AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?

ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿಗೆ ಓರ್ವ ವ್ಯಕ್ತಿ 25 ಲಕ್ಷ ರೂ ನೀಡಿ ಯಾಮಾರಿರುವಂತಹ ಘಟನೆ ಗದಗಿನಲ್ಲಿ ನಡೆದಿದೆ. ಈ ವಿಚಾರವಾಗಿ ದೂರು ನೀಡಲು ಹೋದ ವ್ಯಕ್ತಿಗೆ ರೋಣ ಸಿಪಿಐ ಬೆದರಿಕೆ ಹಾಕಿ 15 ಲಕ್ಷ ರೂ ಬೇಡಿಕೆ ಇಟ್ಟಿರುವ ಆರೋಪ ಕೇಳಿಬಂದಿದೆ.

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಸುಂದರಿಗೆ 25 ಲಕ್ಷ ರೂ ಕೊಟ್ಟ: ಮುಂದೇನಾಯ್ತು?
ರಾಘವೇಂದ್ರ ರಾಠೋಡ, ಇನ್​ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 27, 2025 | 11:32 AM

ಗದಗ, ಏಪ್ರಿಲ್ 27: ದೂರು ನೀಡಲು ಬಂದ ವ್ಯಕ್ತಿಯನ್ನು ಬೆದರಿಸಿದ (Threatens) ಸಿಪಿಐ, ಆತನಿಂದಲೇ 15 ಲಕ್ಷ ರೂ ಬೇಡಿಕೆ ಇಟ್ಟಿರುವಂತಹ ಘಟನೆ ನಗರಲ್ಲಿ ನಡೆದಿದೆ. ಗದಗ ಜಿಲ್ಲೆಯ ರೋಣ ಸಿಪಿಐ (CPI) ಸಿದ್ದಪ್ಪ ಬೀಳಗಿ ವಿರುದ್ಧ ಗಜೇಂದ್ರಗಡದ ರಾಘವೇಂದ್ರ ರಾಠೋಡ ಎಂಬಾತ ಗಂಭೀರ ಆರೋಪ ಮಾಡಿದ್ದಾರೆ. ಈಗಾಗಲೇ ಹೆದರಿಸಿ 3 ಲಕ್ಷ ರೂ. ಹಣ ವಸೂಲಿ‌ ಮಾಡಿದ್ದು, ಉಳಿದ ಹಣಕ್ಕಾಗಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ SP ಕಚೇರಿಗೆ ಲಿಖಿತ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವೆಂದು ಆರೋಪಿಸಿದ್ದಾರೆ. ಸದ್ಯ ಸಿದ್ದಪ್ಪ ಬೀಳಗಿ ಕಿರುಕುಳಕ್ಕೆ ರಾಘವೇಂದ್ರ ಕಂಗಾಲಾಗಿದ್ದಾರೆ.

ಘಟನೆ ‌ಹಿನ್ನಲೆ

ರಾಘವೇಂದ್ರ ರಾಠೋಡಗೆ ಇನ್​ಸ್ಟಾಗ್ರಾಂನಲ್ಲಿ ಓರ್ವ ಯುವತಿ ಪರಿಚಯವಾಗಿದ್ದಾಳೆ. ದಿನಕಳೆದಂತೆ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಬಳಿಕ ಕಷ್ಟ ಹೇಳಿಕೊಂಡ ಯುವತಿಗೆ ರಾಘವೇಂದ್ರ ಹಂತ ಹಂತವಾಗಿ ಬರೋಬ್ಬರಿ 25 ಲಕ್ಷ ರೂ ನೀಡಿದ್ದಾರೆ. ಬಳಿಕ ಹಣ ವಾಪಸ್ ಕೇಳಿದರೆ ಯುವತಿ ನೀಡಿಲ್ಲ. ಹೀಗಾಗಿ ರಾಘವೇಂದ್ರ ಆತ್ಮಹತ್ಯೆ ಯತ್ನಿಸಿದ್ದರು.

ಇದನ್ನೂ ಓದಿ: ಗದಗ: ಮಾಜಿ ಪ್ರೇಮಿಯಿಂದ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ ಮೇಲ್, ಮದುವೆ ಸಂಭ್ರಮದಲ್ಲಿದ್ದ ಯುವತಿ ಆತ್ಮಹತ್ಯೆ

ಇನ್ನು ಹಣ ಪಡೆದ ಯುವತಿ ಸಿಪಿಐ ಸಿದ್ದಪ್ಪ ಬೀಳಗಿ ಸಂಬಧಿಕಳಂತೆ. ಈ ವಿಚಾರಕ್ಕೆ ದೂರು ನೀಡಲು ಬಂದ ರಾಘವೇಂದ್ರಗೆ ಸಿಪಿಐನಿಂದ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾರೆ. ನನ್ನ ಮೇಲೆ ಹಲ್ಲೆ ಮಾಡಿದ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಾಹಿತಿ ಹಕ್ಕಿನಡಿ ಸಿಸಿಟಿವಿ ದೃಶ್ಯಗಳು ನೀಡುವಂತೆ ಕೇಳಿದ್ದೇನೆ ಎಂದಿದ್ದಾರೆ. ಆಗ ನಿನ್ನ ಮೇಲೆ ರೇಪ್ ಕೇಸ್ ಹಾಕಿಸ್ತಿನಿ ಅಂತ ಸಿಪಿಪಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ.

ಬೆದರಿಕೆ ಹಾಕಿ ಲಂಚ ಪಡೆದಿದ್ರೆ‌ ಸಿಪಿಐ ವಿರುದ್ಧ ಕ್ರಮ ಎಂದ ಎಸ್​​ಪಿ ಬಿಎಸ್ ನೇಮಗೌಡ

ಘಟನೆ ಬಗ್ಗೆ ಗದಗ ಎಸ್​​ಪಿ ಬಿಎಸ್ ನೇಮಗೌಡ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಈ ವಿಷಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಬೆದರಿಕೆ, ಲಂಚ ಪಡೆದಿರುವ ಆರೋಪ ಸುಳ್ಳು. ಆ ಮಹಿಳೆಗೆ ನೀಡಿದ ಹಣ ಕೊಡಿಸುವಂತೆ ನಮ್ಮ ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದ. ಹಣ ಕೊಡಿಸದ ಕಾರಣ ಅಧಿಕಾರಿಗಳ ವಿರುದ್ಧ ಆರೋಪ ಮಾಡುತ್ತಿದ್ದಾನೆ. ಈ ಬಗ್ಗೆ ನರಗುಂದ ಡಿವೈಎಸ್​​ಪಿ ನೇತೃತ್ವದಲ್ಲಿ ತನಿಖೆ ಮಾಡಿಸುತ್ತೇನೆ. ಒಂದು ವೇಳೆ ಸಿಪಿಐ ಬೆದರಿಕೆ ಹಾಕಿ, ಲಂಚ ಪಡೆದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್