AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಮನೆ ಕಳೆದುಕೊಂಡು ತಿಂಗಳುಗಳಾದರೂ ಇನ್ನು ಸಿಗದ ಪರಿಹಾರ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಜನರು

ಜಿಲ್ಲೆಯಲ್ಲಿ ತಿಂಗಳುಗಳ ಹಿಂದೆ ಸುರಿದ ಭಾರಿ ಮಳೆಗೆ ಗ್ರಾಮೀಣ ಪ್ರದೇಶದ ಮನೆಗಳು ಬಿದ್ದಿದ್ದು, ಮನೆ ಕಳೆದುಕೊಂಡು ಕಂಗಾಲಾಗಿದ್ದಾರೆ. ಜನರ ಗೋಳಾಟ ಹೇಳತೀರದು, ಇತ್ತ ಸರ್ಕಾರದಿಂದ ಬರಬೇಕಾದ ಪರಿಹಾರ ಕೂಡ ಬಂದಿಲ್ಲ.

ಗದಗ: ಮನೆ ಕಳೆದುಕೊಂಡು ತಿಂಗಳುಗಳಾದರೂ ಇನ್ನು ಸಿಗದ ಪರಿಹಾರ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಜನರು
ಗದಗ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 13, 2022 | 3:22 PM

Share

ಗದಗ: ಜಿಲ್ಲೆಯ ರೋಣ ತಾಲೂಕಿನ ನಾಗರಾಳ ಗ್ರಾಮದಲ್ಲಿ ಎರಡು ತಿಂಗಳ ಹಿಂದೆ ಸುರಿದ ರಕ್ಕಸ ಮಳೆಗೆ ಸಾಕಷ್ಟು ಮನೆಗಳು ಕುಸಿದಿದ್ದು, ಸರ್ಕಾರ ಪರಿಹಾರ ಘೋಷಣೆ ಮಾಡುವ ಮೂಲಕ ಬಡ ಜನರ ನೆಮ್ಮದಿಗೆ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಆದರೆ ಮಳೆ ನಿಂತು ಎರಡು ತಿಂಗಳು ಕಳೆದರೂ ಬಹುತೇಕ ನಿಜವಾದ ಫಲಾನುಭವಿಗಳಿಗೆ ಪರಿಹಾರ ಬಂದಿಲ್ಲ. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಒಂದು ರೂಪಾಯಿ ಪರಿಹಾರ ಬಂದಿಲ್ಲ. ಹೀಗಾಗಿ ಇಲ್ಲಿನ ಜನರು ಇದೇ ಮುರುಕುಲ ಮನೆಯಲ್ಲಿ ಜೀವನ ಮಾಡುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿನ ಮಣ್ಣಿನ ಮನೆಗಳಲ್ಲಿ ವಾಸಿಸುವವರ ಸ್ಥಿತಿಯಂತೂ ಯಾರಿಗೂ ಬೇಡ. ನಿರಂತರ ಸುರಿದ ಭಾರಿ ಮಳೆಗೆ ಹಳ್ಳಿಗಳಲ್ಲಿನ ಮಣ್ಣಿನ ಮನೆಗಳು ಕುಸಿದಿವೆ. ಇದ್ದ ಮನೆಗಳನ್ನು ಕಳೆದುಕೊಂಡು ಜನರು ಕಂಗಾಲಾಗಿದ್ದಾರೆ. ಓರ್ವ 105 ವರ್ಷದ ಅಡವೆವ್ವ ಎಂಬ ಅಜ್ಜಿಯ ಬದುಕು ನೋಡಿದರೆ ಅಯ್ಯೋ ಪಾಪ ಎನಿಸುತ್ತದೆ. ಈ ಅಜ್ಜಿಯ ಮನೆ ಬಹುತೇಕ ಕುಸಿದಿದ್ದು, ಆ ಬಡವರ ಬದುಕು ತೀರ ದುಸ್ಥರವಾಗಿದೆ. ಸತ್ತರೆ ಇಲ್ಲೇ ಸಾಯ್ತೀವಿ. ಬೇರೆ ಕಡೆ ಇರೋಕು ಜಾಗವಿಲ್ಲ. ರಿಪೇರಿ ಮಾಡಬೇಕು ಎಂದರೆ ಸರ್ಕಾರ ಒಂದು ಪೈಸೆ ಕೊಟ್ಟಿಲ್ಲ ಎಂದು ಕಿಡಿಕಾರುತ್ತಿದ್ದಾರೆ.

