ದಾಖಲಿಸಿ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿಯನ್ನು 2019ರ ಅ.22 ರಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ರಾಜೇಶ್ವರ ಶೆಟ್ಟಿ, ಅಪರಾಧ ಸಾಬೀತಾದ ಹಿನ್ನೆಲೆ ಆರೋಪಿ ಶಂಕರಗೌಡನಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಅಮರೇಶ ಹಿರೇಮಠ ಅವರು ವಾದ ಮಂಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 pm, Mon, 17 July 23

Follow Us
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮಳೆ ವಿಚಾರವಾಗಿ ಪ್ರಧಾನಿ ಮೋದಿ ಎಚ್ಚರಿಕೆ ಗಂಟೆ ಕೊಟ್ಟಿದ್ದಾರೆ: ಸಿಎಂ
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ವಿಡಿಯೋ ವೈರಲ್
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
ಇರಾನ್​ನ ಬುಶೆಹರ್ ಪರಮಾಣು ವಿದ್ಯುತ್ ಸ್ಥಾವರದ ಮೇಲೆ ಅಮೆರಿಕ ದಾಳಿ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ
RSS ವಿರುದ್ಧ ಮಾತಾಡಿದ್ರೆ ಕಾಂಗ್ರೆಸ್​​ನಲ್ಲಿ ಬಡ್ತಿ: ಯತ್ನಾಳ್​​ ಆರೋಪ