AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ರಸ್ತೆಯಲ್ಲಿ ಜಲ್ಲಿ ಕಲ್ಲು ಹಾಕಿ ಗುತ್ತಿಗೆದಾರ ಎಸ್ಕೇಪ್; ಓಡಾಡಲು ಸೂಕ್ತ ಮಾರ್ಗವಿಲ್ಲದೆ ರೈತರು ಕಂಗಾಲು

ತಾಲೂಕಿನ ಲಕ್ಕುಂಡಿ-ಕದಂಪೂರ ಸಂಪರ್ಕಿಸುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿತ್ತು. ಅಂದಿನ ಬಿಜೆಪಿ ಸರ್ಕಾರ ಡಾಂಬರೀಕಣ ಮಾಡುತ್ತದೆ ಎನ್ನುವ ಸುದ್ದಿಗೆ ರೈತರು, ಜನರು ಫುಲ್ ಖುಷ್ ಆಗಿದ್ದರು. ಕಾಮಗಾರಿ ಟೆಂಡರ್ ಆಗಿ ಕಾಮಗಾರಿಯೂ ಆರಂಭವಾಗಿತ್ತು. ಆದರೆ, ಇದೀಗ ರಸ್ತೆ ತುಂಬೆಲ್ಲ ಜಲ್ಲಿ ಕಲ್ಲು ಹಾಕಿ ಕಾಮಗಾರಿ ಅರ್ಧಕ್ಕೆ ಬಿಟ್ಟು ಗುತ್ತಿಗೆದಾರ ಎಸ್ಕೇಪ್ ಆಗಿದ್ದಾನೆ ಎಂದು ರೈತರು ಕೆಂಡಕಾರಿದ್ದಾರೆ.

ಗದಗ: ರಸ್ತೆಯಲ್ಲಿ ಜಲ್ಲಿ ಕಲ್ಲು ಹಾಕಿ ಗುತ್ತಿಗೆದಾರ ಎಸ್ಕೇಪ್; ಓಡಾಡಲು ಸೂಕ್ತ ಮಾರ್ಗವಿಲ್ಲದೆ ರೈತರು ಕಂಗಾಲು
ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Nov 24, 2023 | 7:57 PM

Share

ಗದಗ, ನ.24: ಗದಗ ತಾಲೂಕಿನ ಲಕ್ಕುಂಡಿ, ಕದಂಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಚುನಾವಣೆ ಪೂರ್ವದಲ್ಲಿ ಆರು ಕಿಲೋಮೀಟರ್ ರಸ್ತೆ ಸುಧಾರಣೆ ಕಾಮಗಾರಿ ಟೆಂಡರ್(Tender Work) ಆಗಿದೆ. ವಿಧಾನಸಭೆ ಚುನಾವಣೆಗೆ ಮುಂಚೆ ಕಾಮಗಾರಿಯೂ ಆರಂಭವಾಗಿದೆ. 4.50 ಕೋಟಿ ವೆಚ್ಚದ ಈ ರಸ್ತೆ ಕಾಮಗಾರಿ ಟೆಂಡರ್ ಪಡೆದ ಗುತ್ತಿಗೆದಾರ ದೊಡ್ಡದಾದ ಜಲ್ಲಿ ಕಲ್ಲು ಹಾಕಿ ಅರ್ಧ ಕಾಮಗಾರಿ ಮಾಡಿ ಎಸ್ಕೇಪ್ ಆಗಿದ್ದಾನೆ. ಇದರಿಂದ ನೂರಾರು ರೈತರು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ಲಕ್ಕುಂಡಿ ಗ್ರಾಮದ ನೂರಾರು ರೈತರ ಹೂವಿನ ತೋಟಗಳು ಈ ರಸ್ತೆಯಲ್ಲಿ ಇವೆ. ಈಗ ನಾಲ್ಕು ತಿಂಗಳಿಂದ ಶ್ರಾವಣಮಾಸ, ಗಣೇಶನ ಹಬ್ಬ, ದಸರಾ, ದೀಪಾವಳಿ ಹಬ್ಬದಲ್ಲಿ ಹೂವಿಗೆ ಭಾರಿ ಬೇಡಿಕೆಯಿದೆ. ಹೀಗಾಗಿ ನಿತ್ಯವೂ ಈ ರಸ್ತೆಯಲ್ಲಿ ನೂರಾರು ರೈತರು, ಕಾರ್ಮಿಕರು ಸಂಚಾರ ಮಾಡುತ್ತಾರೆ. ಆದ್ರೆ, ಈ ರಸ್ತೆ ರೈತರ ಪಾಲಿಗೆ ಸಾವಿನ ರಸ್ತೆಯಾಗಿದೆ. ನಸುಕಿನಲ್ಲಿ ಜಮೀನುಗಳಿಗೆ ಹೋಗುವ ಸಾಕಷ್ಟು ರೈತರು, ಬೈಕ್ ಸ್ಕಿಡ್ ಆಗಿ ಬಿದ್ದು, ಕೈಕಾಲು ಮುರಿದುಕೊಂಡಿದ್ದಾರಂತೆ. ಅಷ್ಟೇ ಟಂಟಂ, ಗೂಡ್ಸ್ ವಾಹನಗಳ ಟೈಯರ್​ಗಳು ಬ್ಲಾಸ್ಟ್ ಆಗುತ್ತಿವೆ. ಹೀಗಾಗಿ ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ರೈತರು ಈ ರಸ್ತೆಯಲ್ಲಿ ಸಂಚಾರ ಮಾಡುತ್ತಿದ್ದಾರೆ.