ನಾಗರಾಳ ಗ್ರಾಮದಲ್ಲಿ ಬಹುತೇಕ ಮಣ್ಣಿನ ಮನೆಗಳೇ ಇವೆ. ಹೀಗಾಗಿ ನಿರಂತರ ಸುರಿದ ಮಳೆಗೆ ಪೂರ್ತಿ, ಭಾಗಶಃ, ಅಲ್ಪಸ್ವಲ್ಪ ಮನೆಗಳು ಕುಸಿದಿವೆ. ಕೆಲವರು ಬಿದ್ದ ಮನೆಗಳಿಗೆ ಪ್ಲಾಸ್ಟಿಕ್ ಹಾಳೆ ಹಾಕಿ ಅದೇ ಮನೆಯಲ್ಲಿ ವಾಸವಾಗಿದ್ದಾರೆ. ಇನ್ನು ಗ್ರಾಮಲೆಕ್ಕಾಧಿಕಾರಿಗಳು ಸರ್ವೇ ಮಾಡಿಕೊಂಡು ಹೋಗಿದ್ದಾರಂತೆ, ಆದರೆ ಮನೆ ಬಿದ್ದ ಕುಟುಂಬಗಳಿಗೆ ಪರಿಹಾರ ಮಾತ್ರ ಸಿಕ್ಕಿಲ್ಲ. ಇದೇ ಗ್ರಾಮದಲ್ಲಿ ಮನೆ ಬೀಳದ ಕೆಲ ಕುಟುಂಬಗಳಿಗೆ ಪರಿಹಾರ ಹಂಚಿಕೆ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇನ್ನು ಪರಿಹಾರ ಹಂಚಿಕೆಯ ಗೋಲ್ಮಾಲ್ ಬಗ್ಗೆ ಜಿಲ್ಲಾಧಿಕಾರಿಗಳು, ರೋಣ ತಹಶೀಲ್ದಾರ್​, ಪಿಡಿಓ ಸೇರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಕ್ಯಾರೆ ಎನ್ನುತ್ತಿಲ್ಲ. ಜಿಲ್ಲಾಡಳಿತದ ಪರಿಹಾರ ಹಂಚಿಕೆ ಪಟ್ಟಿಯಲ್ಲಿ ಮನೆ ಬಿದ್ದ ಕುಟುಂಬದ ಹೆಸರು ನಾಪತ್ತೆಯಾಗಿದೆ. ಮನೆ ಬೀಳದ ಕುಟುಂಬಗಳ ಹೆಸರು ಸೇರ್ಪಡೆಯಾಗಿದ್ದು, ಪಂಚಾಯತ್ ಸಿಬ್ಬಂದಿಗಳು ಗೋಲ್ಮಾಲ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:ಕೊರೊನಾದಿಂದ ಪ್ರಾಣ ತೆತ್ತವರು ಐನೂರು ನೌಕರರು, ಪರಿಹಾರ ಸಿಕ್ಕಿದ್ದು 11 ಕುಟ್ಟುಂಬಕ್ಕೆ ಮಾತ್ರ: ಕೊಟ್ಟ ಮಾತು ತಪ್ಪಿದ ಸರ್ಕಾರ

ಬಡವರ ಗೋಳಾಟಕ್ಕೆ ಜಿಲ್ಲಾಡಳಿತವೂ ಮೌನವಾಗಿದೆ. ಹೀಗಾಗಿ ಗದಗ ಜಿಲ್ಲೆಯಲ್ಲಿ ಬಡವರ ಗೋಳಾಟ ಕೇಳುವವರೇ ಇಲ್ಲದಂತಾಗಿದೆ. ಇನ್ನು ಅಧಿಕಾರಿಗಳೇ ನ್ಯಾಯ ಕೊಡಿಸುತ್ತಾರೆ ಎಂಬ ಭರವಸೆಯಿಂದ ಶಾಸಕರಿಗೂ ಹೇಳಿಲ್ಲವಂತೆ ಇದೀಗ ನಮ್ಮ ಶಾಸಕರಾದ ಸಚಿವ ಸಿ.ಸಿ ಪಾಟೀಲ್ ಅವರ ಗಮನಕ್ಕೆ ತರುತ್ತೇವೆ ಎಂದು ಮನೆ ಕಳೆದುಕೊಂಡ ಬಡವರು ಹೇಳಿದ್ದಾರೆ. ಇನ್ನಾದರೂ ಜಿಲ್ಲಾಡಳಿತ ಈ ಬಡಕುಟುಂಬಗಳಿಗೆ ಪರಿಹಾರ ನೀಡುತ್ತದೆಯೇ ಕಾದು ನೋಡಬೇಕಾಗಿದೆ.

ವರದಿ: ಸಂಜೀವ ಪಾಂಡ್ರೆ, ಟಿವಿ9 ಗದಗ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!