ಇದನ್ನೂ ಓದಿ:ನೈಸ್ ರಸ್ತೆ ಮೂಲಕ ಮಾದವಾರ – ಎಲೆಕ್ಟ್ರಾನಿಕ್‌ ಸಿಟಿ ನಡುವೆ ಬಿಎಂಟಿಸಿ ಬಸ್‌ ಸೇವೆ ಆರಂಭ

ಚುನಾವಣೆ ವೇಳೆ ಇಡೀ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿ ಮಾಡುತ್ತೇನೆ ಅಂದಿದ್ದರು. ಇದೇನಾ ರಸ್ತೆ ಅಭಿವೃದ್ಧಿ ಎಂದು ಜನರು ಕ್ಷೇತ್ರದ ಶಾಸರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಚುನಾವಣೆಗಿಂತಲೂ ಮುಂಚೆ ಜಲ್ಲಿ ಹಾಕಿ ಗುತ್ತಿಗೆದಾರ ಎಸ್ಕೇಪ್ ಆಗಿದ್ದಾನಂತೆ. ಕಲ್ಲು ರಾಶಿಯ ರಸ್ತೆಯಲ್ಲಿ ಬೈಕ್ ಸವಾರರು ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಸಾಕಷ್ಟು ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಡೋಂಟ್ ಕೇರ್ ಅಂತಿದ್ದಾರೆ. ಕಾಮಗಾರಿ ಪೂರ್ಣಗೊಳಿಸದೇ ಅರ್ಧಕ್ಕೆ ಬಿಟ್ಟು ಹೋಗಿದ್ದರಿಂದ ರೈತರು ನಿತ್ಯ ತೊಂದರೆ ಅನುಭವಿಸುವಂತಾಗಿದೆ.ರೈತರ ಜಮೀನುಗಳಿಗೆ ಕೃಷಿ ಚಟುವಟಿಕೆಯ ಪ್ರಮುಖ ರಸ್ತೆ ಇದಾಗಿದ್ದು, ಹದಗೆಟ್ಟ ರಸ್ತೆಯಿಂದ ಕೂಲಿ‌ ಕಾರ್ಮಿಕರು ಬಾರದ ಕಾರಣ ರೈತರು ಗೋಳಾಡುತ್ತಿದ್ದಾರೆ. ನೂರಾರು ಎಕರೆ ಹೂವಿನ ತೋಟಗಳ ಮಾಲೀಕರು ಕಾರ್ಮಿಕರ ಕೊರತೆಯಿಂದ ಅಕ್ಷರಶಃ ಕಂಗಾಲಾಗಿದ್ದಾರೆ. ಟಿವಿ9 ರಿಯಾಲಿಟ್ ಚೆಕ್ ವೇಳೆ ಲೋಕೋಪಯೋಗಿ ಇಲಾಖೆ ಚುನಾವಣೆ ಪೂರ್ವದ ಅಭಿವೃದ್ಧಿ ಪರ್ವದ ಅಸಲಿಯತ್ತು ಬಯಲಾಗಿದೆ.

ಇನ್ನು ಈ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ರೈತ ಮಹಿಳೆ ಹಿಗ್ಗಾಮುಗ್ಗಾ ಝಾಡಿಸಿದ್ದಾರೆ. ರಸ್ತೆ ಕಾಮಗಾರಿ‌ ಮಾಡದಿದ್ರೆ ಹಾಕಿದ‌ ಜಲ್ಲಿ ತೆಗೆದುಕೊಂಡು ಹೋಗಿ ಎಂದು ಕಿಡಿಕಾರಿದ್ದಾರೆ. ಶಾಸಕರು, ಅಧಿಕಾರಿಗಳಿಗೆ ಹೇಳಿ ಬೇಸತ್ತು ಹೋದ ರೈತರು, ಈಗ ಟಿವಿ9 ವಾಹಿನಿಯ ಮೊರೆ ಹೋಗಿದ್ದಾರೆ. ಟಿವಿ9 ಕ್ಯಾಮರಾದಲ್ಲಿ ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯ ಬಯಲಾಗಿದೆ. ಇಂಥ ರಸ್ತೆಯಲ್ಲಿ ಏನಾದ್ರೂ ಆದ್ರೆ, ಲೋಕೋಪಯೋಗಿ ಅಧಿಕಾರಿಗಳೇ ಹೊಣೆ ಎಂದು ರೈತರು ಆರೋಪಿಸಿದ್ದಾರೆ. ಶೀಘ್ರವೇ ಕಾಮಗಾರಿ ಆರಂಭ ಮಾಡದಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ಇನ್ನಾದರೂ ಲೋಕೋಪಯೋಗಿ ಸಚಿವರು, ಮೇಲಾಧಿಕಾರಿಗಳು ಇತ್ತ ಗಮನಹರಿಸಿ ರೈತರಿಗೆ, ಸಾರ್ವಜನಿಕರಿಗೆ ಆಗುತ್ತಿರುವ ನರಕಯಾತನೆ ತಪ್ಪಿಸಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